ಆ್ಯಪ್ನಗರ

ರಾಜ್ಯದಲ್ಲಿ ಮುಂದುವರಿದ ಬರ; ಆಗಸ್ಟ್ ಅಂತ್ಯದವರೆಗೆ ಟ್ಯಾಂಕರ್‌ಗಳಲ್ಲಿ ನೀರು ಪೂರೈಸಲು ಸರಕಾರ ಆದೇಶ

ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಆಗಸ್ಟ್ ಅಂತ್ಯದವರೆಗೆ ಟ್ಯಾಂಕರ್‌ಗಳಲ್ಲಿ ನೀರು ಪೂರೈಸಲು ರಾಜ್ಯ ಸರಕಾರ ಆದೇಶ ನೀಡಿದೆ. ಜೂನ್ 2019ರವರೆಗೆ ಇದ್ದ ಗಡುವನ್ನು ವಿಸ್ತರಿಸಲಾಗಿದೆ.

Vijaya Karnataka Web 1 Aug 2019, 2:48 pm
ಮುಂಗಾರು ಆರಂಭವಾಗಿ ಎರಡು ತಿಂಗಳು ಕಳೆಯುತ್ತಾ ಬಂದರೂ ರಾಜ್ಯದಲ್ಲಿ ನಿರೀಕ್ಷಿತ ಮಳೆಯಾಗಿಲ್ಲ. ಈ ಹಿನ್ನೆಲೆ ರಾಜ್ಯದಲ್ಲಿ ಬರ ಪರಿಸ್ಥಿತಿ ಉದ್ಭವಿಸಿದೆ. ಈ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಟ್ಯಾಂಕರ್‌ ಮೂಲಕ ಸರಬರಾಜು ಮಾಡುವ ಅವಧಿಯನ್ನು ವಿಸ್ತರಿಸಲು ರಾಜ್ಯ ಸರಕಾರ ಆದೇಶ ನೀಡಿದೆ.
Vijaya Karnataka Web water tanker


ಪ್ರಸ್ತುತ ಬರ ಪರಿಸ್ಥಿತಿಯ ತೀಬವ್ರತೆ ಹೆಚ್ಚಾಗಿರುವುದನ್ನು ಗಮನಿಸಿದ ರಾಜ್ಯ ಸರಕಾರವು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲು ಇರುವ ನಿರ್ಬಂಧವನ್ನು ಸಡಿಲಿಸಿ ಆಗಸ್ಟ್‌ - 2019 ಅಂತ್ಯದವರೆಗೆ ಸರಬರಾಜು ಮಾಡಲು ವಿಸ್ತರಿಸಲಾಗಿದೆ.

ಅಲ್ಲದೆ, ನೀರು ಸರಬರಾಜು ಉದ್ದೇಶಕ್ಕೆ ತಗಲುವ ವೆಚ್ಚವನ್ನು ಎಸ್‌.ಡಿ.ಆರ್‌.ಎಫ್‌ ಅಡಿ ಈಗಾಗಲೇ ಬಿಡುಗಡೆಯಾದ ಅನುದಾನದಿಂದ ಭರಿಸುವಂತೆಯೂ ಸರಕಾರ ತಿಳಿಸಿದೆ. ಜತೆಗೆ, ಟ್ಯಾಂಕರ್ ಮೂಲಕ ನೀರು ಪೂರೈಕೆ ಬಗ್ಗೆ ಜಿಲ್ಲಾಧಿಕಾರಿಗಳು ಪರಿಶೀಲಿಸಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದಂತೆ ಕ್ರಮ ಕೈಗೊಳ್ಳಲು ಸೂಚಿಸಿದೆ.


ಈ ಸಂಬಂಧ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಎಲ್ಲಾ ಪ್ರಾದೇಶಿಕ ಆಯುಕ್ತರುಗಳು, ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ.

2018 - 19ನೇ ಸಾಲಿನಲ್ಲಿ ರಾಜ್ಯದಲ್ಲಿ ಮಳೆ ಕೊರತೆಯಿಂದ ಮುಂಗಾರು ಹಂಗಾಮಿನಲ್ಲಿ 100 ತಾಲೂಕುಗಳನ್ನು ಹಾಗೂ ಹಿಂಗಾರು ಹಂಗಾಮಿನಲ್ಲಿ 156 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿತ್ತು. ಬಳಿಕ ಮೇ 2019 ರವರೆಗೆ ವಿಸ್ತರಿಸಿದ್ದ ಆದೇಶವನ್ನು ಮತ್ತೆ ಜೂನ್ ಅಂತ್ಯದವರೆಗೆ ವಿಸ್ತರಣೆ ಮಾಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ