ಆ್ಯಪ್ನಗರ

'ಅಗ್ರಿ ಗೋಲ್ಡ್‌' ಕಂಪನಿಯ ಎಲ್ಲ ಆಸ್ತಿ ಮಾರಾಟಕ್ಕೆ ಕ್ರಮ ಕೈಗೊಂಡ ರಾಜ್ಯ ಸರಕಾರ

ಅಗ್ರಿ ಗೋಲ್ಡ್‌ ಕಂಪನಿಯಿಂದ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಎಲ್ಲಸ್ಥಿರ, ಚರ ಆಸ್ತಿಗಳನ್ನು ಕರ್ನಾಟಕ ಠೇವಣಿದಾರರ ಹಿತರಕ್ಷಣಾ ಕಾಯಿದೆ 2004ರ ಅನ್ವಯ ಸ್ವಾಧೀನಪಡಿಸಿಕೊಂಡಿದ್ದು, ಆ ಆಸ್ತಿಗಳ ಮಾರಾಟಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.

Vijaya Karnataka Web 15 Jan 2020, 10:45 am
ಬೆಂಗಳೂರು: ಅಗ್ರಿ ಗೋಲ್ಡ್‌ ಕಂಪನಿಯಿಂದ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಎಲ್ಲಸ್ಥಿರ, ಚರ ಆಸ್ತಿಗಳನ್ನು ಕರ್ನಾಟಕ ಠೇವಣಿದಾರರ ಹಿತರಕ್ಷಣಾ ಕಾಯಿದೆ 2004ರ ಅನ್ವಯ ಸ್ವಾಧೀನಪಡಿಸಿಕೊಂಡಿದ್ದು, ಆ ಆಸ್ತಿಗಳ ಮಾರಾಟಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.
Vijaya Karnataka Web agri gold


ಮಂಗಳೂರಿನ ಗ್ರಾಹಕರು ಮತ್ತು ಏಜೆಂಟರ ಕಲ್ಯಾಣ ಒಕ್ಕೂಟ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮಂಗಳವಾರ ಸಿಜೆ ಎ.ಎಸ್‌. ಓಕ್‌ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತು. ಆಗ ಸರಕಾರಿ ವಕೀಲರಾದ ವಿ.ಶ್ರೀನಿಧಿ, ''ಕರ್ನಾಟಕ ಠೇವಣಿದಾರರ ಹಿತರಕ್ಷಣಾ ಕಾಯಿದೆ- 2004 ಅನ್ವಯ ಈಗಾಗಲೇ ಎಲ್ಲಆಸ್ತಿಗಳನ್ನು ವಶಕ್ಕೆ ಪಡೆದು ಕಂದಾಯ ದಾಖಲೆಗಳಲ್ಲಿ ಹೆಸರನ್ನು ಬದಲಾಯಿಸಲಾಗಿದೆ. ಆ ಸ್ವತ್ತುಗಳಲ್ಲಿ ಬೋರ್ಡ್‌ಗಳನ್ನು ಹಾಕಲಾಗಿದೆ. ಆಸ್ತಿ ಮಾರಾಟಕ್ಕೆ ಸಕ್ಷಮ ನ್ಯಾಯಾಲಯದ ಮುಂದೆ ಅರ್ಜಿಯನ್ನೂ ಸಲ್ಲಿಸಲಾಗಿದೆ. ಜತೆಗೆ ಕಾಯಿದೆಯ ನಿಯಮಧಿದಂತೆ ಬ್ಯಾಂಕ್‌ ಖಾತೆಯನ್ನೂ ತೆರೆಯಲಾಗಿದೆ,'' ಎಂದರು.

ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ''ವಂಚನೆ ಪ್ರಕರಣದಲ್ಲಿ ಬಹುತೇಕ ಜನರು ತೊಂದರೆಗೆ ಒಳಗಾಗಿರುವ ಹಿನ್ನೆಲೆಯಲ್ಲಿಸಕ್ಷಮ ನ್ಯಾಯಾಲಯ ಆಸ್ತಿ ಮಾರಾಟಕ್ಕೆ ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಯನ್ನು ಆದ್ಯತೆಯ ಮೇಲೆ ವಿಚಾರಣೆ ನಡೆಸಬೇಕು,'' ಎಂದು ಆದೇಶಿಸಿತು. ಅಲ್ಲದೆ, 'ರಾಜ್ಯ ಸರಕಾರ ಈ ಸಂಬಂಧ ಕೈಗೊಂಡಿರುವ ಕ್ರಮಗಳ ಬಗ್ಗೆ ಫೆ.14ರೊಳಗೆ ವಸ್ಥು ಸ್ಥಿತಿ ವರದಿಯನ್ನು ಸಲ್ಲಿಸಬೇಕು' ಎಂದು ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.

ಅಗ್ರಿಗೋಲ್ಡ್‌ ವಿರುದ್ಧ ಕಾನೂನು, ಸಂಘಟನಾತ್ಮಕ ಹೋರಾಟ

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಬಿ.ಎಸ್‌. ಸಚಿನ್‌, ''ರಾಜ್ಯಾದ್ಯಂತ ಲಕ್ಷಾಂತರ ಜನರು ಹಣ ಹೂಡಿಕೆ ಮಾಡಿ ವಂಚನೆಗೆ ಒಳಗಾಗಿದ್ದಾರೆ. ಸರಕಾರ ಸಕ್ಷಮ ಪ್ರಾಧಿಕಾರ ನೇಮಿಸಿದೆ. ವಿಶೇಷ ಕೋರ್ಟ್‌ ರಚನೆ ಮಾಡಿದೆ. ಇದೀಗ ತಾನು ವಶಪಡಿಸಿಕೊಂಡಿರುವ ಆಸ್ತಿಯನ್ನು ಬೇಗ ಮಾರಾಟ ಮಾಡಿಸಿ ಹಣ ಮರುಪಾವತಿಸುವಂತೆ ನಿರ್ದೇಶನ ನೀಡಬೇಕು,'' ಎಂದು ನ್ಯಾಯಾಲಯವನ್ನು ಕೋರಿದರು.

ವಂಚಕ ಕಂಪನಿಗಳ ಸ್ಥಿರಾಸ್ತಿ ಮುಟ್ಟುಗೋಲು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ