ಆ್ಯಪ್ನಗರ

ಬುಧವಾರವೇ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಘೋಷಣೆ!

ಕರ್ನಾಟಕದ ನೂತನ ಮುಖ್ಯಮಂತ್ರಿಯ ಹೆಸರನ್ನು ಬುಧವಾರ ಸಂಜೆ ಘೋಷಣೆ ಮಾಡಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಮಂಗಳವಾರ ಸಂಜೆ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೆಸರನ್ನು ಆಯ್ಕೆ ಮಾಡಲಾಗುತ್ತದೆ.

Written byಇರ್ಷಾದ್ ಉಪ್ಪಿನಂಗಡಿ | Vijaya Karnataka Web 27 Jul 2021, 1:44 pm

ಹೈಲೈಟ್ಸ್‌:

  • ಮಂಗಳವಾರ ಸಂಜೆ ನಡೆಯಲಿರುವ ಬಿಜೆಪಿ ಶಾಸಕಾಂಗ ಸಭೆ
  • ದಿಲ್ಲಿಯಲ್ಲಿ ಮುಖ್ಯಮಂತ್ರಿ ಸ್ಥಾನದ ಅರ್ಹರ ಬಗ್ಗೆ ಸಮಾಲೋಚನೆ
  • ಬುಧವಾರ ಸಂಜೆ ವೇಳೆಗೆ ಮುಖ್ಯಮಂತ್ರಿ ಹೆಸರು ಘೋಷಣೆ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Arun Singh
ಬೆಂಗಳೂರು: ರಾಜ್ಯದ ಮುಂದಿನ ಸಿಎಂ ಯಾರು ಎಂಬುವುದು ಬುಧವಾರವೇ ಘೋಷಣೆ ಆಗಲಿದೆ. ಮಂಗಳವಾರ ಸಂಜೆ ಏಳು ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಶಾಸಕಾಂಗ ಸಭೆಯಲ್ಲಿ ಶಾಸಕರ ಅಭಿಪ್ರಾಯವನ್ನು ಅರುಣ್ ಸಿಂಗ್ ಸೇರಿದಂತೆ ವರಿಷ್ಠರು ಪಡೆಯಲಿದ್ದಾರೆ.
ಇದಾದ ಬಳಿಕ ದೆಹಲಿಗೆ ತೆರಳಿರುವ ಅರುಣ್ ಸಿಂಗ್ ಹಾಗೂ ವೀಕ್ಷಕರು ಸಂಸದೀಯ ಮಂಡಳಿ ಸಭೆಯಲ್ಲಿ ಅಂತಿಮ ಚರ್ಚೆಯನ್ನು ನಡೆಸಿ ಬುಧವಾರ ಸಂಜೆಯ ವೇಳೆಗೆ ಸಿಎಂ ಹೆಸರು ಘೋಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯಕ್ಕೆ ಆಗಮಿಸಲಿದ್ದಾರೆ ಅರುಣ್ ಸಿಂಗ್, ಸಂಜೆ ನಡೆಯಲಿದೆ ಶಾಸಕಾಂಗ ಪಕ್ಷದ ಸಭೆ!
ಸದ್ಯ ಮುರುಗೇಶ್ ನಿರಾಣಿ, ಅರವಿಂದ ಬೆಲ್ಲದ, ಬಸವರಾಜ ಬೊಮ್ಮಾಯಿ ಅವರ ಹೆಸರುಗಳು ಲಿಂಗಾಯತ ಕೋಟಾದಲ್ಲಿ ಕೇಳಿ ಬರುತ್ತಿದೆ. ಜೊತೆಗೆ ಪ್ರಹ್ಲಾದ ಜೋಶಿ ಹೆಸರೂ ಮುಂಚೂಣಿಯಲ್ಲಿದೆ. ಆದರೆ ಅಂತಿಮ ಆಯ್ಕೆಯನ್ನು ಹೈಕಮಾಂಡ್ ನಡೆಸಲಿದೆ.

ಅಷ್ಟೇ ಅಲ್ಲದೆ ಮುಂದಿನ ಸಿಎಂ ಆಯ್ಕೆ ವಿಚಾರವಾಗಿ ಯಡಿಯೂರಪ್ಪ ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುವುದು ಬಿಜೆಪಿ ಮೂಲಗಳ ಮಾಹಿತಿ.

ಮಂಗಳವಾರ ಸಂಜೆ 7:00 ಗಂಟೆಗೆ 'ರಾಜಭವನ ರಸ್ತೆಯ ಕ್ಯಾಪಿಟಲ್ ಹೋಟೆಲ್'ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ