ಆ್ಯಪ್ನಗರ

ಡಿ.5ಕ್ಕೆ ಕರ್ನಾಟಕ ಬಂದ್‌, ಬೆಂಬಲ ವ್ಯಕ್ತಪಡಿಸಿದ ಕರವೇ

ಮರಾಠ ಅಭಿವೃದ್ಧಿ ನಿಗಮ ರಚನೆ ಮತ್ತು ಶಾಸಕರ ಕನ್ನಡದ್ರೋಹಿ ನಡವಳಿಕೆಗಳನ್ನು ಖಂಡಿಸಿ ಡಿ.5ರಂದು ಕರ್ನಾಟಕ ಬಂದ್ ನಡೆಸಲಾಗುತ್ತಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ವ್ಯಕ್ತಪಡಿಸಿದೆ.

Vijaya Karnataka Web 2 Dec 2020, 12:52 pm
ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ರಚನೆ ಮತ್ತು ಶಾಸಕರ ಕನ್ನಡದ್ರೋಹಿ ನಡವಳಿಕೆಗಳನ್ನು ಖಂಡಿಸಿ ಡಿ.5ರಂದು ನಾನಾ ಕನ್ನಡಪರ ಸಂಘಟನೆಗಳು ಕರೆ ನೀಡಿರುವ 'ಕರ್ನಾಟಕ ಬಂದ್‌'ಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಬೆಂಬಲ ವ್ಯಕ್ತಪಡಿಸಿದೆ.
Vijaya Karnataka Web Karnataka


ಕರವೇ ಸಂಘಟನೆಯ ಎಲ್ಲಾಕಾರ್ಯಕರ್ತರು ಕರ್ನಾಟಕ ಬಂದ್‌ಗೆ ವ್ಯಾಪಕ ಬೆಂಬಲ ನೀಡಿ ಯಶಸ್ವಿ-ಗೊಳಿ ಸುವಂತೆ ಸಂಘಟ ನೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಕರೆ ನೀಡಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ''ಅಂದು ಜಿಲ್ಲಾಕೇಂದ್ರ ಮತ್ತು ತಾಲೂಕು ಕೇಂದ್ರಗಳಲ್ಲಿಡಿಸಿ ಹಾಗೂ ತಹಸೀಲ್ದಾರ್‌ ಕಚೇರಿಗೆ ಕರವೇ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟಿಸಲಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು,'' ಎಂದು ತಿಳಿಸಿದ್ದಾರೆ.

''ನಮ್ಮ ಪ್ರತಿಭಟನೆ ಯಾವುದೇ ಸಮಾಜದ ವಿರುದ್ಧವಲ್ಲ. ಬದಲಾಗಿ ರಾಜಕೀಯ ಲಾಭಕ್ಕಾಗಿ ಸರಕಾರ ನಡೆಸುತ್ತಿರುವ ಒಡೆದು ಆಳುವ ನೀತಿಯ ವಿರುದ್ಧವಾಗಿದೆ. ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಶಾಂತಿಯುತ ಬಂದ್‌ ನಡೆಸಲು ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ,'' ಎಂದಿದ್ದಾರೆ.

ಇನ್ನು ಡಿ.5ರ ಕರ್ನಾಟಕ ಬಂದ್‌ಗೆ ಬೃಹತ್‌ ಬೆಂಗಳೂರು ಹೋಟೆಲ್‌ಗಳ ಸಂಘ ನೈತಿಕ ಬೆಂಬಲ ವ್ಯಕ್ತಪಡಿಸಿದೆ. ಈಗಾಗಲೇ ಕೋವಿಡ್‌-19ನಿಂದಾಗಿ ಹಲವು ತಿಂಗಳು ಹೋಟೆಲ್‌ಗಳನ್ನು ಮುಚ್ಚಲಾಗಿತ್ತು. ಕೆಲ ತಿಂಗಳಿಂದಷ್ಟೇ ಹೋಟೆಲ್‌ ತೆರೆಯಲಾಗಿದೆ. ಆದರೂ, ನಿರೀಕ್ಷಿತ ಮಟ್ಟದಲ್ಲಿ ಗ್ರಾಹಕರು ಬರುತ್ತಿಲ್ಲ. ಇಂತಹ ಸಮಯದಲ್ಲಿ ಹೋಟೆಲ್‌ ಮುಚ್ಚಿದರೆ ಮತ್ತೆ ಉದ್ಯಮಕ್ಕೆ ಹೊಡೆತ ಬೀಳುತ್ತದೆ. ಹೀಗಾಗಿ, ಅಂದು ಹೋಟೆಲ್‌ ಮುಚ್ಚದೆ ಎಂದಿನಂತೆ ಕಾರ್ಯನಿರ್ವಹಿಸಲಿವೆ'' ಎಂದು ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ