ಬೆಂಗಳೂರು: ಇಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ.ಕನ್ನಡ ರಾಜ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಧ್ವಜಾರೋಹಣ ನಡೆಸಿದರು.ಬೆಂಗಳೂರಿನ ಕಂಠೀರವ ಮೈದಾನದಲ್ಲಿ ಮೊದಲು ರಾಷ್ಟ್ರಧ್ವಜಾರೋಹಣದ ಬಳಿಕ ಕನ್ನಡ ಧ್ವಜಾರೋಹಣ ನಡೆಸಿದರು.
ಗಣ್ಯರಿಂದ ಕನ್ನಡ ರಾಜ್ಯೋತ್ಸವ ಶುಭಾಶಯ, ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ
ಬಳಿಕ ಶಾಲಾ ಮಕ್ಕಳಿಂದ ಗೌರವ ವಂದನೆಯನ್ನು ಸಿಎಂ ಬಿಎಸ್ವೈ ಸ್ಪೀಕರಿಸಿದರು. ಇದೇ ಸಂಧರ್ಭದಲ್ಲಿ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಧ್ವಜಾರೋಹಣದ ಬಳಿಕ ಮಾತನಾಡಿದ ಸಿಎಂ ಬಿಎಸ್ವೈ, ಕನ್ನಡ ಭಾಷೆಗೆ ಎರಡುಸಾವಿರ ವರ್ಷಗಳ ಇತಿಹಾಸವಿದೆ. ಜಗತ್ತಿನಲ್ಲಿ ಅತ್ಯುತ್ತಮ ಸಾಹಿತ್ಯ ಸಂಪತ್ತನ್ನು ಹೊಂದಿರುವ ಭಾಷೆಗಳಲ್ಲಿ ಕನ್ನಡವೂ ಒಂದು.
ಆದಿ ಕವಿ ಪಂಪನಿಂದ ಹಿಡಿದು ಕುವೆಂಪುವರೆಗೆ, ಹರಿಹರರಿಂದ ಹಿಡಿದು ಬಸವಣ್ಣನವರೆಗೆ ಪ್ರಾಚೀನ ಮಧ್ಯಯುಗ, ಆಧುನಿಕ, ನವೋದಯ, ನವ್ಯ, ಬಂಡಾಯ, ದಲಿತ ಸಾಹಿತ್ಯ ಪರಂಪರೆಯಲ್ಲಿ ಕನ್ನಡ ಭಾಷೆ ಉತ್ಕೃಷ್ಟವಾಗಿ ಹೊರಹೊಮ್ಮಿದೆ ಎಂದರು.
'ರಾಜ್ಯೋತ್ಸಾಹ'ದ ನೆನಪು! 4 ಹೋಳಾಗಿದ್ದ ಕರುನಾಡು ಒಂದಾದ ಸಾಹಸಗಾಥೆ: 'ಮೈಸೂರು' ಕರ್ನಾಟಕವಾದ ಕಥೆ
ಇದೇ ಸಂದರ್ಭದಲ್ಲಿ ಕನ್ನಡ ಅಭಿಮಾನ ಕೇವಲ ಆಚರಣೆಗೆ ಸೀಮಿತವಾಗದೆ ನಮ್ಮ ಜೀವನ ಶೈಲಿಯಾಗಬೇಕು ಎಂದ ಅವರು, ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರಸ್ಥಾನ ಈ ಕುರಿತಾಗಿ ಯಾವುದೇ ರಾಜಿಗೆ ಅವಕಾಶವಿಲ್ಲ. ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆ. ಕನ್ನಡದ ಬೆಳವಣಿಗೆಗೆ ಸರಕಾರ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲು ಬದ್ಧವಾಗಿದೆ. ಎಲ್ಲಾ ಕ್ಷೇತ್ರಗಳಲ್ಲಿ ಕನ್ನಡದ ಅನುಷ್ಠಾನ ಆಗಬೇಕು. ವಾಣಿಜ್ಯ, ವಹಿವಾಟು ಕ್ಷೇತ್ರದಲ್ಲೂ ಕನ್ನಡ ಬೆಳವಣಿಗೆ ಹೊಂದಬೇಕು.
ಕನ್ನಡಿಗರು ತಮ್ಮಮನೆಗಳಲ್ಲಿ ಕನ್ನಡ ವಾತಾವರಣವನ್ನು ಮೂಡಿಸಬೇಕು. ರಾಜ್ಯದಲ್ಲಿ ನೆಲೆಸಿರುವ ಎಲ್ಲ ಜನರು ಕೂಡ ಕನ್ನಡ ಕಲಿಯಬೇಕು. ಹೊರಗಡೆಯಿಂದ ಇಲ್ಲಿಗೆ ಬಂದು ನೆಲೆಸಿರುವವರು ಸಹ ಇಲ್ಲಿನ ಜನರೊಂದಿಗೆ ಬೆರೆತು ಕನ್ನಡ ಕಲಿಯಬೇಕು. ಇವರಿಗೆ ಕನ್ನಡ ಕಲಿಸುವ ಕೆಲಸವೂ ಆಗಬೇಕಿದೆ. ಎಲ್ಲೆಡೆ ಕನ್ನಡ ವಾತಾವರಣ ಮೂಡುವ ಅಗತ್ಯ ಇದೆ ಎಂದು ಸಿಎಂ ಯಡಿಯೂರಪ್ಪ ತಮ್ಮ ಭಾಷಣದಲ್ಲಿ
ಪ್ರತಿಪಾದಿಸಿದರು.
ಇನ್ನು ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ರಾಮನಗರದಲ್ಲೂ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಅಶ್ವಥ್ ನಾರಾಯಣ್
ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಎಸ್ಪಿ ಅನೂಪ್ ಎ ಶೆಟ್ಟಿ ಈ ವೇಳೆ ಉಪಸ್ಥಿತರಿದ್ದರು.
ರಾಯಚೂರಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸಚಿವ ಶ್ರೀ ರಾಮುಲು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಂತರದ ಭಾಷಣದಲ್ಲಿ ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ ಸಚಿವ ಶ್ರೀರಾಮುಲು, ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ವಿನಾ ಕಾರಣ ಯಾರೋ ನೀಡಿದ ತುಟ್ಟಿ ವಾಚು ಧರಿಸುವವರು ಟೀಕಿಸುತ್ತಾರೆ ಎಂದರು.
ಕೊಪ್ಪಳದಲ್ಲೂ ಕನ್ನಡದ ಹಬ್ಬ ಸಂಭ್ರಮದಿಂದ ನಡೆಯಿತು. ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯೋತ್ಸವ ನಿಮಿತ್ತ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಶಾಲಾ ಮಕ್ಕಳು, ಪೊಲೀಸ್, ಎನ್ ಸಿಸಿ, ಸೇವಾದಳ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಗೃಹ ರಕ್ಷಕ ದಳದಿಂದ ಪಥಸಂಚಲನ ನಡೆಯಿತು.
ಚಿಕ್ಕಮಗಳೂರಿನಲ್ಲಿ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪೊಲೀಸ್ ತುಕಡಿಗಳಿಂದ ಗೌರವರಕ್ಷೆ ಸ್ವೀಕರಿಸಿದರು.
ಗಣ್ಯರಿಂದ ಕನ್ನಡ ರಾಜ್ಯೋತ್ಸವ ಶುಭಾಶಯ, ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ
ಬಳಿಕ ಶಾಲಾ ಮಕ್ಕಳಿಂದ ಗೌರವ ವಂದನೆಯನ್ನು ಸಿಎಂ ಬಿಎಸ್ವೈ ಸ್ಪೀಕರಿಸಿದರು. ಇದೇ ಸಂಧರ್ಭದಲ್ಲಿ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಧ್ವಜಾರೋಹಣದ ಬಳಿಕ ಮಾತನಾಡಿದ ಸಿಎಂ ಬಿಎಸ್ವೈ, ಕನ್ನಡ ಭಾಷೆಗೆ ಎರಡುಸಾವಿರ ವರ್ಷಗಳ ಇತಿಹಾಸವಿದೆ. ಜಗತ್ತಿನಲ್ಲಿ ಅತ್ಯುತ್ತಮ ಸಾಹಿತ್ಯ ಸಂಪತ್ತನ್ನು ಹೊಂದಿರುವ ಭಾಷೆಗಳಲ್ಲಿ ಕನ್ನಡವೂ ಒಂದು.
ಆದಿ ಕವಿ ಪಂಪನಿಂದ ಹಿಡಿದು ಕುವೆಂಪುವರೆಗೆ, ಹರಿಹರರಿಂದ ಹಿಡಿದು ಬಸವಣ್ಣನವರೆಗೆ ಪ್ರಾಚೀನ ಮಧ್ಯಯುಗ, ಆಧುನಿಕ, ನವೋದಯ, ನವ್ಯ, ಬಂಡಾಯ, ದಲಿತ ಸಾಹಿತ್ಯ ಪರಂಪರೆಯಲ್ಲಿ ಕನ್ನಡ ಭಾಷೆ ಉತ್ಕೃಷ್ಟವಾಗಿ ಹೊರಹೊಮ್ಮಿದೆ ಎಂದರು.
'ರಾಜ್ಯೋತ್ಸಾಹ'ದ ನೆನಪು! 4 ಹೋಳಾಗಿದ್ದ ಕರುನಾಡು ಒಂದಾದ ಸಾಹಸಗಾಥೆ: 'ಮೈಸೂರು' ಕರ್ನಾಟಕವಾದ ಕಥೆ
ಇದೇ ಸಂದರ್ಭದಲ್ಲಿ ಕನ್ನಡ ಅಭಿಮಾನ ಕೇವಲ ಆಚರಣೆಗೆ ಸೀಮಿತವಾಗದೆ ನಮ್ಮ ಜೀವನ ಶೈಲಿಯಾಗಬೇಕು ಎಂದ ಅವರು, ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರಸ್ಥಾನ ಈ ಕುರಿತಾಗಿ ಯಾವುದೇ ರಾಜಿಗೆ ಅವಕಾಶವಿಲ್ಲ. ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆ. ಕನ್ನಡದ ಬೆಳವಣಿಗೆಗೆ ಸರಕಾರ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲು ಬದ್ಧವಾಗಿದೆ. ಎಲ್ಲಾ ಕ್ಷೇತ್ರಗಳಲ್ಲಿ ಕನ್ನಡದ ಅನುಷ್ಠಾನ ಆಗಬೇಕು. ವಾಣಿಜ್ಯ, ವಹಿವಾಟು ಕ್ಷೇತ್ರದಲ್ಲೂ ಕನ್ನಡ ಬೆಳವಣಿಗೆ ಹೊಂದಬೇಕು.
ಕನ್ನಡಿಗರು ತಮ್ಮಮನೆಗಳಲ್ಲಿ ಕನ್ನಡ ವಾತಾವರಣವನ್ನು ಮೂಡಿಸಬೇಕು. ರಾಜ್ಯದಲ್ಲಿ ನೆಲೆಸಿರುವ ಎಲ್ಲ ಜನರು ಕೂಡ ಕನ್ನಡ ಕಲಿಯಬೇಕು. ಹೊರಗಡೆಯಿಂದ ಇಲ್ಲಿಗೆ ಬಂದು ನೆಲೆಸಿರುವವರು ಸಹ ಇಲ್ಲಿನ ಜನರೊಂದಿಗೆ ಬೆರೆತು ಕನ್ನಡ ಕಲಿಯಬೇಕು. ಇವರಿಗೆ ಕನ್ನಡ ಕಲಿಸುವ ಕೆಲಸವೂ ಆಗಬೇಕಿದೆ. ಎಲ್ಲೆಡೆ ಕನ್ನಡ ವಾತಾವರಣ ಮೂಡುವ ಅಗತ್ಯ ಇದೆ ಎಂದು ಸಿಎಂ ಯಡಿಯೂರಪ್ಪ ತಮ್ಮ ಭಾಷಣದಲ್ಲಿ
ಪ್ರತಿಪಾದಿಸಿದರು.
ಇನ್ನು ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ರಾಮನಗರದಲ್ಲೂ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಅಶ್ವಥ್ ನಾರಾಯಣ್
ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಎಸ್ಪಿ ಅನೂಪ್ ಎ ಶೆಟ್ಟಿ ಈ ವೇಳೆ ಉಪಸ್ಥಿತರಿದ್ದರು.
ರಾಯಚೂರಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸಚಿವ ಶ್ರೀ ರಾಮುಲು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಂತರದ ಭಾಷಣದಲ್ಲಿ ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ ಸಚಿವ ಶ್ರೀರಾಮುಲು, ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ವಿನಾ ಕಾರಣ ಯಾರೋ ನೀಡಿದ ತುಟ್ಟಿ ವಾಚು ಧರಿಸುವವರು ಟೀಕಿಸುತ್ತಾರೆ ಎಂದರು.
ಕೊಪ್ಪಳದಲ್ಲೂ ಕನ್ನಡದ ಹಬ್ಬ ಸಂಭ್ರಮದಿಂದ ನಡೆಯಿತು. ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯೋತ್ಸವ ನಿಮಿತ್ತ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಶಾಲಾ ಮಕ್ಕಳು, ಪೊಲೀಸ್, ಎನ್ ಸಿಸಿ, ಸೇವಾದಳ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಗೃಹ ರಕ್ಷಕ ದಳದಿಂದ ಪಥಸಂಚಲನ ನಡೆಯಿತು.
ಚಿಕ್ಕಮಗಳೂರಿನಲ್ಲಿ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪೊಲೀಸ್ ತುಕಡಿಗಳಿಂದ ಗೌರವರಕ್ಷೆ ಸ್ವೀಕರಿಸಿದರು.