ಆ್ಯಪ್ನಗರ

ರಾಮಲಿಂಗಾ ರೆಡ್ಡಿ ಜತೆ ಬಿಜೆಪಿ ನಾಯಕರ ಭೇಟಿ

ಕಾಂಗ್ರೆಸ್‌ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರನ್ನು ಬಿಜೆಪಿ ಶಾಸಕ ಎಸ್‌. ಆರ್‌ ವಿಶ್ವನಾಥ್‌, ಬಿಬಿಎಂಪಿ ಪ್ರತಿಪಕ್ಷ ನಾಯಕ ಪದ್ಮನಾಭ ರೆಡ್ಡಿ ಸೇರಿದಂತೆ ಬಿಜೆಪಿ ನಾಯಕರು ಭೇಟಿ ಮಾಡಿ ಮಾತುಕತೆ ನಡೆಸಿದರು. ಆದರೆ ಈ ಭೇಟಿಯಲ್ಲಿ ಯಾವುದೇ ರಾಜಕೀಯ ಮಾತುಕತೆ ನಡೆದಿಲ್ಲ ಎಂದು ಬಿಜೆಪಿ ನಾಯಕರು ಮತ್ತು ಸ್ವತಃ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

Vijaya Karnataka Web 13 Jul 2019, 11:13 am
ಬೆಂಗಳೂರು: ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ನಿವಾಸಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿದ್ದು ಮಾತುಕತೆ ನಡೆಸುತ್ತಿದ್ದಾರೆ.
Vijaya Karnataka Web Ramalinga Reddy


ಅತೃಪ್ತರ ಬಣದಲ್ಲಿ ಗುರುತಿಸಿಕೊಂಡಿರುವ ರಾಮಲಿಂಗಾ ರೆಡ್ಡಿ ಅವರ ಜತೆ ಬಿಜೆಪಿ ಶಾಸಕ ಎಸ್‌.ಆರ್ ವಿಶ್ವನಾಥ್‌, ಬಿಬಿಎಂಪಿ ಪ್ರತಿಪಕ್ಷದ ನಾಯಕ ಪದ್ಮನಾಭ ರೆಡ್ಡಿ ಸೇರಿದಂತೆ
ಬಿಜೆಪಿ ನಾಯಕರು ಶನಿವಾರ ಬೆಳಗ್ಗೆ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಜುಲೈ 15ರ ವರೆಗೆ ಯಾವುದೇ ರಾಜಕೀಯ ತೀರ್ಮಾನವಿಲ್ಲ. 15ರಂದು ಸ್ಪೀಕರ್ ಮುಂದೆ ಹಾಜರಾಗುತ್ತೇನೆ. ವಿಧಾನಸಭೆ ಅಧಿವೇಶನದಲ್ಲೂ ಪಾಲ್ಗೊಳ್ಳುತ್ತೇನೆ ಎಂದು ರಾಮಲಿಂಗಾ ರೆಡ್ಡಿ ಸುದ್ದಿಗಾರರಿಗೆ ತಿಳಿಸಿದರು.

ದೋಸ್ತಿ ಸರಕಾರದ ಅಳಿವು-ಉಳಿವು: ರಾಜಕೀಯ ನಾಟಕದಲ್ಲಿ ಎಲ್ಲರ ಕಣ್ಣೂ ಇವರ ಮೇಲೆ


ರಾಮಲಿಂಗಾ ರೆಡ್ಡಿ ಅವರ ಜತೆ ರಾಜಕೀಯ ಚರ್ಚೆ ನಡೆಸಿಲ್ಲ. ರೆಡ್ಡಿ ಸಂಘದ ಚುನಾವಣೆಗೆ ಸಂಬಂಧಿಸಿದಂತೆ ಮಾತುತೆ ನಡೆಸಿದೆವು ಎಂದು ಬಿಜೆಪಿ ಶಾಸಕ ಎಸ್‌.ಆರ್ ವಿಶ್ವನಾಥ್ ತಿಳಿಸಿದರು.
ಎಂಟಿಬಿ ಮನವೊಲಿಸುವ ಸಚಿವ ಡಿಕೆಶಿ ಯತ್ನ ವಿಫಲ; ಡಿಸಿಎಂ ಪರಮೇಶ್ವರ್‌ ಮರು ಯತ್ನ
ಅವರು ಏನೇ ನಿರ್ಧಾರ ಮಾಡಿದರೂ ಅದು ಅವರದ್ದೇ ಆಗಿರುತ್ತದೆ. ಅವರು ಅತ್ಯಂತ ಬಲಿಷ್ಠ ಹಾಗೂ ದೃಢ ವ್ಯಕ್ತಿತ್ವದ ನಾಯಕರು ಎಂದು ವಿಶ್ವನಾಥ್ ಬಣ್ಣಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ