ಆ್ಯಪ್ನಗರ

ಸೋಂಕು ಹೆಚ್ಚುತ್ತಿರುವ ಜಿಲ್ಲೆಗೆ ಎಡಿಜಿಪಿಗಳ ನೇಮಕ, ಲಾಕ್‌ಡೌನ್‌ ಉಲ್ಲಂಘಿಸಿದರೆ ಕಾನೂನು ಕ್ರಮ

"ಈಗಾಗಲೇ ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸಿದ 57 ಸಾವಿರ ವಾಹನಗಳನ್ನು ಸೀಜ್‌ ಮಾಡಲಾಗಿದೆ. ಅನಗತ್ಯವಾಗಿ ಓಡಾಟ ನಡೆಸುವ ವಾಹನಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಳ್ಳುತ್ತಾರೆ. ಅಗತ್ಯ ವಸ್ತು ಖರೀದಿಗೆ ನಾವೇ ಸಮಯ ನಿಗದಿ ಮಾಡುತ್ತೇವೆ," ಎಂದು ಗೃಹ ಸಚಿವರು ಹೇಳಿದ್ದಾರೆ.

Vijaya Karnataka 14 Apr 2020, 9:16 pm

ಬೆಂಗಳೂರು: ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಜನರ ಓಡಾಟ ನಿರ್ಬಂಧ ಕಠಿಣವಾಗಿ ಜಾರಿಗೊಳಿಸಲು ಎಡಿಜಿಪಿ ದರ್ಜೆಯ ಪೊಲೀಸ್‌ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
Vijaya Karnataka Web Basavaraj Bommai


ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, "ಬೀದರ್‌, ಕಲಬುರಗಿ, ಮೈಸೂರು ಭಾಗಗಳಲ್ಲಿ ಸೋಂಕು ಹೆಚ್ಚಾಗಿದೆ. ಇನ್ನೊಂದು ಕಡೆ ಭವಿಷ್ಯದಲ್ಲಿ ಕೇಂದ್ರ ಸರಕಾರ ಮೈಕ್ರೋ ಮ್ಯಾನೇಜ್ಮೆಂಟ್‌ ವ್ಯವಸ್ಥೆಗೆ ಹೋಗಬಹುದು," ಎಂದು ಎಚ್ಚರಿಕೆ ನೀಡಿದರು.

"ಈಗಾಗಲೇ ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸಿದ 57 ಸಾವಿರ ವಾಹನಗಳನ್ನು ಸೀಜ್‌ ಮಾಡಲಾಗಿದೆ. ಅನಗತ್ಯವಾಗಿ ಓಡಾಟ ನಡೆಸುವ ವಾಹನಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಳ್ಳುತ್ತಾರೆ. ಅಗತ್ಯ ವಸ್ತು ಖರೀದಿಗೆ ನಾವೇ ಸಮಯ ನಿಗದಿ ಮಾಡುತ್ತೇವೆ," ಎಂದು ಗೃಹ ಸಚಿವರು ಹೇಳಿದರು.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿಗೆ 4 ಬಲಿ, ಸತ್ತವರ ಸಂಖ್ಯೆ 10ಕ್ಕೆ ಏರಿಕೆ

"ದೇಶಾದ್ಯಂತ ಲಾಕ್‌ಡೌನ್‌ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಕೊರೊನಾ ಸೋಂಕು ಇರುವ ಜಿಲ್ಲೆಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಜಿಲ್ಲಾಡಳಿತಗಳ ಜತೆಗೆ ಚರ್ಚೆ ನಡೆಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು," ಎಂದು ಬಸವರಾಜ್‌ ಬೊಮ್ಮಾಯಿ ಮಾಹಿತಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ