ಆ್ಯಪ್ನಗರ

ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮಾಡಿದ ಸಿದ್ದರಾಮಯ್ಯ: ಮಾತಾಡು ಬಿಜೆಪಿ ಮಾತಾಡು ಎಂದು ಟೀಕೆ

ಆಪರೇಷನ್ ಕಮಲದ ಅಡಿಯೋ‌ ಸಂಭಾಷಣೆ ಬಗ್ಗೆ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ. ಅಲ್ಲದೆ, ವಿಪಕ್ಷ ನಾಯಕರ ಸಾವನ್ನು ಬಿಜೆಪಿ ಸಂಭ್ರಮಿಸುತ್ತದೆ ಎಂದೂ ಟೀಕೆ ಮಾಡಿದ್ದಾರೆ.

Vijaya Karnataka Web 13 Feb 2019, 1:04 pm
ಆಪರೇಷನ್‌ ಕಮಲದ ಆಡಿಯೇ ಟೇಪ್‌ ಬಹಿರಂಗವಾದ ಬೆನ್ನಲ್ಲೇ ಕಾಂಗ್ರೆಸ್ ಹಾಗೂ ಜೆಡಿಎಸ್‌ ಪಕ್ಷಗಳು ಬಿಜೆಪಿ ವಿರುದ್ದ ಸತತ ದಾಳಿ ಮಾಡುತ್ತಿದೆ. ಇದೇ ರೀತಿ, ಯಡಿಯೂರಪ್ಪ ಮಾತುಕತಡೆಯ ಆಡಿಯೋ ಸಿಡಿ ಬಿಡುಗಡೆಯ ಬಳಿಕ ಮಾಜಿ ಯಡಿಯೂರಪ್ಪ ರಾಜೀನಾಮೆಗೆ ಆಗ್ರಹಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬುಧವಾರ ( ಫೆಬ್ರವರಿ 13,2019)ರಂದು ಬಿಜೆಪಿ ವಿರುದ್ಧ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.
Vijaya Karnataka Web Siddaramaiah


'ಆಪರೇಷನ್ ಕಮಲ'ದ ಅಡಿಯೋ‌ ಸಂಭಾಷಣೆ ಆಘಾತಕಾರಿಯಾಗಿದೆ. ಇಡೀ ದೇಶದ ಮುಂದೆ ಬಿಜೆಪಿಯ ಬಣ್ಣ ಬಯಲಾಗಿದೆ. ಸ್ವಚ್ಚ ಬಿಜೆಪಿಯ ಸಜ್ಜನರು, ಸಂಘ ಪರಿವಾರದ ಸಂಸ್ಕೃತಿ ರಕ್ಷಕರು ಯಾವ ಬಿಲದಲ್ಲಿ ಅಡಗಿದ್ದಾರೆ? #ಮಾತಾಡುಬಿಜೆಪಿಮಾತಾಡು. #OperationKamala ಎಂಬ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿಕೊಂಡು ಟ್ವೀಟ್ ಮಾಡಿದ್ದಾರೆ.


ಅಲ್ಲದೆ, ವಿರೋಧಿಗಳ ಸಾವು ಬಯಸುವಷ್ಟು ರಾಜಕಾರಣಿಗಳು ಅಧೋಗತಿಗೆ ಇಳಿಯಬಾರದು.‌ ಈ ದುರ್ಬುದ್ದಿ ಬಿಜೆಪಿ ರಕ್ತದಲ್ಲಿದೆ. ಹಿಂದೆ ಜನಾರ್ಧನ ರೆಡ್ಡಿ
ನನ್ನ ಕುಟುಂಬದ ಬಗ್ಗೆ ಹೇಳಿದ್ದ ಮಾತನ್ನೇ ಈಗ ರಾಜ್ಯ ಬಿಜೆಪಿ ನಾಯಕರು ದೇವೇಗೌಡ ಕುಟುಂಬದ ಬಗ್ಗೆ ಹೇಳಿದ್ದಾರೆ. ಖಂಡನೀಯ ನಡವಳಿಕೆ ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್‌ಗೂ ಸಹ #ಮಾತಾಡುಬಿಜೆಪಿಮಾತಾಡು. #OperationKamala ಎಂಬ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿಕೊಂಡಿದ್ದಾರೆ.


ಅಲ್ಲದೆ, ಇಂಗ್ಲೀಷ್‌ನಲ್ಲೂ ಎರಡು ಟ್ವೀಟ್‌ಗಳನ್ನು ಮಾಡಿರುವ ಸಿದ್ದರಾಮಯ್ಯ, ಬಿಜೆಪಿ ಜತೆಗೆ ಸಂಘ ಪರಿವಾರದ ವಿರುದ್ಧವೂ ಟೀಕೆ ಮಾಡಿದ್ದಾರೆ. ಮಹಾತ್ಮ ಗಾಂಧಿ ಸಾವನ್ನು ಸಂಭ್ರಮಿಸಿದ್ದ ಬಿಜೆಪಿ, ಈಗ ವಿಪಕ್ಷ ನಾಯಕರ ಸಾವಿನ ಬಗ್ಗೆ ಸಂಭ್ರಮ ಪಡುತ್ತಿದೆ ಎಂದು ಸರಣಿ ಟ್ವೀಟ್‌ಗಳನ್ನು ಮಾಡಿ ಬಿಜೆಪಿ, ಸಂಘ ಪರಿವಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜ್ಯ ಬಜೆಟ್ ಅಧಿವೇಶನ, ಸದನದಲ್ಲೂ ಬಿಜೆಪಿ ವಿರುದ್ಧ ಟೀಕೆ ಮಾಡುತ್ತಿರುವ ಸಿದ್ದರಾಮಯ್ಯ, ಆಡಿಯೋ ಟೇಪ್ ಹಗರಣದ ಬಗ್ಗೆ ಎಸ್‌ಐಟಿ ತನಿಖೆಗೆ ಸತತವಾಗಿ ಆಗ್ರಹಿಸಿದ್ದಾರೆ. ಅಲ್ಲದೆ, ಯಡಿಯೂರಪ್ಪ ನುಡಿದಂತೆ ನಡೆದು ರಾಜೀನಾಮೆ ನೀಡಲಿ ಎಂದು ಸಹ ಹಲವು ಬಾರಿ ಮಾಧ್ಯಮದೆದುರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಲವು ದಿನಗಳಿಂದ ಟೀಕೆ ಮಾಡುತ್ತಲೇ ಬಂದಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ