ಆ್ಯಪ್ನಗರ

ಜಿಲ್ಲಾಸುದ್ದಿ: ಮೂಡಿಗೆರೆ ತಾಲೂರಕಿನ ಹಲವಡೆ ಕಂಪಿಸಿದ ಭೂಮಿ, ಧರೆಯೊಳಗೆ ಗುಡುಗಿನ ಶಬ್ದ?

ಮಂಗಳವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ಘಟನೆಯ ಸಂಕ್ಷಿಪ್ತ ವಿವರ ಈ ಕೆಳಗಿನಂತಿವೆ.

Vijaya Karnataka Web 5 Sep 2019, 6:22 pm
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಲವು ಕಡೆ ಭೂಮಿ ನಡುಗಿದ ಅನುಭವವಾಗಿದೆ. ಇಂದು (ಗುರುವಾರ) ಸಂಜೆ 4.30ರ ಸುಮಾರಿಗೆ ಭೈರಾಪುರದಿಂದ ಕೊಟ್ಟಿಗೆಹಾರದವರೆಗೂ ಭೂಮಿ ಕಂಪಿಸಿದೆ ಎಂದು ಹೇಳಲಾಗುತ್ತಿದೆ. ಭೂಮಿಯೊಳಗೆ ಗುಡುಗಿನಂತೆ ಶಬ್ದ ಕೇಳಿ ಬಂದಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.
Vijaya Karnataka Web chikkamagaluru


ರಾಮನಗರ: ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನ ಖಂಡಿಸಿ ಕನಕಪುರದಲ್ಲಿ ವಿನೂತನ ಪ್ರತಿಭಟನೆ ಆರಂಭವಾಗಿದ್ದು, ಪಟ್ಟಣದ ನಿವಾಸಿ ರಿಜ್ವಾನ್ ಎಂಬಾತ ಕೇಶ ಮುಂಡನ ಮಾಡಿಸಿಕೊಂಡು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತಿಥಿ ನಡೆಸಿದ್ದೇನೆಂದು ಆಕ್ರೋಶ ವ್ಯಕ್ತಪಡಿಸಿದ್ದಾನೆ. ದೇಶ ದ್ರೋಹಿ ಅಮಿತ್ ಶಾ ಮೃತಪಟ್ಟಿದ್ದು, ದೇಶ ಪ್ರೇಮ ಪ್ರದರ್ಶಿಸುವ ಸಲುವಾಗಿ ಕೇಶ ಮುಂಡನ ಮಾಡಿಸಿಕೊಂಡಿದ್ದೇನೆ. ದೇಶಕ್ಕೆ ಒಳ್ಳೆಯದಾಗಲಿ ಎಂದು ಯುವಕ ಹೇಳಿಕೊಂಡಿದ್ದಾನೆ.


ರಾಮನಗರ ಬಂದ್: ಕನಕಪುರದಲ್ಲಿ ಕೈ ಕಾರ್ಯಕರ್ತರಿಂದ ಮೋದಿ, ಅಮಿತ್ ಶಾ ತಿಥಿ ಊಟ

ರಾಮನಗರ: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಹಾಗೂ ಜೆಡಿಎಸ್ ಕಾರ್ಯಕರ್ತರು ಇಂದು ರಾಮನಗರ ಜಿಲ್ಲೆ ಸಂಪೂರ್ಣ ಬಂದ್‌ಗೆ ಕರೆ ನೀಡಿದ್ದಾರೆ.ಜಿಲ್ಲೆಯ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕುಗಳಲ್ಲಿ ಬಂದ್ ಜಾರಿಯಲ್ಲಿರಲಿದೆ. ಬೆಂಗಳೂರು- ಮೈಸೂರು ಹೆದ್ದಾರಿ ಸಂಚಾರದಲ್ಲಿ‌ ಅಸ್ತವ್ಯಸ್ತ ಉಂಟಾಗುವ ಸಾಧ್ಯತೆ ಇದ್ದು ಮುಂಜಾಗ್ರತಾ ಕ್ರಮವಾಗಿ ಇಂದು ಕೂಡ ಶಾಲಾ ಕಾಲೇಜಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ