ಆ್ಯಪ್ನಗರ

ಬಿಎಸ್‌ವೈ ಬಳಿ ಭಾರಿ ಅಸಮಾಧಾನ, ಟ್ವೀಟರ್‌ನಲ್ಲಿ ಫುಲ್‌ ಸಮಾಧಾನ; ಇದು ಶ್ರೀರಾಮುಲು ವರಸೆ

ನೂತನ ಆರೋಗ್ಯ ಸಚಿವ ಶ್ರೀರಾಮುಲು ತಮ್ಮ ಖಾತೆ ಬಗ್ಗೆ ಸಿಎಂ ಯಡಿಯೂರಪ್ಪ ಬಳಿ ಭಾರಿ ಅಸಮಾಧಾನ ತೋಡಿಕೊಂಡಿದ್ದಾರೆ. ಇತ್ತ ಶ್ರೀರಾಮುಲು ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗೆ ಡಿಸಿಎಂ ಪಟ್ಟ ಸಿಗದ ಹಿನ್ನೆಲೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Vijaya Karnataka Web 27 Aug 2019, 9:42 am
ಬೆಂಗಳೂರು: ಉಪ ಮುಖ್ಯಮಂತ್ರಿ ಹುದ್ದೆ ಮೇಲೆ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದ ಮೊಳಕಾಲ್ಮುರು ಶಾಸಕ ಬಿ.ಶ್ರೀರಾಮುಲು ತಮಗೆ ನೀಡಿರುವ ಆರೋಗ್ಯ ಖಾತೆ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಶ್ರೀರಾಮುಲು ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗೆ ಡಿಸಿಎಂ ಸ್ಥಾನ ಸಿಗದ ಹಿನ್ನೆಲೆ ಭಾರಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
Vijaya Karnataka Web Sriramulu


ಸಿಎಂ ಯಡಿಯೂರಪ್ಪ ಅವರ ಜತೆ ತಮ್ಮ ನೋವನ್ನು ಹೇಳಿಕೊಂಡಿರುವ ಶ್ರೀರಾಮುಲು, ಪಕ್ಷಕ್ಕಾಗಿ ಡಿಸಿಎಂ ಸ್ಥಾನವನ್ನು ತ್ಯಜಿಸಿದ್ದೇನೆ. ಹಾಗಾಗಿ ಹೆಚ್ಚಿನ ಪ್ರಾಮುಖ್ಯತೆ ಇರುವ ಖಾತೆಯನ್ನು ನೀಡುತ್ತೀರಿ ಎಂಬ ನಿರೀಕ್ಷೆಯನ್ನು ಇಟ್ಟುಕೊಂಡಿದ್ದೆ ಎಂದು ಬಿಎಸ್‌ವೈ ಬಳಿ ಹೇಳಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರ ಮುಖ ನೋಡಿ ನಾವು ಮತ ಚಲಾಯಿಸಿಲ್ಲ ಎಂದು ಶ್ರೀರಾಮುಲು ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ.


ಮಂತ್ರಿ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸಿ.ಟಿ ರವಿ ಅಂತಿಮ ನಿಲುವೇನು?

ಒಂದೆಡೆ ಶ್ರೀರಾಮುಲು ಬಿಎಸ್‌ವೈ ಜತೆ ಅಸಮಾಧಾನ ಹಂಚಿಕೊಂಡಿದ್ದರೆ ಟ್ವೀಟರ್‌ನಲ್ಲಿ ತಮ್ಮ ಹೇಳಿಕೆಗೆ ತೇಪೆ ಹಚ್ಚು ಪ್ರಯತ್ನ ನಡೆಸಿದ್ದಾರೆ. ಸಂಪುಟ ಸಚಿವನಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೂಲಕ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಟ್ಟ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ಆಭಾರಿಯಾಗಿದ್ದೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ನನ್ನ ಪಕ್ಷಕ್ಕೆ ಹಾಗು ಎಲ್ಲ ನಾಯಕರಿಗೆ ನಾನು ಆಭಾರಿಯಾಗಿದ್ದೇನೆ. ಈ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಲು ನಮ್ಮ ಕಾರ್ಯಕರ್ತರ ಹಾಗೂ ಜನತೆಯ ಆಶೀರ್ವಾದ ಕೋರುತ್ತೇನೆ ಎಂದು ಶ್ರೀರಾಮುಲು ಟ್ವೀಟ್‌ ಮಾಡಿದ್ದಾರೆ.

ಸಿಎಂ ಯಡಿಯೂರಪ್ಪ ಕಾವಲಿಗೆ 3ಡಿ ಬಲೆ ಹೆಣೆದ ಹೈಕಮಾಂಡ್‌ ಉದ್ದೇಶವೇನು?

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ