ಆ್ಯಪ್ನಗರ

ವಿಧಾನಸಭೆ ಚಳಿಗಾಲದ ಅಧಿವೇಶನ ಆರಂಭ- ಇಂದಿನಿಂದ ಮೂರು ದಿನಗಳ ಕಾಲ ಚರ್ಚೆ

ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದ್ದು, ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿದೆ. ಇದು ಬಿಜೆಪಿ ಸರ್ಕಾರದ ಮೊದಲ ಅಧಿವೇಶವಾಗಿದ್ದು, ನೆರೆ ಪರಿಹಾರ ವಿಷಯ ಸೇರಿದಂತೆ ಅನೇಕ ಮಹತ್ವದ ವಿಷಯಗಳು ಚರ್ಚೆಯಾಗಲಿವೆ.

Vijaya Karnataka Web 10 Oct 2019, 1:10 pm
ಬೆಂಗಳೂರು: ರಾಜ್ಯದ 15ನೇ ವಿಧಾನಸಭೆಯ 5ನೇ ಅಧಿವೇಶನ ಆರಂಭವಾಗಿದ್ದು, ಮಾಧ್ಯಮಗಳ ನೇರಪ್ರಸಾರವನ್ನು ನಿಷೇಧಿಸುವ ಮುಲಕ ಚರ್ಚೆ ನಡೆಸಲಾಗುತ್ತಿದೆ. ಇಂದು ಬೆಳಗ್ಗೆ 11 ಗಂಟೆಗೆ ಆರಂಭವಾದ ಸದನದಲ್ಲಿ ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಅಧಿವೇಶನದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ರಾಷ್ಟ್ರಪತಿ ಮತ್ತು ರಾಜ್ಯಪಾಲರ ಒಪ್ಪಿಗೆ ಪಡೆದ ವಿಧೇಯಕಗಳ ಮಂಡನೆ ಮಾಡಲಿದ್ದಾರೆ. ಬಿಎಸ್‌ವೈ ರಾಜಸ್ವ ವಲಯದ ಮೇಲಿನ ವರದಿ ಹಾಗೂ ಆರ್ಥಿಕ ವಲಯದ ಮೇಲಿನ ವರದಿ ಮಂಡಿಸದ್ಧಾರೆ.
Vijaya Karnataka Web karnataka winter session


ಮಾಧ್ಯಮಗಳ ಕಣ್ತಪ್ಪಿಸಿ ಕಲಾಪ: ಖಾಸಗಿ ಟಿವಿಗಳ ನೇರ ಪ್ರಸಾರಕ್ಕೆ ತಡೆ ಒಡ್ಡಿದ ಕರ್ನಾಟಕ ಸರಕಾರ

ವಿಪಕ್ಷಗಳು ನೆರೆ ಹಾನಿ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧರಾಗಿದ್ದವು. ಆದರೆ,
ಕೇಂದ್ರ ಸರ್ಕಾರ ಅಧಿವೇಶನ ಆರಂಭವಾಗುವ ಮುನ್ನವೇ ರಾಜ್ಯಕ್ಕೆ 1,200 ಕೋಟಿ‌ ರೂ. ಮಧ್ಯಂತರ ನೆರೆ ಪರಿಹಾರ ಬಿಡುಗಡೆ ಮಾಡಿದೆ. ಹೀಗಾಗಿ ಪಿಜೆಪಿ ವಿರೊಧ ಪಕ್ಷಗಳಿಗೆ ತಿರುಗೇಟು ನೀಡಲು ಸಜ್ಜಾಗಿದೆ. ಸದನದಲ್ಲಿ ಎಲ್ಲ ಶಾಸಕರೂ ಹಾಜರಿರಬೇಕು ಎಂದು ಬಿಜೆಪಿ ಸೂಚನೆ ನೀಡಿತ್ತು.

ಮಾಧ್ಯಮ ಸ್ವಾತಂತ್ರ್ಯಕ್ಕೆ ಸದಾ ಬದ್ಧ: ಟ್ವೀಟ್‌ ಮಾಡಿದ ಕೆಲವೇ ಕ್ಷಣಗಳಲ್ಲಿ ನಾಪತ್ತೆಯಾಯ್ತು ಸಿಎಂ ಟ್ವೀಟ್‌

ಇನ್ನು, ಒಂದೆಡೆ ಅಧಿವೇಶನ ನಡೆದರೆ, ಕಲಾಪದ ಹೊರಗೆ ಮತ್ತು ಒಳಗೆ ಪ್ರತಿಭಟನೆ ನಡೆಸಲು ಜೆಡಿಎಸ್ ಸಜ್ಜಾಗಿದೆ. ನೆರೆ ನಿರ್ಲಕ್ಷ್ಯ ಖಂಡಿಸಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸದನದ ಒಳಗೆ ಹೋರಾಟ ನಡೆಯಲಿದೆ. ಸದನದ ಹೊರಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪಾದಯಾತ್ರೆ ಮಾಡಲಿದ್ದಾರೆ. ಮೌರ್ಯ ಸರ್ಕಲ್ನಿಂದ ಫ್ರೀಡಂ ಪಾರ್ಕ್ ವರೆಗೆ ಪಾದಯಾತ್ರೆ ಸಾಗಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ