ಆ್ಯಪ್ನಗರ

ಅತೃಪ್ತರ ರಾಜೀನಾಮೆ ಅಂಗೀಕರಿಸುವಂತಿಲ್ಲ, ಅನರ್ಹತೆಯೂ ಇಲ್ಲ: ಮಂಗಳವಾರದ ವರೆಗೂ ಯಥಾಸ್ಥಿತಿ

ಕರ್ನಾಟಕದ ರಾಜಕೀಯ ಬಿಕ್ಕಟ್ಟು ಮಂಗಳವಾರದ ವರೆಗೂ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ಅತೃಪ್ತ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರಕ್ಕೆ ಮುಂದೂಡಿದೆ. ಹೀಗಾಗಿ ಸ್ಪೀಕರ್‌ ಶಾಸಕರನ್ನು ಅಲ್ಲಿಯವರೆಗೂ ಅನರ್ಹಗೊಳಿಸುವಂತಿಲ್ಲ, ರಾಜೀನಾಮೆಯನ್ನೂ ಅಂಗೀಕರಿಸುವಂತಿಲ್ಲ. ಹೀಗಾಗಿ ಎರಡೂ ಬಣಗಳಿಗೆ ತಾತ್ಕಾಲಿಕ ಸಮಾಧಾನ ದೊರೆತಿದೆ.

Vijaya Karnataka Web 12 Jul 2019, 2:14 pm
ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಬಗ್ಗೆ ಮಂಗಳವಾರದ ವರೆಗೆ ಯಥಾಸ್ಥಿತಿ ಮುಂದುವರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದರಿಂದ ಅತೃಪ್ತ ಶಾಸಕರಿಗೂ ಅನರ್ಹತೆ ಭೀತಿಯಿಂದ ತಾತ್ಕಾಲಿಕ ಮುಕ್ತಿ ದೊರೆತಿದೆ. ಸಮ್ಮಿಶ್ರ ಸರಕಾರಕ್ಕೂ ನಾಲ್ಕು ದಿನಗಳ ಕಾಲ ಜೀವದಾನ ದೊರೆತಂತಾಗಿದೆ.
Vijaya Karnataka Web Supreme Court


ವಿಶ್ವಾಸಮತ ಯಾಚನೆಗೆ ಸಿದ್ಧ: ಸಿಎಂ ಕುಮಾರಸ್ವಾಮಿ

ಅತೃಪ್ತ ಶಾಸಕರು ಸ್ಪೀಕರ್ ವಿರುದ್ಧ ಸಲ್ಲಿಸಿದ ಅರ್ಜಿ ಹಾಗೂ ಸ್ಪೀಕರ್ ಮತ್ತು ರಾಜ್ಯ ಸರಕಾರ ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಿದ್ದು, ವಿಚಾರಣೆ ಅಪೂರ್ಣವಾಗಿದೆ. ಸ್ಪೀಕರ್ ಪರ ವಕೀಲ ಅಭಿಷೇಕ್ ಮನುಸಿಂಘ್ವಿ ಮತ್ತು ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ಅವರ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ನ್ಯಾಯಪೀಠ ಪ್ರಕರಣದ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿತು. ಅಲ್ಲಿಯವರೆಗೂ ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿತು.

ಕರ್ನಾಟಕ ಬಿಕ್ಕಟ್ಟು: ನಮ್ಮ ಅಧಿಕಾರ ವ್ಯಾಪ್ತಿ ಪ್ರಶ್ನಿಸುತ್ತೀರಾ? ಸ್ಪೀಕರ್ ವಿರುದ್ಧ ಸುಪ್ರೀಂ ಅಸಮಾಧಾನ


ಹೀಗಾಗಿ ಅನರ್ಹತೆ ಭೀತಿ ಎದುರಿಸುತ್ತಿದ್ದ ಅತೃಪ್ತ ಶಾಸಕರೂ ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ. ಪತನದ ಭೀತಿಯಿಂದ ಕಂಗೆಟ್ಟ ಸಮ್ಮಿಶ್ರ ಸರಕಾರಕ್ಕೂ ತಾತ್ಕಾಲಿಕ ರಿಲೀಫ್‌ ಸಿಕ್ಕಿದಂತಾಗಿದೆ.
ಸಂವಿಧಾನದ ಮೇಲೆ ಅತ್ಯಾಚಾರ ಎಸಗಲ್ಲ: ಸ್ಪೀಕರ್ ರಮೇಶ್ ಕುಮಾರ್

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ