ಆ್ಯಪ್ನಗರ

40 ವರ್ಷದ ಬಳಿಕ ರಾಜ್ಯದಲ್ಲಿ ದಾಖಲೆಯ ಕುಂಭದ್ರೋಣ ಮಳೆ: ಸಂತ್ರಸ್ತರ ನೆರವಿಗೆ ಬನ್ನಿ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮವನ್ನು ಆವರಿಸಿದ ಕೃಷ್ಣಾನದಿ ನೀರು.

Vijaya Karnataka 8 Aug 2019, 8:43 am
ಬೆಂಗಳೂರು: ಹಳೆ ಮೈಸೂರು ಭಾಗದ ಆರೇಳು-ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದೆಲ್ಲೆಡೆ ಮಳೆ ಹಾಗೂ ಪ್ರವಾಹದ ಸುಳಿಯಲ್ಲಿ ಸಿಲುಕಿ ತತ್ತರಿಸಲಾರಂಭಿಸಿವೆ. ಕಳೆದ 40 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಇಷ್ಟೊಂದು ಕುಂಭದ್ರೋಣ ಮಳೆಯಾಗುತ್ತಿದ್ದು ಅತಿವೃಷ್ಟಿಯಿಂದಾಗಿ ಜನಜೀವನ ಅಸ್ತವ್ಯಸ್ತ ವಾಗಿದೆ.
Vijaya Karnataka Web BELAGAVIFLOOD


ಸಂತ್ರಸ್ತರು ನೆರವಿಗಾಗಿ ಮೊರೆಯಿಟ್ಟಿದ್ದಾರೆ. ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಾಗೂ ನೆರೆ ಪೀಡಿತ ಜಿಲ್ಲೆಗಳಲ್ಲಿ ವಿಜಯ ಕರ್ನಾಟಕ ನಡೆಸಿದ ರಿಯಾಲಿಟಿ ಚೆಕ್‌ ಪ್ರಕಾರ, ನೀರಿನಲ್ಲಿ ಕೊಚ್ಚಿ ಹೋದವರು ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಮಂದಿ ಮಳೆಯಿಂದ ಜೀವ ಕಳೆದುಕೊಂಡಿದ್ದಾರೆ.

ಸಾವಿರಾರು ಎಕರೆಯಲ್ಲಿ ಬೆಳೆದು ನಿಂತ ಫಸಲು ಕೊಚ್ಚಿಕೊಂಡು ಹೋಗಿದೆ. ಉತ್ತರ ಕರ್ನಾಟಕದಲ್ಲಿ ಸಾವಿರಾರು ಮನೆಗಳು ಕುಸಿಧಿದಿದ್ದು, ಜನರ ಸಂಕಷ್ಟವನ್ನು ಹೇಳತೀರದಾಗಿದೆ. ಉತ್ತರ ಕರ್ನಾಟಕ ಬೆಳಗಾವಿ ಜಿಲ್ಲೆಯಲ್ಲಿ 10 ದಿನದ ಹಿಂದೆ ಶುರುವಾದ ಮಳೆ ಮಲೆಧಿನಾಡು, ಕರಾವಳಿ, ಬಯಲು ಸೀಮೆಯನ್ನು ಸಂಪೂರ್ಣ ಆವರಿಸಿದೆ.

ಪರಿಹಾರ ಘೋಷಿಸಿದ ಸಿಎಂ

ದಿಲ್ಲಿ ಪ್ರವಾಸ ಮೊಟಕುಗೊಳಿಸಿರುವ ಸಿಎಂ ಯಡಿಯೂರಪ್ಪ ಬುಧವಾರ ಬೆಳಗಾವಿ ವಿಭಾಗದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಈ ಸಂದರ್ಭ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಪರಿಹಾರ ಕ್ರಮ ಕೈಗೊಳ್ಳಲು ಸೂಚಿಸಿದರು. ರಕ್ಷಣಾ ಕಾರ್ಯದ ವೇಳೆ ಅಪಘಾತದಲ್ಲಿ ಮೃತಪಟ್ಟ ಕಿತ್ತೂರು ಠಾಣೆ ಪಿಎಸ್‌ಐ ವೀರಣ್ಣ ಲಟ್ಟಿ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಿಸಿದರು.

ಒಂದೇ ದಿನ ಐವರ ಸಾವು

ಶಿವಮೊಗ್ಗ/ ಚಿಕ್ಕಮಗಳೂರು: ಮಲೆನಾಡಲ್ಲಿ ಬುಧವಾರ ಮಳೆಯ ರೌದ್ರಾವತಾರ ಮುಂದುವರಿದಿದೆ. ಪ್ರತ್ಯೇಕ ಘಟನೆಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಶಿಕಾರಿಪುರ ತಾಲೂಕು ಚಿಕ್ಕಮಾಗಡಿಯ ಲೋಕಪ್ಪ(45) ಗದ್ದೆಗೆ ಹೋದ ಸಂದರ್ಭ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಡಿಗೆರೆ ತಾಲೂಕು ಹಾಲೂರಲ್ಲಿ ತೋಟಕ್ಕೆ ತೆರಳಿದ್ದ ಶ್ರೀವತ್ಸ (21) ಎಂಬ ಯುವಕ ಹೇಮಾವತಿ ನದಿಯಲ್ಲಿ ಬುಧವಾರ ಸಂಜೆ ಕೊಚ್ಚಿಹೋಗಿದ್ದಾನೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ