ಆ್ಯಪ್ನಗರ

ಕರ್ನಾಟಕದಲ್ಲಿ ಸಿಎಎ ಪರ ನಿರ್ಣಯ? ವಿಧಾನಸಭೆ ಮಂಡನೆಗೆ ಸರಕಾರ ಚಿಂತನೆ

ಪೌರತ್ವ ತಿದ್ದುಪಡಿ ಕಾಯಿದೆ ಜಾರಿ ವಿಚಾರವನ್ನು ಸಮರ್ಥಿಸಿ ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ ನಿರ್ಣಯ ಮಂಡಿಸುವ ಬಗ್ಗೆ ಚಿಂತನೆ ನಡೆಸಿದೆ... ಮಾರ್ಚ್‌ ಮೊದಲ ವಾರ ಮಂಡನೆಯಾಗು ಸಾಧ್ಯತೆ ಇದೆ.

Vijaya Karnataka Web 17 Feb 2020, 9:32 pm
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ ಜಾರಿ ವಿಚಾರವನ್ನು ಸಮರ್ಥಿಸಿ ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ ನಿರ್ಣಯ ಮಂಡಿಸುವ ಬಗ್ಗೆ ಚಿಂತನೆ ನಡೆಸಿದೆ.
Vijaya Karnataka Web ವಿಧಾನಸೌಧ
ವಿಧಾನಸೌಧ


ಮಾರ್ಚ್ 2 ಮತ್ತು 3ರಂದು ಸಂವಿಧಾನದ ಬಗ್ಗೆ ಎರಡು ದಿನಗಳ ಕಾಲ ವಿಶೇಷ ಚರ್ಚೆ ನಡೆಸಲು ಸಮಯ ನಿಗದಿ ಮಾಡಲಾಗಿದೆ. ಈ ಸಂದರ್ಭದಲ್ಲಿ ಪೌರತ್ವ ಕಾಯಿದೆ ಸೇರಿದಂತೆ ಸಂವಿಧಾನಕ್ಕೆ ಮಾಡಿದ ಹಲವು ತಿದ್ದುಪಡಿ ವಿಚಾರಗಳು ಪ್ರಸ್ತಾಪವಾಗುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಬಿಜೆಪಿ ನಿರ್ಣಯ ಮಂಡಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಒಂದೊಮ್ಮೆ ಈ ನಿರ್ಣಯ ಮಂಡನೆಗೆ ಬಿಜೆಪಿ ಯತ್ನಿಸಿದರೆ ಸೂಕ್ತ ತಿರುಗೇಟು ನೀಡಲು ಕಾಂಗ್ರೆಸ್‌ ತಯಾರಿ ನಡೆಸಿದೆ. ಪೌರತ್ವ ಕಾಯಿದೆ ವಿಚಾರಕ್ಕೆ ಸಂಬಂಧಪಟ್ಟಂತೆ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯಲು ಎರಡು ಪಕ್ಷದವರೂ ತಯಾರಿ ನಡೆಸಿರುವುದು ಇದರಿಂದ ಸ್ಪಷ್ಟವಾದಂತಾಗಿದೆ.

ಈಗಾಗಲೇ ಹಲವಾರು ರಾಜ್ಯಗಳು ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧವಾಗಿ ನಿರ್ಣಯ ಮಂಡಿಸಿವೆ. ಬಿಜೆಪಿ ಆಡಳಿತ ಇರುವ ಸರಕಾರಗಳು ಪೌರತ್ವ ತಿದ್ದುಪಡಿ ಕಾಯಿದೆ ಪರವಾಗಿ ನಿರ್ಣಯ ಮಂಡಿಸುವ ಮೂಲಕ ಕೇಂದ್ರದ ಪರವಾಗಿ ಬೆಂಬಲ ವ್ಯಕ್ತಪಡಿಸಲು ನಿರ್ಧಾರ ಕೈಗೊಂಡಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ