ಆ್ಯಪ್ನಗರ

ಕೆ. ಸುಧಾಕರ್, ಜೆ.ಸಿ ಮಾಧುಸ್ವಾಮಿ ಅಸಮಾಧಾನ; ಮತ್ತೆ ಖಾತೆ ಬದಲಾವಣೆ?

ಸಚಿವರ ಅಸಮಾಧಾನದ ಹಿನ್ನೆಲೆಯಲ್ಲಿ ಮತ್ತೆ ಖಾತೆ ಬದಲಾವಣೆ ಆಗುವ ಸಾಧ್ಯತೆ ಹೆಚ್ಚಾಗಿದೆ. ಕೆ. ಸುಧಾಕರ್‌ ಅವರಿಗೆ ವೈದ್ಯಕೀಯ ಶಿಕ್ಷಣ ಖಾತೆಯನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಕುರಿತಾದ ಮತ್ತಷ್ಟು ಮಾಹಿತಿ ಇಲ್ಲಿದೆ.

Vijaya Karnataka Web 25 Jan 2021, 2:28 pm
ಬೆಂಗಳೂರು: ಖಾತೆ ಹಂಚಿಕೆಯಿಂದಾಗಿ ಸಚಿವರಲ್ಲಿ ಸ್ಫೋಟಗೊಂಡಿದ್ದ ಅಸಮಾಧಾನ ತಣಿಯದ ಹಿನ್ನೆಲೆಯಲ್ಲಿ ಮತ್ತೆ ಖಾತೆ ಬದಲಾವಣೆಗೆ ಸಿಎಂ ಬಿಎಸ್ ಯಡಿಯೂರಪ್ಪ ಮುಂದಾಗಿದ್ದಾರೆ. ವೈದ್ಯಕೀಯ ಶಿಕ್ಷಣ ಖಾತೆಯನ್ನು ವಾಪಸ್ ಪಡೆದುಕೊಂಡಿದ್ದರಿಂದ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅಸಮಾಧಾನಗೊಂಡಿದ್ದು ಅವರನ್ನು ಸಮಾಧಾನ ಮಾಡುವ ನಿಟ್ಟಿನಲ್ಲಿ ಮತ್ತೆ ಅವರಿಗೆ ವೈದ್ಯಕೀಯ ಶಿಕ್ಷಣ ಖಾತೆ ನೀಡುವ ಸಾಧ್ಯತೆ ಇದೆ.
Vijaya Karnataka Web BS Yediyurappa


ಸಚಿವ ಸಂಪುಟ ವಿಸ್ತರಣೆಯ ಬಳಿಕ ನಡೆದ ಖಾತೆ ಹಂಚಿಕೆ ಗೊಂದಲ ತೀವ್ರಗೊಂಡ ಹಿನ್ನೆಲೆಯಲ್ಲಿ ಈಗಾಗಲೇ ಒಂದು ಬಾರಿ ಖಾತೆಯನ್ನು ಮರು ಹಂಚಿಕೆ ಮಾಡಲಾಗಿದೆ.‌ಇದರಿಂದಲೂ ಅತೃಪ್ತಿ ಶಮನ ಆಗದ ಹಿನ್ನೆಲೆಯಲ್ಲಿ ಮತ್ತೆ ಖಾತೆ ಮರುಹಂಚಿಕೆ ಸಾಧ್ಯತೆ ದಟ್ಟವಾಗಿದೆ.

ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ರಾಜಕೀಯ ಪ್ರೇರಿತ, ಅಶ್ವತ್ಥ ನಾರಾಯಣ ಆರೋಪ

ಸಚಿವ ಸುಧಾಕರ್ ಗೆ ಆರೋಗ್ಯ ಖಾತೆಯ ಜೊತೆಗೆ ವೈದ್ಯಕೀಯ ಶಿಕ್ಷಣ ಖಾತೆಯನ್ನು ನೀಡುವ ಸಾಧ್ಯತೆ ಇದೆ. ಅಲ್ಲದೆ ಜೆ.ಸಿ ಮಾಧುಸ್ವಾಮಿಯವರ ಖಾತೆಯನ್ನು ಬದಲಾವಣೆ ಮಾಡಲು ಸಿ.ಎಂ ಬಿಎಸ್ ಯಡಿಯೂರಪ್ಪ ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಜೆ.ಸಿ ಮಾಧುಸ್ವಾಮಿ ಅವರು ಸಣ್ಣ ನೀರಾವರಿ ಖಾತೆ ಕೈತಪ್ಪಿದ್ದಕ್ಕಾಗಿ ಅಸಮಾಧಾನಗೊಂಡಿದ್ದಾರೆ. ಅಲ್ಲದೆ ಅವರಿಂದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಖಾತೆಯನ್ನು ವಾಪಸ್ ಪಡೆದುಕೊಳ್ಳಲಾಗಿದೆ.

ಈ ನಿಟ್ಟಿನಲ್ಲಿ ಇಬ್ಬರು ಸಚಿವರ ಅಸಮಾಧಾನದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಖಾತೆ ಬದಲಾವಣೆಗೆ ಕೈಹಾಕಿದ್ದಾರೆ. ಇಂದು ಅಥವಾ ನಾಳೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ. ಇನ್ನು ಖಾತೆ ಬದಲಾವಣೆ ವಿಚಾರವನ್ನು ಸಚಿವ ಡಾ. ಕೆ ಸುಧಾಕರ್‌ ಕೂಡಾ ಒಪ್ಪಿಕೊಂಡಿದ್ದು ವೈದ್ಯಕೀಯ ಶಿಕ್ಷಣ ಖಾತೆ ಮತ್ತೆ ನೀಡುವುದಾಗಿ ಸಿಎಂ ಕಚೇರಿಯಿಂದ ಮಾಹಿತಿ ಬಂದಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ