ಆ್ಯಪ್ನಗರ

ಭೂ ಸುಧಾಕರಣೆ ಕಾಯ್ದೆ,ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ; ರಾಜ್ಯಾದ್ಯಂತ ಪ್ರತಿಭಟನೆಗೆ ಜೆಡಿಎಸ್‌ ನಿರ್ಧಾರ

ಭೂ ಸುಧಾಕರಣೆ ಕಾಯ್ದೆ,ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧಿಸಿ ಶುಕ್ರವಾರದಿಂದ ರಾಜ್ಯಾದ್ಯಂತ ಹೋರಾಟ ನಡೆಸಲು ಜೆಡಿಎಸ್‌ ಪಕ್ಷ ಮುಂದಾಗಿದೆ. ಈ ಕುರಿತಾಗಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಮಾಹಿತಿ ನೀಡಿದರು.

Vijaya Karnataka Web 13 Aug 2020, 2:47 pm
ಬೆಂಗಳೂರು: ರಾಜ್ಯ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿರುವ ಭೂ ಸುಧಾಕರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ಮತ್ತು ಕೈಗಾರಿಕೆ ಕಾಯ್ದೆಗಳಿಗೆ ಈ ತಂದಿರುವ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿ ಶುಕ್ರವಾರದಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಜೆಡಿಎಸ್‌ ನಿರ್ಧರಿಸಿದೆ.
Vijaya Karnataka Web hd devegwoda


ಬೆಂಗಳೂರಿನ ಜೆಪಿ ಭವನದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಸುದ್ದಿಗೋಷ್ಠಿ ನಡೆಸಿ ಈ ವಿಚಾರವನ್ನು ತಿಳಿಸಿದ್ದಾರೆ. ಸರ್ಕಾರ ತಂದಿರುವ ಮೂರು ಕಾಯ್ದೆಗಳಿಗೆ ನಮ್ಮ ಸಮ್ಮತಿ ಇಲ್ಲ.‌ ಈ ಕಾಯಿದೆಗಳನ್ನು ಸುಗ್ರಿವಾಜ್ಞೆ ಮೂಲಕ ಅನುಷ್ಠಾನಕ್ಕೆ ತಂದಿದ್ದಾರೆ. ಇದನ್ನ ನಾವು ವಿರೋಧ ಮಾಡ್ತೀವಿ. ಈ ವಿಚಾರವಾಗಿ ರಾಜ್ಯಾದ್ಯಂತ ಹೋರಾಟ ಮಾಡಲು ನಾವು ಸಿದ್ದವಾಗಿದ್ದೇವೆ ಎಂದು ದೇವೇಗೌಡ ತಿಳಿಸಿದರು.

ಶುಕ್ರವಾರ ಹಾಸನದಲ್ಲಿ ಪ್ರತಿಭಟನೆಗೆ ಚಾಲನೆ ಕೊಡುತ್ತೇವೆ, ಕೊರೊನಾ ಮಾರ್ಗಸೂಚಿ ನಿಯಮದ ಅನ್ವಯವೇ ಹೋರಾಟವನ್ನು ನಡೆಸುತ್ತೇವೆ ಎಂದು ದೇವೇಗೌಡ ತಿಳಿಸಿದರು.

ಡಿಜೆ ಹಳ್ಳಿ ಹಿಂಸಾಚಾರ: 'ತುಷ್ಟೀಕರಣ’ ತನ್ನ ಮೊದಲ ಆದ್ಯತೆ ಎಂದು ಕಾಂಗ್ರೆಸ್ ಸಾಬೀತುಪಡಿಸಿದೆ! ನಳಿನ್ ಕಿಡಿ

ನಾನು, ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಎಚ್‌ಡಿ ರೇವಣ್ಣ ಸೇರಿದಂತೆ ಬೆರಳೆಣಿಕೆ ಮಂದಿ ಮಾತ್ರ ಶಾಂತಿಯುತ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುತ್ತೇವೆ. ಹಾಸನದಲ್ಲಿ ಶುಕ್ರವಾರ 200 ಜನ ಮಾತ್ರ ಹೋರಾಟದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು.

ಒಂದು ಕಡೆ ಕುಳಿತುಕೊಂಡು ಪ್ರತಿಭಟನೆ ಮಾಡ್ತೀವಿ. ಐದಾರು ಜನ ಮುಖಂಡರು ಹೋಗಿ ಡಿಸಿಗೆ ಮನವಿ ಪತ್ರ ಕೊಡ್ತೀವಿ , ಅದನ್ನ ರಾಜ್ಯಪಾಲರಿಗೆ ಕಳಿಸುಕೊಡುವಂತೆ ಡಿಸಿ ಅವರಿಗೆ ಮನವಿ ಮಾಡ್ತೀವಿ. 30 ಜಿಲ್ಲೆಗಳಲ್ಲಿ ಈ ಹೋರಾಟ ಹಂತ ಹಂತವಾಗಿ ಮಾಡುತ್ತೇವೆ ಎಂದರು.

'ಗಲಭೆಯ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಭೋವಿ ಸಮಾಜದಿಂದ ರಾಜ್ಯಾದ್ಯಂತ ಹೋರಾಟ' : ಶಿವರಾಜ ತಂಗಡಗಿ

ಭೂ ಸುಧಾಕರಣೆ ಕಾಯ್ದೆ, ಎಪಿಎಂಸಿ ಕಾಯ್ದೆಗಳು ರೈತರಿಗೆ ಮಾರಕವಾಗಿದೆ , ಸಣ್ಣ ,ಮಧ್ಯಮ ವರ್ಗದ ರೈತರಿಗೆ ಇದರಿಂದ ಅನ್ಯಾಯವಾಗುತ್ತೆ. ಕೈಗಾರಿಕೆ ಕಾಯ್ದೆಯೂ ಅತ್ಯಂತ ಅಪಾಯಕಾರಿ. ಜಮೀನು ಪಡೆದು ಮುಂದೆ ಮಾರಾಟ ಮಾಡಬಹುದು. ಈ ಕಾಯ್ದೆಯಿಂದ ಜನತೆಗೆ ಅನಾನುಕೂಲವೇ ಹೆಚ್ಚು ಎಂದು ಕಾಯ್ದೆ ತಿದ್ದುಪಡಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಎಪಿಎಂಸಿ ಕಾಯ್ದೆ ಇಂದ ರೈತರ ಸ್ಥಿತಿ ಚಿಂತಾಜನಕವಾಗಲಿದೆ. ಸಂಸತ್ ನಲ್ಲಿ ಈ ಬಗ್ಗೆ ಹೋರಾಟ ಮಾಡ್ತೀನಿ. ಉಳಿದ ಕಾಯ್ದೆ ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಹೀಗಾಗಿ ಇಲ್ಲಿಯೇ ಪ್ರತಿಭಟನೆ ಮಾಡುತ್ತೇವೆ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸದ ಕಾರಣ ಪ್ರತಿಭಟನೆ ಅನಿವಾರ್ಯವಾಗಿದೆ 30 ಜಿಲ್ಲೆಗೆ ನಾನೇ‌ ಹೋಗೋಕೆ ಆಗೊಲ್ಲ ರಾಜ್ಯಾಧ್ಯಕ್ಷರು, ಆಯಾ ಭಾಗದ ಶಾಸಕರು, ಮಾಜಿ ಶಾಸಕರು, ಪರಿಷತ್ ಸದ್ಯಸರು ಜಿಲ್ಲೆಗಳಲ್ಲಿ ಹೋರಾಟ ಮಾಡ್ತಾರೆ. 30 ಜಿಲ್ಲೆಗಳಲ್ಲೂ ಹೋರಾಟ ನಡೆಸುತ್ತೇವೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ