ಆ್ಯಪ್ನಗರ

ಹುದ್ದೆ ಮಾರ್ಪಾಟು, ಬಿಎಂಟಿಸಿ ಅಧ್ಯಕ್ಷರಾಗಿ ನಂದೀಶ್‌ ರೆಡ್ಡಿ ನೇಮಕ

ಇದಕ್ಕೂ ಮುಂಚೆ ನಂದೀಶ್‌ ರೆಡ್ಡಿ ಅವರನ್ನು ಬಿಎಂಟಿಸಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಆದರೆ ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲು ಅವರು ಒಪ್ಪದ ಕಾರಣ ಅಧ್ಯಕ್ಷರಾಗಿ ನೇಮಿಸಿ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ.

Vijaya Karnataka 17 Oct 2019, 9:13 pm

ಬೆಂಗಳೂರು: ಕೆ.ಆರ್‌ ಪುರಂ ಮಾಜಿ ಶಾಸಕ ನಂದೀಶ್‌ ರೆಡ್ಡಿ ಅವರನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಯ ಅಧ್ಯಕ್ಷರನ್ನಾಗಿ ಸರಕಾರ ನೇಮಿಸಿದೆ.
Vijaya Karnataka Web Nadish Reddy


ಇದಕ್ಕೂ ಮುಂಚೆ ಇವರನ್ನು ಬಿಎಂಟಿಸಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಆದರೆ ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲು ನಂದೀಶ್‌ ರೆಡ್ಡಿ ಒಪ್ಪದ ಕಾರಣ ಅಧ್ಯಕ್ಷರಾಗಿ ನೇಮಿಸಿ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ.

ಸುಪ್ರೀಂಕೋರ್ಟ್‌ ತೀರ್ಪು ಬಳಿಕ ಕೆ.ಆರ್‌. ಪುರಂ ಅನರ್ಹ ಶಾಸಕ ಬೈರತಿ ಬಸವರಾಜು ಬಿಜೆಪಿ ಸೇರಿ ಡಿ. 5ರ ಉಪ ಚುನಾವಣೆಯಲ್ಲಿಸ್ಪರ್ಧಿಸುವ ಸಾಧ್ಯತೆಗಳಿವೆ. ಹೀಗಾಗಿ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಪರಾಜಿತ ಅಭ್ಯರ್ಥಿಗಳನ್ನು ಪಕ್ಷದಲ್ಲೇ ಹಿಡಿದಿಟ್ಟುಕೊಳ್ಳಲು ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ಪರಾಜಿತರು ಮಂಡಳಿ ಅಧಿಕಾರಕ್ಕೇರುವುದು ಡೌಟು, ಇಕ್ಕಟ್ಟಿನಲ್ಲಿ ಬಿಜೆಪಿ

ಇದೇ ಹಿನ್ನೆಲೆಯಲ್ಲಿ ನಂದೀಶ್‌ ರೆಡ್ಡಿ ಅವರಿಗೂ ಬಿಎಂಟಿಸಿಯ ಉಪಾಧ್ಯಕ್ಷ ಹುದ್ದೆ ನೀಡಲಾಗಿತ್ತು. ಆದರೆ ಅವರು ಅದನ್ನು ಸ್ವೀಕರಿಸಲು ಹಿಂದೇಟು ಹಾಕಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಈಗ ಅಧ್ಯಕ್ಷಗಿರಿ ನೀಡಲಾಗಿದೆ. ಕಳೆದ ಬಾರಿ ಸೋತ ಹಲವರು ತಮಗೆ ನೀಡಿದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಇದರಲ್ಲಿ ಇದೀಗ ಹುದ್ದೆ ಮಾರ್ಪಾಟು ಮಾಡಿ ನಂದೀಶ್‌ ರೆಡ್ಡಿ ಅವರನ್ನು ಮನವೊಲಿಸುವಲ್ಲಿ ಬಿಜೆಪಿ ನಾಯಕರು ಸಫಲರಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ