ಆ್ಯಪ್ನಗರ

ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ: ದೆಹಲಿಗೆ ತೆರಳುವ ಆಸೆ ಕೈಬಿಟ್ಟ ಸಿಎಂ

ರಾಜ್ಯ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ ಆಗುವ ಸಾಧ್ಯತೆ ಹೆಚ್ಚಾಗಿದೆ. ಸಿಎಂ ಬಿಎಸ್‌ವೈ ಸಂಪುಟ ವಿಸ್ತರಣೆ ಕುರಿತಾಗಿ ದೆಹಲಿ ಭೇಟಿ ಆಸೆ ಕೈ ಬಿಟ್ಟಿದ್ದು ಅಮಿತ್ ಶಾ ರಾಜ್ಯ ಪ್ರವಾಸಕ್ಕೆ ಬಂದ ಸಂದರ್ಭದಲ್ಲೇ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ.

Vijaya Karnataka Web 14 Jan 2020, 10:15 pm
ಬೆಂಗಳೂರು: ಸಂಪುಟ ವಿಸ್ತರಣೆ ಸಂಬಂಧ ದಿಲ್ಲಿಗೆ ತೆರಳಿ ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸುವ ಪ್ರಯತ್ನ ಹಾಗೂ ಆಸೆ ಎರಡನ್ನೂ ಕೊನೆಗೂ ಸಿಎಂ ಬಿ.ಎಸ್‌.ಯಡಿಯೂರಪ್ಪ ಕೈಬಿಟ್ಟಂತೆ ಕಾಣುತ್ತಿದೆ.
Vijaya Karnataka Web karnataka government cabinet expansion will delayed
ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ: ದೆಹಲಿಗೆ ತೆರಳುವ ಆಸೆ ಕೈಬಿಟ್ಟ ಸಿಎಂ


ಒಂದು ತಿಂಗಳಿಗೂ ಹೆಚ್ಚು ಕಾಲದಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಅಮಿತ್‌ ಶಾ ಭೇಟಿಗಾಗಿ ಸಿಎಂ ಕಾಯುತ್ತಲೇ ಇದ್ದಾರೆ. ಆದರೆ ಹಲವು ಕಾರಣಗಳಿಂದ ಇದುವರೆಗೂ ಸಾಧ್ಯವಾಗಿಲ್ಲ. ಹೀಗಾಗಿ ತೀವ್ರ ಬೇಸರಗೊಂಡಿರುವ ಜ.17 ರಂದು ರಾಜ್ಯಕ್ಕೆ ಬಂದಾಗಲೇ ಅಮಿತ್‌ ಶಾ ಜತೆ ಚರ್ಚೆ ಮಾಡುತ್ತೇನೆ ಎಂದು ಹೇಳುವ ಮೂಲಕ ದಿಲ್ಲಿ ಭೇಟಿ ಪ್ರಯತ್ನ ಕೈಚೆಲ್ಲಿದ್ದಾರೆ.

ಮುಖ್ಯಮಂತ್ರಿಯವರು ಸೋಮವಾರ ಬೆಳಿಗ್ಗೆ ಒಂದೆರಡು ದಿನಗಳಲ್ಲಿ ದಿಲ್ಲಿಗೆ ತೆರಳುವುದಾಗಿ ಹೇಳಿದ್ದರು. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ''ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ, ಅಮಿತ್‌ ಶಾ ಇಲ್ಲಿಗೆ ಬಂದಾಗ ಚರ್ಚಿಸುವೆ,'' ಎಂದಷ್ಟೇ ಹೇಳಿದರು.

ಸಿಎಂ ದೆಹಲಿಗೆ ತೆರಳುವ ಆಸೆ ಕೈ ಬಿಟ್ಟ ಕಾರಣದಿಂದಾಗಿ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ ಆಗುವ ಸಾಧ್ಯತೆ ಹೆಚ್ಚಾಗಿದೆ. ಇದು ನೂತನ ಬಿಜೆಪಿ ಶಾಸಕರ ಅಸಮಧಾನಕ್ಕೆ ಕಾರಣವಾಗಿದೆ.

ಈ ನಡುವೆ ಮೂಲ ಬಿಜೆಪಿ ಶಾಸಕರು ಸಚಿವ ಸ್ಥಾನಕ್ಕೆ ಲಾಬಿ ನಡೆಸುತ್ತಿದ್ದಾರೆ. ಶಾಸಕ ಮುರುಗೇಶ್ ನಿರಾಣಿ ವಚನಾನಂದ ಸ್ವಾಮೀಜಿ ಮೂಲಕ ಲಾಬಿ ನಡೆಸುತ್ತಿದ್ದು ಮಂಗಳವಾರ ನಡೆದ ಕಾರ್ಯಕ್ರಮವೊಂದರಲ್ಲಿ ವೇದಿಕೆಯಲ್ಲಿ ಸಚಿವ ಸ್ಥಾನ ನೀಡುವಂತೆ ಬೇಡಿಕೆ ಇಟ್ಟಾಗ ಸಿಎಂ ಗರಂ ಆದ ಪ್ರಸಂಗವೂ ನಡೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ