ಆ್ಯಪ್ನಗರ

ಡಿಕೆಶಿ ಪದಗ್ರಹಣ ಕಾರ್ಯಕ್ರಮಕ್ಕೆ ಬಿಎಸ್‌ವೈ ಅನುಮತಿ, ಆದ್ರೆ ಕೆಲವು ಷರತ್ತುಗಳು ಅನ್ವಯ!

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಕೊನೆಗೂ ಅನುಮತಿ ನೀಡಿದೆ. ಆದರೆ ಕೆಲವೊಂದು ಶರತ್ತುಗಳ ಮೂಲಕ ಅನುಮತಿಯನ್ನು ನೀಡಲಾಗಿದೆ. ಇದರ ವಿವರ ಇಲ್ಲಿದೆ.

Vijaya Karnataka Web 11 Jun 2020, 11:55 am
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಅನುಮತಿಯನ್ನು ನೀಡಿದೆ. ಕೋವಿಡ್‌-19 ಮಾರ್ಗಸೂಚಿಯ ಪ್ರಕಾರ ಜೂನ್ 14 ರಂದು ನಡೆಯಬೇಕಾಗಿದ್ದ ಕಾರ್ಯಕ್ರಮಕ್ಕೆ ಅನುಮತಿಯನ್ನು ನಿರಾಕರಣೆ ಮಾಡಲಾಗಿತ್ತು. ಸರ್ಕಾರದ ಈ ನಡೆಯನ್ನು ಕಾಂಗ್ರೆಸ್ ಖಂಡಿಸಿತ್ತು. ಇದೀಗ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಕಾರ್ಯಕ್ರಮ ನಡೆಸಲು ಅನುಮತಿ ನೀಡಿದ್ದಾರೆ. ಆದರೆ ಕೆಲವೊಂದು ಶರತ್ತುಗಳನ್ನು ಪಾಲನೆ ಮಾಡುವಂತೆ ಸೂಚನೆ ನೀಡಿದ್ದಾರೆ.
Vijaya Karnataka Web dk 3


ಬೆಂಗಳೂರಿನಲ್ಲಿ ಮಾತನಾಡಿದ ಅವರು ಡಿಕೆ ಶಿವಕುಮಾರ್ ಅವರು ಯಾವಾಗ ಬೇಕಾದರು ಪದಗ್ರಹಣ ಕಾರ್ಯಕ್ರಮವನ್ನು ಮಾಡಲಿ. ನಮ್ಮದೇನು ಅಭ್ಯಂತರವಿಲ್ಲ. ಈ ಕುರಿತಾಗಿ ಡಿಕೆಶಿ ಅವರಲ್ಲಿ ದೂರವಾಣಿ ಮೂಲಕ ಮಾತನಾಡಿದ್ದೇನೆ ಎಂದರು. ಕೊರೊನಾ ಸೋಂಕು ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸಬಾರದು. ಈ ನಿಟ್ಟಿನಲ್ಲಿ ಎಲ್ಲಾ ಮುನ್ನೆಚ್ಚರಿಕೆಗಳನ್ನು ವಹಿಸುವುದಾಗಿ ಅವರು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಕೊಟ್ಟ ಕುದುರೆಯನ್ನು ಏರದವನು ವೀರನೂ ಅಲ್ಲ, ಶೂರನೂ ಅಲ್ಲ! ಡಿಕೆಶಿಗೆ ರೇಣುಕಾಚಾರ್ಯ ಟಾಂಗ್‌

ಡಿಕೆಶಿ ಪದಗ್ರಹಣ ಕಾರ್ಯಕ್ರಮಕ್ಕೆ ಎರಡು ಬಾರಿ ಅನುಮತಿಯನ್ನು ನಿರಾಕರಣೆ ಮಾಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಜೂನ್ 14 ರಂದು ರಾಜ್ಯದ್ಯಂತ ಆನ್‌ಲೈನ್ ಮೂಲಕ ಕಾರ್ಯಕ್ರಮ ನಡೆಸಲು ಡಿಕೆಶಿ ಸಿದ್ದತೆ ಮಾಡಿಕೊಂಡಿದ್ದರು.

ರಾಜ್ಯ ಸರ್ಕಾರದ ಅನುಮತಿ ಬಳಿಕವಷ್ಟೇ ಪದಗ್ರಹಣ ಕಾರ್ಯಕ್ರಮ, ಡಿಕೆಶಿ ಸ್ಪಷ್ಟನೆ

ಆದರೆ ಸರ್ಕಾರ ಕೊನೆಯ ಗಳಿಗೆಯಲ್ಲಿ ಅನುಮತಿ ನಿರಾಕರಣೆ ಮಾಡಿತ್ತು. ಸರ್ಕಾರದ ನಡೆಯನ್ನು ರಾಜಕೀಯ ದುರುದ್ದೇಶದ ನಡೆ ಎಂದು ಕಾಂಗ್ರೆಸ್ ಖಂಡಿಸಿತ್ತು. ಕೇಂದ್ರ ಗೃಹ ಸಚಿವ ಅಮಿತ್ ಶಾ ವರ್ಚುವಲ್ ರ್ಯಾಲಿಗೆ ಅನುಮತಿ ನೀಡೋದಾದರೆ ನಮಗೆ ಯಾಕಿಲ್ಲ ಎಂದು ಪ್ರಶ್ನಿಸಿತ್ತು. ಅಲ್ಲದೆ ಕಾನೂನು ಹೋರಾಟವನ್ನು ನಡೆಸುವ ಎಚ್ಚರಿಕೆಯನ್ನು ನೀಡಿತ್ತು.

ಈ ವಿಚಾರ ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಅನುಮತಿಯನ್ನು ನೀಡಿದ್ದಾರೆ. ಆದರೆ ನಿಗದಿತ ದಿನಾಂಕದಲ್ಲೇ ಕಾರ್ಯಕ್ರಮ ನಡೆಯುತ್ತಾ ಎಂಬುವುದು ಇನ್ನೂ ಅಧಿಕೃತಗೊಂಡಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ