ಆ್ಯಪ್ನಗರ

ಬೆಳಗಾವಿಯಲ್ಲಿ ನಡೆಯಲ್ಲ ಅಧಿವೇಶನ- ಸಿಎಂ ಅಧಿಕೃತ ಘೋಷಣೆ

ಬೆಳಗಾವಿಯಲ್ಲಿ ಈ ಬಾರಿ ನಡೆಯಬೇಕಾಗಿದ್ದ ಚಳಿಗಾಲದ ಅಧಿವೇಶನವನ್ನು ಬೆಂಗಳೂರಿಗೆ ಸ್ಥಳಾಂತರ ಮಾಡುವ ಕುರಿತಾಗಿ ರಾಜ್ಯ ಸರಕಾರ ಅಧಿಕೃತ ನಿರ್ಧಾರ ಕೈಗೊಂಡಿದ್ದು ಸಿಎಂ ಬಿ.ಎಸ್ ಯಡಿಯೂರಪ್ಪ ಈ ಕುರಿತಾಗಿ ಆದೇಶ ನೀಡಿದ್ದಾರೆ.

Vijaya Karnataka Web 19 Sep 2019, 8:25 pm
ಬೆಂಗಳೂರು: ಪ್ರವಾಹ ಕಾರಣಕ್ಕಾಗಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಬೇಕಾಗಿದ್ದ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ. ಈ ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧಿಕೃತ ಆದೇಶ ಹೊರಡಿಸಿದ್ದಾರೆ.
Vijaya Karnataka Web cm bsy


ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಭೀಕರ ಪ್ರವಾಹ ಉಂಟಾಗಿತ್ತು. ಪ್ರವಾಹದಿಂದ ವ್ಯಾಪಕ ಹಾನಿ ಉಂಟಾಗಿದ್ದು ಹಲವಾರು ಜನರು ಆಸ್ತಿ ಪಾಸ್ತಿ ಕಳೆದುಕೊಂಡಿದ್ದಾರೆ. ಪ್ರವಾಹ ಹಾಗೂ ಅತಿವೃಷ್ಟಿಯಿಂದ ಸುಮಾರು 872 ಗ್ರಾಮಗಳು ಬಾಧಿತಗೊಂಡಿದ್ದು 4.15 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ.

ಇದಲ್ಲದೆ 70 ಸಾವಿರಕ್ಕಿಂತಲೂ ಹೆಚ್ಚಿನ ಮನೆಗಳಿಗೆ ಹಾನಿಯಾಗಿದ್ದು ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಉಂಟಾಗಿದೆ. ಹಾಗಾಗಿ ಈ ಬಾರಿಯು ಚಳಿಗಾಲದ ಅಧಿವೇಶನವನ್ನು ಬೆಂಗಳೂರಿಗೆ ಸ್ಥಳಾಂತರ ಮಾಡುವ ನಿರ್ಧಾರವನ್ನು ರಾಜ್ಯ ಸರಕಾರ ಕೈಗೊಂಡಿದೆ.

ಪ್ರವಾಹ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸುವ ಕಾರ್ಯದಲ್ಲಿ ನಿರತರಾಗಿರುವ ವಿಭಾಗ ಮಟ್ಟದ ಅಧಿಕಾರಿಗಳು ಅಧಿವೇಶನದ ಪೂರಕ ಕೆಲಸ ಕಾರ್ಯಗಳಲ್ಲಿ ತೊಡಗುವುದರಿಂದ ಸಂಕಷ್ಟಕ್ಕೀಡಾದ ಜನರಿಗೆ ಪರಿಹಾರ ಕಾರ್ಯಚರಣೆಗಳಿಗೆ ಅಡಚಣೆ ಉಂಟಾಗಬಾರದು ಎಂಬುವುದು ಸರಕಾರ ನಿರ್ಧಾರದ ಹಿಂದಿನ ಉದ್ದೇಶವಾಗಿದೆ.

ಸರಕಾರದ ಈ ನಿರ್ಧಾರವನ್ನು ಕಾಂಗ್ರೆಸ್ ಖಂಡಿಸಿದ್ದು ಸಂತ್ರಸ್ತ ಜನರ ಪ್ರತಿಭಟನೆಗೆ ಭಯಬಿದ್ದು ಅಧಿವೇಶನ ಸ್ಥಳಾಂತರ ನಿರ್ಧಾರವನ್ನು ರಾಜ್ಯ ಸರಕಾರ ಕೈಗೊಂಡಿದೆ ಎಂದು ಆರೋಪಿಸಿದೆ. ಈ ನಡುವೆ ಸೆ. 24 ರಂದು ಬೆಳಗಾವಿಯಲ್ಲಿ ಪ್ರವಾಹ ಪರಿಹಾರ ನಿರ್ವಹಣೆಯಲ್ಲಿ ರಾಜ್ಯ ಸರಕಾರ ಎಡವಿದೆ ಎಂದು ಆರೋಪಿಸಿ ಬೃಹತ್ ಪ್ರತಿಭಟನೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ