ಆ್ಯಪ್ನಗರ

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೂ ಕೊರೊನಾ ಪಾಸಿಟಿವ್ ದೃಢ..!

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿತ್ತು. ಈ ಹಿನ್ನೆಲೆ ಸಚಿವರು ಕೂಡ ಕೊರೊನಾ ಪರೀಕ್ಷೆ ಮಾಡಿದ್ದು ಈ ವೇಳೆ ಅವರಿಗೂ ಕೊರೊನಾ ಪಾಸಿಟವ್ ದೃಢಪಟ್ಟಿದೆ.

Vijaya Karnataka Web 16 Sep 2020, 11:47 am
ಬೆಂಗಳೂರು: ಕೊರೊನಾ ಸಾಂಕ್ರಾಮಿಕ ಕಾಯಿಲೆ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಈಗಾಗಲೇ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರತ ಎರಡು ದಿನಗಳ ಹಿಂದೆ ವಿಶ್ವದಲ್ಲೇ ಎರಡನೇ ಸ್ಥಾನ ಪಡೆದಿತ್ತು. ಇತ್ತೀಚೆಗೆ ಜನಸಾಮಾನ್ಯರ ಜೊತೆ ಜನಪ್ರತಿನಿಧಿಗಳಿಗೂ ಕೂಡ ಕೊರೊನಾ ಕಾಣಿಸಿಕೊಳ್ಳುತ್ತಿದ್ದು, ಈಗಾಗಲೇ ಅನೇಕ ಜನ ರಾಜಕಾರಣಿಗಳು ಕೊರೊನಾಗೆ ಚಿಕಿತ್ಸೆ ಪಡೆದಿದ್ದಾರೆ.
Vijaya Karnataka Web basavaraj bommai


ವೈದ್ಯಾಧಿಕಾರಿಗಳ ಜೊತೆ ಸಿಎಂ ಪುತ್ರ ಬಿ.ವೈ ವಿಜಯೇಂದ್ರ ಸಭೆ, ಕಾಂಗ್ರೆಸ್ ಕಿಡಿ

ಈ ಮಧ್ಯೆ ಕೊರೊನಾ ಆರಂಭವಾದ ಅವಧಿಯಿಂದಲೂ ಜನರ ಜೊತೆ ಬೆರೆಯುತ್ತಾ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೂ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ರಾಜಕಾರಣಿಗಳಲ್ಲಿ ಹೆಚ್ಚಾಗಿ ಕೊರೊನಾ ಪಾಸಿಟಿವ್ ಕಾಣಿಸಿಕೊಳ್ಳುತ್ತಿದ್ದು, ಇದೀಗ ಗೃಹ ಸಚಿವ ಬೊಮ್ಮಾಯಿ ಅವರಿಗೂ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿರೋದು ಅವರ ಜೊತೆ ಸಂಪರ್ಕದಲ್ಲಿದ್ದವರಿಗೆ ಸಾಕಷ್ಟು ಆತಂಕ ಮೂಡಿಸುವಂತೆ ಮಾಡಿದೆ.

ಸದನದಲ್ಲಿ ಹೋರಾಟಕ್ಕೆ ಕಾಂಗ್ರೆಸ್ ತಂತ್ರ, ಬುಧವಾರ ನಡೆಯಲಿದೆ ಶಾಸಕಾಂಗ ಪಕ್ಷದ ಸಭೆ

ತಮಗೆ ಕೊರೊನಾ ಸಾಂಕ್ರಾಮಿಕ ರೋಗ ತಗುಲಿರುವ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ‘ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ’ ಎಂದು ಹೇಳಿದ್ದಾರೆ.

ಇದೇ ವೇಳೆ ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಗೃಹ ಸಚಿವ ಬೊಮ್ಮಾಯಿ ಟ್ವೀಟ್ ಮೂಲಕ ವಿನಂತಿಸಿಕೊಂಡಿದ್ದಾರೆ.

ಇತ್ತೀಚೆಗೆ ಭಾರತದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನಸಾಮಾನ್ಯರ ಜೊತೆ ರಾಜಕಾರಣಿಗಳಲ್ಲೂ ಕೂಡ ಕೊರೊನಾ ಸೋಂಕು ಪದೇ ಪದೇ ಕಾಣಿಸಿಕೊಳ್ಳುತ್ತಿದೆ. ನಿನ್ನೆ ಬೆಳಗ್ಗೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರಿಗೂ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಅತ್ತ ಮೊನ್ನೆ ಸಂಸತ್‌ನಲ್ಲಿ ಪಾಲ್ಗೊಳ್ಳಲು ಬಂದ 25ಕ್ಕೂ ಹೆಚ್ಚು ಸಂಸದರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡು ಅಚ್ಚರಿ ಮೂಡಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ