ಆ್ಯಪ್ನಗರ

Karnataka Rain Update | ಸೆ.14ರಿಂದ ರಾಜ್ಯದಲ್ಲಿ ಮುಂಗಾರು ದುರ್ಬಲ: ಮಂಗಳವಾರ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

IMD Orange alert to coastal region: ಸೆ.13ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, ದಕ್ಷಿಣ ಕನ್ನಡದಲ್ಲಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಉಳಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಳಗಾವಿ, ಬೀದರ್‌, ಕಲಬುರಗಿ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಡೆ ಮಳೆ (Rain) ಪ್ರಮಾಣ ಸಾಕಷ್ಟು ತಗ್ಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Edited byಹೇಮಂತ್ ಕುಮಾರ್ ಎಸ್ | Vijaya Karnataka 12 Sep 2022, 11:27 pm

ಹೈಲೈಟ್ಸ್‌:

  • ಸೆ.14ರಂದು ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌
  • ಮಳೆ, ನೆರೆ ಹಾನಿ ಚರ್ಚೆಗೆ ಒತ್ತು: ವಿಧಾನಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
  • ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಡೆ ತಗ್ಗಲಿರುವ ಮಳೆ ಪ್ರಮಾಣ
  • ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಮಳೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web monsoon in September
ಮಳೆಯಲ್ಲಿ ಬೈಕ್‌ ಸವಾರಿ-ಸಂಗ್ರಹ ಚಿತ್ರ
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಡೆ ಮಳೆ (Rain) ಪ್ರಮಾಣ ಸಾಕಷ್ಟು ತಗ್ಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆ.13ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, ದಕ್ಷಿಣ ಕನ್ನಡದಲ್ಲಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಉಳಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಳಗಾವಿ, ಬೀದರ್‌, ಕಲಬುರಗಿ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ.
ಬತ್ತಿದ ಕೊಳವೆ ಬಾವಿಗಳಲ್ಲೂ ಉಕ್ಕಿದ ನೀರು; ಉತ್ತಮ ಮಳೆ, ಅಂತರ್ಜಲ ಮಟ್ಟ ಹೆಚ್ಚಳ
ಸೆ.14ರಂದು ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಉಳಿದ ಜಿಲ್ಲೆಗಳಿಗೆ ಯಾವುದೇ ಎಚ್ಚರಿಕೆ ಸೂಚನೆ ಇರುವುದಿಲ್ಲ.

ಮಳೆ, ನೆರೆ ಹಾನಿ ಚರ್ಚೆಗೆ ಒತ್ತು: ವಿಧಾನಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ

ರಾಜ್ಯದಲ್ಲಿ ಮಳೆ ಹಾಗೂ ಪ್ರವಾಹದಿಂದ ಅಪಾರ ಹಾನಿ ಆಗಿದ್ದು, ಜನರ ಸಂಕಷ್ಟದ ಬಗ್ಗೆ ವಿಧಾನಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್‌ನ ವೆಂಕಟರಾವ್‌ ನಾಡಗೌಡ, ಸಚಿವ ಜೆ.ಸಿ. ಮಾಧುಸ್ವಾಮಿ, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
Rain In Karnataka : ರಾಜ್ಯದ 17 ಜಿಲ್ಲೆಗಳಲ್ಲಿ ಮಳೆ ಸೃಷ್ಟಿಸಿದೆ ಭಾರೀ ಅವಾಂತರ: ಕೃಷಿ, ಆಸ್ತಿ ನಷ್ಟದ ಪ್ರಮಾಣವೆಷ್ಟು?
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಉಂಟಾಗಿರುವ ಮಳೆ ಹಾನಿ ಬಗ್ಗೆ ಗಂಭೀರ ಚರ್ಚೆ ನಡೆಯಬೇಕಿದ್ದು, ಇದಕ್ಕಾಗಿ ಹೆಚ್ಚಿನ ಸಮಯಾವಕಾಶ ಕಲ್ಪಿಸಬೇಕು ಎಂದು ಪ್ರತಿಪಕ್ಷಗಳು ಪ್ರಸ್ತಾಪಿಸಿದವು. ಇದಕ್ಕೆ ಸರಕಾರವೂ ಸಮ್ಮತಿಸಿದ್ದು, 2-3 ದಿನ ಚರ್ಚೆಗೆ ಅವಕಾಶ ನೀಡುವ ಬಗ್ಗೆ ತೀರ್ಮಾನಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಜೆ.ಸಿ. ಮಾಧುಸ್ವಾಮಿ ಅವರು, ಕೆಲ ಸುಗ್ರೀವಾಜ್ಞೆ ಸೇರಿದಂತೆ 15 ವಿಧೇಯಕ ಮಂಡಿಸಲು ಚಿಂತಿಸಿದ್ದು, ನಿತ್ಯ ಎರಡು- ಮೂರು ವಿಧೇಯಕ ಮಂಡಿಸಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂಬುದಾಗಿ ಸಭೆಗೆ ತಿಳಿಸಿದರು. ಇದಕ್ಕೆ ಆಕ್ಷೇಪಿಸಿದ ಪ್ರತಿಪಕ್ಷಗಳು 10 ದಿನಗಳ ಕಲಾಪದ ಅವಧಿಯಲ್ಲಿ15 ವಿಧೇಯಕ ಮಂಡನೆಯಾದರೆ ಚರ್ಚೆಗೆ ಸಮಯಾವಕಾಶ ಹೊಂದಿಸುವುದು ಹೇಗೆ? ಮಹತ್ವದ ವಿಧೇಯಕಗಳನ್ನು ಮಂಡಿಸಿ ಚರ್ಚೆಗೆ ಅವಕಾಶ ನೀಡದೆ ಅನುಮೋದನೆ ನೀಡುವುದು ಸರಿಯಲ್ಲ. ಮಂಡನೆಯಾಗಲಿರುವ ವಿಧೇಯಕಗಳ ಸಂಖ್ಯೆ ಕಡಿತಗೊಳಿಸಿದರೆ ಒಳಿತು ಎಂಬುದಾಗಿ ಒತ್ತಾಯಿಸಿದವು ಎನ್ನಲಾಗಿದೆ.
Rain Loss | ಮಳೆ, ಪ್ರವಾಹದಿಂದ ಅಪಾರ ಹಾನಿ: ರಾಜ್ಯಕ್ಕೆ ಆಗಮಿಸಿದ ಕೇಂದ್ರ ಸಮೀಕ್ಷಾ ತಂಡ
ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಮಳೆ

ಬೆಳಗಾವಿ: ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ನೂರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಕೃಷ್ಣಾ ಹಾಗೂ ಉಪ ನದಿಗಳು, ಘಟಪ್ರಭಾ, ಮಲಪ್ರಭಾ, ಹಿರಣ್ಯಕೇಶಿ, ಮಾರ್ಕಂಡೇಯ ನದಿಗಳು ಉಕ್ಕಿ ಹರಿಯುತ್ತಿವೆ.

ಘಟಪ್ರಭಾ ಹಾಗೂ ಮಲಪ್ರಭಾ ನದಿಗೆ ಜಲಾಶಯಗಳಿಂದ ಭಾರೀ ಪ್ರಮಾಣದಲ್ಲಿ ನೀರು ಬಿಟ್ಟಿದ್ದರಿಂದ ನದಿ ತೀರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಹೀಗಾಗಿ ಹಲವರು ಮನೆ ತೊರೆದು ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ. ನಿರಂತರ ಮಳೆಯಿಂದ ಬೆಳಗಾವಿ ತಾಲೂಕಿನಲ್ಲಿ ಮಾರ್ಕಂಡೆಯ ಹಾಗೂ ಬಳ್ಳಾರಿ ನಾಲಾ ಉಕ್ಕಿ ಹರಿಯುತ್ತಿದ್ದು ಅಕ್ಕಪಕ್ಕದ ಕೃಷಿ ಭೂಮಿಗೆ ನೀರು ನುಗ್ಗಿ ಹಾನಿಯಾಗಿದೆ.
HD Kumaraswamy | ಮಳೆ ನಿಂತ ಮೇಲೆ ಜೆಡಿಎಸ್‌ 'ಪಂಚರತ್ನ ರಥಯಾತ್ರೆ' ಆರಂಭ: ಎಚ್.ಡಿ.ಕುಮಾರಸ್ವಾಮಿ
ಬೆಳಗಾವಿ ತಾಲೂಕಿನಲ್ಲಿ ಸೆ.1ರಿಂದ 11ರವರೆಗೆ ಒಟ್ಟು 156 ಮನೆಗಳಿಗೆ ಮಳೆಯಿಂದ ಹಾನಿಯಾಗಿದೆ ಎಂದು ತಹಸೀಲ್ದಾರ್‌ ಮಾಹಿತಿ ನೀಡಿದ್ದಾರೆ.

ಮಡಿಕೇರಿ: ಥಂಡಿಗೆ ಫಸಲು ಹಾಳು

ಮಡಿಕೇರಿ ಜಿಲ್ಲೆಯಲ್ಲಿ ಮಳೆಯ ವಾತಾವರಣ ಮುಂದುವರಿದಿರುವುದು ಕೃಷಿಕರ ಆತಂಕಕ್ಕೆ ಕಾರಣವಾಗಿದೆ. ಶೀತ ವಾತಾವರಣದಿಂದಾಗಿ ತೋಟಗಾರಿಕೆ ಬೆಳೆಗಳ ಫಸಲು ಹಾಳಾಗುತ್ತಿದ್ದು, ಆರ್ಥಿಕ ಪರಿಸ್ಥಿತಿ ಏರುಪೇರಾಗುವ ಸಾಧ್ಯತೆ ಇದ್ದು, ವಾರ್ಷಿಕ ನಿರ್ವಹಣೆ ಕೆಲಸವೂ ನನೆಗುದಿಗೆ ಬಿದ್ದಿದೆ.

ಹವಾಮಾನ ಮುನ್ಸೂಚನೆ ಪ್ರಕಾರ ಕಡಿಮೆ ಮಳೆ ಎನ್ನಲಾಗಿದ್ದು, ಜಿಲ್ಲೆಯ ಸ್ಥಳೀಯ ಹವಾಮಾನ ಪರಿಸ್ಥಿತಿಗಳಿಂದಾಗಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದಕ್ಕೆ ಹವಾಮಾನ ಪರಿಸ್ಥಿತಿಗಳಲ್ಲಿನ ಅನಿರೀಕ್ಷಿತ ಬದಲಾವಣೆ ಕಾರಣ ಎಂದು ಇಲಾಖೆ ಹೇಳಿದೆ. ಹಾಗಾಗಿ ಇನ್ನೂ 2 ದಿನ ಕೊಡಗಿನಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.
Bengaluru Mysuru Expressway: ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟನೆ ದಸರಾಗೆ ಡೌಟು
ನಾಳೆಯಿಂದ ಮಳೆಯ ಪ್ರಮಾಣ ನಿಧಾನಕ್ಕೆ ಇಳಿಮುಖ ಆಗಲಿದ್ದು, ರೈತರು ಅಗತ್ಯ ಕೃಷಿ ಚಟುವಟಿಕೆ ಕೈಗೊಳ್ಳಬಹುದು ಎಂದು ಹವಾಮಾನ ವರದಿಗಳನ್ನು ಆಧರಿಸಿ ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ತಜ್ಞರು ಶುಕ್ರವಾರ (ಸೆ.9) ಸಲಹೆ ನೀಡಿದ್ದರು. ಆದರೆ ಮಳೆ ಮತ್ತೆ ಮುಂದುವರಿದಿದೆ. ಕೃಷಿಕರ ಮೇಲೆ ಇದರ ನೇರ ಪರಿಣಾಮ ಆಗುತ್ತಿದೆ. ಜನವರಿಯಿಂದ ಇಲ್ಲಿಯ ತನಕ 3091.58 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ2308.04 ಮಿ.ಮೀ ಮಳೆಯಾಗಿತ್ತು.

ತೋಟಗಾರಿಕೆ ಬೆಳೆ ಹಾಳು: ಈ ಬಾರಿಯ ಅತಿವೃಷ್ಟಿಯಿಂದಾಗಿ ಕೃಷಿಯಲ್ಲಿ ಜಿಲ್ಲೆಯಲ್ಲಿ25.6 ಲಕ್ಷ ರೂ.ಗಳಷ್ಟು ನಷ್ಟ ಸಂಭವಿಸಿದೆ. 39.8 ಲಕ್ಷ ರೂ.ಗಳಷ್ಟು ಮೊತ್ತದ ತೋಟಗಾರಿಕೆ ಬೆಳೆಗಳು ಹಾಳಾಗಿದೆ. ಮೀನುಗಾರಿಕೆಗೆ ಸಂಬಂಧಿಸಿದಂತೆ 15.16 ಲಕ್ಷ ರೂ. ಗಳಷ್ಟು ಹಾನಿ ಯಾಗಿರುವುದಾಗಿ ಜಿಲ್ಲಾಡಳಿತ ಅಂದಾಜು ಮಾಡಿದೆ.
ಮಳೆ, ಪ್ರವಾಹ ಹಾನಿ ಬಗ್ಗೆ ಕೇಂದ್ರದ ತಂಡದ ಗಮನಕ್ಕೆ ತರಲಾಗಿದೆ: ಬಸವರಾಜ ಬೊಮ್ಮಾಯಿ
ಆದರೆ, ಆಗಿರುವ ನಷ್ಟದ ಪ್ರಮಾಣ ಜಿಲ್ಲಾಡಳಿತದ ಅಂದಾಜಿಗಿಂತಲೂ ಹೆಚ್ಚು ಇದೆ ಎನ್ನುತ್ತಾರೆ ಕೃಷಿಕರು. ಬಹುತೇಕ ಕಡೆಗಳಲ್ಲಿಸಂಪೂರ್ಣ ತೋಟವೇ ಹಾಳಾಗಿದೆ. ಮತ್ತೆ ಮೊದಲಿನ ಸ್ಥಿತಿಗೆ ಬರಲು ಇನ್ನೂ 5-6 ವರ್ಷಗಳು ಬೇಕಾಗಬಹುದು. ಈ ನಷ್ಟವನ್ನು ತುಂಬಿಕೊಡುವವರು ಯಾರು ಎಂದು ಪ್ರಶ್ನಿಸುತ್ತಾರೆ.

ಕಾಫಿ, ಕರಿಮೆಣಸು, ಅಡಿಕೆ ಫಸಲು ಈ ಬಾರಿಗೆ ಕೈಗೆ ಸಿಗುವುದಿಲ್ಲಎನ್ನುವುದು ಬೆಳೆಗಾರರ ಮಾತು. ಭೂಮಿಯಲ್ಲಿಶೀತದ ಪ್ರಮಾಣ ಹೆಚ್ಚಾಗುತ್ತಿದ್ದು, ಕೊಳೆರೋಗವೂ ತೋಟಗಾರಿಕೆ ಬೆಳೆಗಳನ್ನು ಕಾಡುತ್ತಿದೆ. ಗೊಬ್ಬರ ಹಾಕುವುದು ಸೇರಿದಂತೆ ತೋಟದ ನಿರ್ವಹಣಾ ಕೆಲಸಗಳನ್ನು ಮಾಡುವುದಕ್ಕೆ ಇದು ಸಕಾಲವಾಗಿದ್ದು , ಮಳೆಯ ಕಾರಣದಿಂದ ಏನೂ ಮಾಡಲಾಗುತ್ತಿಲ್ಲ ಎನ್ನುತ್ತಾರೆ ಬೆಳೆಗಾರರು.
ಲೇಖಕರ ಬಗ್ಗೆ
ಹೇಮಂತ್ ಕುಮಾರ್ ಎಸ್
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತನಾಗಿ 2022ರಿಂದ ಕಾರ್ಯನಿರ್ವಹಿಸುತ್ತಿರುವ ಹೇಮಂತ್ ಮಾಧ್ಯಮ ರಂಗಕ್ಕೆ ಅಧಿಕೃತ ಪ್ರವೇಶ ಆಗಿದ್ದು 2011ರಲ್ಲಿ ನ್ಯೂಸ್ ಚಾನೆಲ್ ಮೂಲಕ. ಅದಕ್ಕೂ ಹಿಂದಿನಿಂದ ವಾರಪತ್ರಿಕೆಗಳಿಗೆ ಪ್ರಚಲಿತ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಿಸಿದ ಲೇಖನಗಳ ಬರವಣಿಗೆಯಿಂದ ಬರಹದ ನಂಟು ಬೆಳೆಸಿಕೊಂಡಿದ್ದರು. ಸಿನಿಮಾ, ಕ್ರೈಂ, ರಾಜಕೀಯ, ಮೆಟ್ರೊ, ಕನ್ನಡ ಮತ್ತು ಸಂಸ್ಕೃತಿ, ಶಿಕ್ಷಣ, ರಾಷ್ಟ್ರ-ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ವಿಸ್ತರಿಸಿಕೊಂಡಿದ್ದಾರೆ. ಟಿವಿ, ಪತ್ರಿಕೆ, ಡಿಜಿಟಲ್‌/ ವೆಬ್‌, ಕೆಲ ಸಮಯ ರೇಡಿಯೊ ಚಾನೆಲ್‌ನಲ್ಲೂ ತೊಡಗಿಸಿಕೊಂಡ ಅನುಭವಿರುವ ಇವರ ಮಂತ್ರ 'ಬದುಕು ನಿರಂತರ'. ಚಾರಣ, ರಂಗಭೂಮಿ, ಪ್ರವಾಸ, ಓದು,...ಹೀಗೆ ಒಂದಷ್ಟು ಅಭ್ಯಾಸ-ಹವ್ಯಾಸಗಳು ಜೊತೆಗಿವೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ