ಆ್ಯಪ್ನಗರ

ವಿಶ್ವಾಸಮತ ರಾಜಕೀಯ ಷಡ್ಯಂತ್ರ : ಬಿಎಸ್‌ವೈ

ವಿಶ್ವಾಸಮತ ಯಾಚನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಮುಂದಾಗಿರುವುದು ರಾಜಕೀಯ ಷಡ್ಯಂತ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌...

Vijaya Karnataka 14 Jul 2019, 5:00 am
ಬೆಂಗಳೂರು: ವಿಶ್ವಾಸಮತ ಯಾಚನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಮುಂದಾಗಿರುವುದು ರಾಜಕೀಯ ಷಡ್ಯಂತ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Vijaya Karnataka Web 9C605ED3-2A9A-43EE-AB3D-D82E84F04579


ತಮ್ಮ ನಿವಾಸದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ''ಮೈತ್ರಿ ಸರಕಾರ ಇನ್ನು ಕೆಲವೇ ದಿನಗಳಲ್ಲಿ ಬಿದ್ದು ಹೋಗಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಮುಖ್ಯಮಂತ್ರಿ ಕುಮಾರಸ್ವಾಮಿ ಯಾವ ಪುರುಷಾರ್ಥಕ್ಕೆ ವಿಶ್ವಾಸಮತ ಯಾಚನೆ ಮಾಡುತ್ತಿದ್ದಾರೋ ಗೊತ್ತಿಲ್ಲ. ಆದರೂ ಅವರ ನಿರ್ಧಾರವನ್ನು ನಾನು ಸ್ವಾಗತ ಮಾಡುತ್ತೇನೆ,'' ಎಂದು ಹೇಳಿದರು.

''ಮೈತ್ರಿ ಸರಕಾರದ ನಡೆಯಿಂದ ಬೇಸತ್ತ ಇನ್ನಷ್ಟು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೂ ಆಶ್ಚರ‍್ಯವಿಲ್ಲ. ಹೀಗಾಗಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆಗೆ ಮುಂದಾಗಿದ್ದಾರೆ. ಅತೃಪ್ತ ಶಾಸಕರನ್ನು ಸೆಳೆಯುವ ಪ್ರಯತ್ನದಲ್ಲೂ ಅವರು ನಿರತರಾಗಿದ್ದಾರೆ. ಆದರೆ ಇದ್ಯಾವ ಪ್ರಯತ್ನದಲ್ಲೂ ಅವರು ಯಶಸ್ವಿಯಾಗುವುದಿಲ್ಲ. ಸರಕಾರ ಕೆಲವೇ ದಿನಗಳಲ್ಲಿ ಬಿದ್ದು ಹೋಗುತ್ತದೆ. ಈಗಿನ ವಾತಾವರಣ ನಮಗೆ ಅನುಕೂಲಕರವಾಗಿದೆ,'' ಎಂದು ಅಭಿಪ್ರಾಯಪಟ್ಟರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ