ಆ್ಯಪ್ನಗರ

ಕೊರೊನಾ ನಿಧಿ: ಒಂದು ವರ್ಷದ ವೇತನ ನೀಡಿದ ಬಸವರಾಜ್‌ ಬೊಮ್ಮಾಯಿ

ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಶಾಸಕರು , ಸಚಿವರು ಹಾಗೂ ಸಂಸದರು ಆರ್ಥಿಕ ಸಹಕಾರ ನೀಡಬೇಕು ಎಂಬ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮನವಿಗೆ ಸ್ಪಂದಿಸಿದ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಒಂದು ವರ್ಷದ ವೇತನವನ್ನು ನೀಡಿದ್ದಾರೆ.

Vijaya Karnataka Web 1 Apr 2020, 6:25 pm
ಬೆಂಗಳೂರು: ಕೊರೊನಾ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಸರ್ಕಾರದ ಜೊತೆಗೆ ಆರ್ಥಿಕವಾಗಿ ಕೈ ಜೋಡಿಸಬೇಕು ಎಂಬ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮನವಿಗೆ ಉತ್ತಮವಾದ ಬೆಂಬಲ ಸಿಗುತ್ತಿದೆ. ಸ್ವತಃ ಬಿಎಸ್‌ವೈ ಕೊರೊನಾ ನಿಧಿಗೆ ತಮ್ಮ ಒಂದು ವರ್ಷದ ವೇತನವನ್ನು ನೀಡಿದ್ದರು. ಇದೀಗ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಅವರು ಕೂಡಾ ಈ ಘೋಷಣೆಯನ್ನು ಮಾಡಿದ್ದಾರೆ.
Vijaya Karnataka Web basavaraj bommai


ಸಿಎಂ ಬಿಎಸ್‌ ಯಡಿಯೂರಪ್ಪ ಎಲ್ಲಾ ಶಾಸಕರು, ಸಚಿವರು ಹಾಗೂ ಸಂಸದರು ಕೋವಿಡ್‌ ನಿಧಿಗೆ ಸಹಕಾರ ನೀಡಬೇಕು ಎಂದು ವಿನಂತಿ ಮಾಡಿದ್ದರು. ಇದರ ಬೆನ್ನಲ್ಲೇ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಮುಖ್ಯಮಂತ್ರಿ ಪರಿಹಾರ ಕೋವಿಡ್‌-19 ನಿಧಿಗೆ ತಮ್ಮ ಒಂದು ವರ್ಷದ ವೇತನವನ್ನು ನೀಡುವುದಾಗಿ ಹೇಳಿದ್ದಾರೆ.

ಕೊರೊನಾ ವಿರುದ್ಧದ ಸಮರದಲ್ಲಿ ಮಡಿದವರಿಗೆ 1 ಕೋಟಿ ರೂ. ಪರಿಹಾರ: ಕೇಜ್ರಿವಾಲ್‌

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಅವರು ಮೂರು ತಿಂಗಳ ಶಾಸಕರ ವೇತನವನ್ನು ಕೋವಿಡ್‌ ಪರಿಹಾರ ನಿಧಿಗೆ ನೀಡಿದ್ದಾರೆ. ಜನಸಾಮಾನ್ಯರು ಕೂಡಾ ಸಿಎಂ ಮನವಿಗೆ ಸ್ಪಂದಿಸುತ್ತಿದ್ದು ಸಹಕಾರ ನೀಡುತ್ತಿದ್ದಾರೆ. ಕೋವಿಡ್‌ ನಿಧಿಗೆ ಸಹಕಾರ ನೀಡಲು ಬಯಸುವವರಿಗಾಗಿ ಈಗಾಗಲೇ ಬ್ಯಾಂಕ್‌ ವಿವರವನ್ನು ಸಿಎಂ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ನೀಡಲಾಗಿದೆ.

ತಬ್ಲಿಘಿ ಸಮಾವೇಶಕ್ಕೆ ತೆರಳಿದ್ದ ಬಾಗಲಕೋಟೆಯ 19 ಮಂದಿ: ನಾಲ್ವರು ಪತ್ತೆ!

ಕಾಂಗ್ರೆಸ್‌ ಕೂಡಾ ತಮ್ಮ ಪಕ್ಷದ ಶಾಸಕರು ಹಾಗೂ ಸಂಸದರಿಗೆ ಕೋವಿಡ್‌ ನಿಧಿಗಾಗಿ ಕನಿಷ್ಠ 1 ಲಕ್ಷ ರೂಪಾಯಿ ನೀಡಬೇಕು ಎಂದು ಸೂಚಿಸಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮನವಿಗೆ ಕೆಲವರು ಸ್ಪಂದಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ