ಆ್ಯಪ್ನಗರ

5 ವರ್ಷಗಳಲ್ಲಿ ಅತಿ ಹೆಚ್ಚು ದ್ವಿದಳ ಧಾನ್ಯ ಉತ್ಪಾದನೆ: ಕೇಂದ್ರದಿಂದ ಕರ್ನಾಟಕಕ್ಕೆ 1 ಕೋಟಿ ರೂ. ಪ್ರಶಸ್ತಿ

ದ್ವಿದಳ ಧಾನ್ಯ ಉತ್ಪಾದನೆ ಹೆಚ್ಚಳವಾಗಿರುವುದನ್ನು ಗುರುತಿಸಿ ಕರ್ನಾಟಕ ಸರಕಾರಕ್ಕೆ ಕೇಂದ್ರ ಸರಕಾರದಿಂದ ಪ್ರಶಸ್ತಿ ಲಭಿಸಿದೆ.

Vijaya Karnataka Web 22 Sep 2019, 8:01 am
ಬೆಂಗಳೂರು: ಕಳೆದ 5 ವರ್ಷದ ಅವಧಿಯಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ದ್ವಿದಳ ಧಾನ್ಯ ಬೆಳದ ಸಾಧನೆ ಗುರುತಿಸಿ ಕರ್ನಾಟಕಕ್ಕೆ ಭಾರತ ಸರಕಾರದಿಂದ ಪ್ರಶಸ್ತಿ ಲಭಿಸಿದೆ.
Vijaya Karnataka Web karanataka


ಪ್ರಸಕ್ತ ಸಾಲಿನ ದ್ವಿದಳ ಧಾನ್ಯದ ಪ್ರಶಂಸಾ ಪ್ರಶಸ್ತಿಗೆ ಕರ್ನಾಟಕ ರಾಜ್ಯವನ್ನು ಆಯ್ಕೆ ಮಾಡಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಒಂದು ಕೋಟಿ ರೂಪಾಯಿ ನಗದು ಬಹುಮಾನ ಘೋಷಿಸಿದೆ.

ಕಳೆದ ಐದು ವರ್ಷಗಳಲ್ಲಿ ಅತಿ ಹೆಚ್ಚು ದ್ವಿದಳ ಧಾನ್ಯ ಬೆಳದ ಸಾಧನೆ ಮೆಚ್ಚಿ ಭಾರತ ಸರಕಾರ ಈ ಪ್ರಶಸ್ತಿ ನೀಡಿದೆ.

ರಾಜ್ಯಕ್ಕೆ ಪ್ರಶಸ್ತಿ ಬಂದಿರುವ ಕುರಿತು ಕೇಂದ್ರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಿದ್ದು, ಸಿಎಂ ಸೇರಿದಂತೆ ಕೃಷಿ ಇಲಾಖೆ ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ.

ಈ ಸಂಬಂಧ ಸಂತಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರೈತರು, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ರಾಜ್ಯದ ಕೃಷಿ ವಿಜ್ಞಾನಿಗಳ ಶ್ರಮವನ್ನು ಈ ಪ್ರಶಸ್ತಿ ಗುರುತಿಸುತ್ತಿದೆ ಎಂದು ಶ್ಲಾಘಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ