ಆ್ಯಪ್ನಗರ

ಸರ್ಜಿಕಲ್ ಸ್ಟ್ರೈಕ್ ಸಂಭ್ರಮ: ಯುದ್ಧ ಘೋಷಣೆ ಆದ್ರೆ ಅಖಾಡಕ್ಕಿಳಿಯಲು ಸಿದ್ಧ ಎಂದ ಮಾಜಿ ಯೋಧರು

ಪುಲ್ವಾಮದಲ್ಲಿ ಸಿಆರ್‌ಪಿಎಫ್ ಯೋಧರ ಮೇಲಿನ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯ ವಾಯುಪಡೆ ಪಾಕಿಸ್ತಾನದ ಉಗ್ರನೆಲೆಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ರಾಜ್ಯಾದ್ಯಂತ ಸಂಭ್ರಮಾಚರಣೆ ಕಂಡುಬಂದಿದೆ.

Vijaya Karnataka Web 26 Feb 2019, 2:55 pm
ಬೆಂಗಳೂರು: ಪುಲ್ವಾಮದಲ್ಲಿ ಸಿಆರ್‌ಪಿಎಫ್ ಯೋಧರ ಮೇಲಿನ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯ ವಾಯುಪಡೆ ಪಾಕಿಸ್ತಾನದ ಉಗ್ರನೆಲೆಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ರಾಜ್ಯಾದ್ಯಂತ ಸಂಭ್ರಮಾಚರಣೆ ಕಂಡುಬಂದಿದೆ.
Vijaya Karnataka Web state


ಬಾಗಲಕೋಟೆಯಲ್ಲಿ ಜಿಲ್ಲಾ ನಿವೃತ್ತ ಯೋಧರು ಜಿಲ್ಲಾಡಳಿತ ಕಚೇರಿ ಮುಂದೆ ವಿಜಯೋತ್ಸವ ಆಚರಿಸಿದರು. ಒಂದು ವೇಳೆ ಪಾಕಿಸ್ತಾನದ ವಿರುದ್ಧ ಯುದ್ಧ ಘೋಷಣೆಯಾದರೆ, ರಣಾಂಗಣಕ್ಕೆ ತೆರಳಲು ಸಿದ್ಧ ಎಂದು ಹೇಳುವ ಮೂಲಕ ದೇಶಾಭಿಮಾನ ಪ್ರದರ್ಶಿಸಿದರು. ಪಾಪಿ ಪಾಕಿಸ್ತಾನವನ್ನು ಸಂಪೂರ್ಣವಾಗಿ ಸೆದೆಬಡೆಯುವಂತೆ ಮಾಜಿ ಸೈನಿಕರು ಆಗ್ರಹಿಸಿದರು.

ಪಾಕ್ ಭಯೋತ್ಪಾದಕರ ಮೇಲೆ ಭಾರತೀಯ ವಾಯುಸೇನೆ ದಾಳಿ ನಡೆಸಿದ ಸುದ್ದಿ ಹೊರಬೀಳುತ್ತಿದ್ದಂತೆಯೇ ವಿಜಯಪುರದಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ನಗರದ ಶಿವಾಜಿ ವೃತ್ತದಲ್ಲಿ ಮಹಾನಗರ ಪಾಲಿಕೆ ಸದಸ್ಯ ರಾಹುಲ್ ಜಾಧವ ನೇತೃತ್ವದಲ್ಲಿ ಮರಾಠಾ ಸಮಾಜದ ಬಾಂಧವರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಯೋಧರ ಹುಟ್ಟಡಗಿಸಿದ ಭಾರತೀಯ ಸೇನೆ ಹಾಗೂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಪರ ಘೋಷಣೆ ಕೂಗಿದರು.

ಮಂಗಳೂರಿನ ರಥಬೀದಿ, ಪಿವಿಎಸ್‌ ಬಳಿಯ ಬಿಜೆಪಿ ಕಚೇರಿ ಬಳಿ ಸಾರ್ವಜನಿಕರು ಪಟಾಕಿ ಸಿಡಿಸಿ ಉಗ್ರರ ದಮನಕ್ಕೆ ಸಂಭ್ರಮ ವ್ಯಕ್ತಪಡಿಸಿದರು.

ಜತೆಗೆ ಸಿಹಿತಿಂಡಿ, ಹಾಲು ಹಂಚಿ ಜನರು ದೇಶದ ಸೈನ್ಯದ ಪರಾಕ್ರಮವನ್ನು ಕೊಂಡಾಡಿದ್ದಾರೆ. ತ್ರಿವರ್ಣ ಧ್ವಜ ಹಿಡಿದು ಸೇನೆಯ ಪರ, ವಾಯುಪಡೆ ಮತ್ತು ಪ್ರಧಾನಿ ಮೋದಿ ಪರ ಘೋಷಣೆ ಕೂಗಿದ ಜನರು, ಉಗ್ರದಾಳಿಗೆ ತಕ್ಕ ಶಾಸ್ತಿ ಮಾಡಿದ ಕ್ರಮಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ