ಕರ್ನಾಟಕ ರೆಡ್ಡಿ ಜನ ಸಂಘ ಆಗ್ರಹ
ಬಿಜೆಪಿ ಸರಕಾರವು ಕುತಂತ್ರ ರಾಜಕಾರಣದ ಮೂಲಕ ಮಹಿಳಾ ಶಾಸಕಿ ಸೌಮ್ಯರೆಡ್ಡಿ ಅವರ ಮೇಲೆ ಸುಳ್ಳು ದೂರನ್ನು ದಾಖಲಿಸಿ ಎಫ್ಐಆರ್ ದಾಖಲಿಸಿರುವುದನ್ನು ಕರ್ನಾಟಕ ರೆಡ್ಡಿ ಜನ ಸಂಘ ತೀವ್ರವಾಗಿ ಖಂಡಿಸಿದೆ.
ರಾಜ್ಯದಲ್ಲಿ ಈವರೆಗೆ 1.87 ಲಕ್ಷ ಜನರಿಗೆ ಕೊರೊನಾ ಲಸಿಕೆ
ಕೊರೊನಾ ಲಸಿಕೆ ಅಭಿಯಾನದಡಿ ರಾಜ್ಯದಲ್ಲಿ ಈವರೆಗೆ 1,87,211 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.
'ನಾನೂ ಆಮ್ ಆದ್ಮಿ' ಎಂದ ರಮೇಶ್ ಕುಮಾರ್
ನಾನು ಆರೋಗ್ಯ ಸಚಿವನಾಗಿದ್ದಾಗ ದೆಹಲಿಗೆ ಭೇಟಿ ಕೊಟ್ಟು ಅಲ್ಲಿನ ಮೊಹಲ್ಲಾ ಕ್ಲಿನಿಕ್, ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಆಶ್ಚರ್ಯಗೊಂಡೆ, ಅರವಿಂದ್ ಕೇಜ್ರಿವಾಲ್ ಅವರ ಕ್ರಾಂತಿಕಾರಕ ಬದಲಾವಣೆಗಳನ್ನು ನೋಡಿ ಅವರ ದೊಡ್ಡ ಅಭಿಮಾನಿಯಾದೆ ಎಂದು ಶಾಸಕ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ನುಡಿದರು.
ಯುವಿಸಿಇಗೆ ಹೈಟೆಕ್ ಟಚ್
ನಗರದ ಕೆ.ಆರ್. ವೃತ್ತದಲ್ಲಿರುವ ಯುವಿಸಿಇ (ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು)ಗೆ ಹೈಟೆಕ್ ಸ್ಪರ್ಶದೊಂದಿಗೆ ಹೊಸ ಮೆರುಗು ನೀಡಲಾಗುತ್ತಿದೆ.
ಟ್ರ್ಯಾಕ್ಟರ್ ಜಾಥಾಗೆ ಕಾಂಗ್ರೆಸ್ ಬೆಂಬಲ
ಮಂಗಳವಾರ ಬೆಂಗಳೂರಿನಲ್ಲಿ ರೈತರು ನಡೆಸಲು ಮುಂದಾಗಿರುವ ಟ್ರ್ಯಾಕ್ಟರ್ ಜಾಥಾಗೆ ಪೊಲೀಸರು ಅಡ್ಡಬಂದರೆ, ನಾವು ರೈತರ ಬೆಂಬಲವಾಗಿ ನಿಲ್ಲಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯ..!
ರಾಜ್ಯದಲ್ಲಿ ಈಗ ಆಡಳಿತ ನಡೆಸುತ್ತಿರೋದು ಬಿಜೆಪಿ-ಕಾಂಗ್ರೆಸ್ ಮೈತ್ರಿ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಿಂದ ಗೆದ್ದ ಸದಸ್ಯರನ್ನು ಕರೆದುಕೊಂಡು ಹೋಗಿ ಬಿಜೆಪಿಯವರು ಸರ್ಕಾರ ರಚಿಸಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದೆ ಎಂದು ಹೇಳಲು ಸಾಧ್ಯವಿಲ್ಲ. ಅದು ಕಾಂಗ್ರೆಸ್- ಬಿಜೆಪಿ ಮೈತ್ರಿ ಸರ್ಕಾರ ಎಂದು ಡಿಕೆಶಿ ಮುಗುಳ್ನಕ್ಕರು.
ಸಚಿವ ಎಸ್ಟಿ ಸೋಮಶೇಖರ್ ಗುಣಗಾನ..!
ಬಜೆಟ್ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳ ಅಭಿವೃದ್ಧಿಗೆ ಬೇಕಾದದ್ದನ್ನು ಸ್ಥಳೀಯ ರಾಜಕಾರಣಿಗಳೊಂದಿಗೆ ಚರ್ಚಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಬಗ್ಗೆ ಪ್ರತಿ ಜಿಲ್ಲೆಗಳಲ್ಲೂ ನಿರೀಕ್ಷೆಗಳು ಇದ್ದೇ ಇರುತ್ತದೆ. ಹೀಗಾಗಿ ಒಂದು ಜಿಲ್ಲೆಯ ಅಭಿವೃದ್ಧಿಗೆ ಏನು ಬೇಕು ಎಂಬ ಸ್ಥಳೀಯ ಸಂಸದರು, ಶಾಸಕರು ಸೇರಿ ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ. ಅಭಿವೃದ್ಧಿಯ ಹಿನ್ನೆಲೆ ಮಾತುಕತೆ ನಡೆಸುತ್ತಿರುವುದು ಇದು ಮೊದಲು ಎಂದರು.
ಮೈಸೂರಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಭವಿಷ್ಯ
ಇತ್ತೀಚೆಗೆ ಬಿಜೆಪಿ ಸಚಿವ ಸಂಪುಟದಲ್ಲಿ ಸ್ಥಾನ ಪಡೆದುಕೊಂಡ ಸಚಿವರು ಮುಂದಿನ ಆರು ತಿಂಗಳಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಭವಿಷ್ಯ ನುಡಿದಿದ್ದಾರೆ.
ಭೈರಮಂಗಲ ಯೋಜನೆಗೆ ಆರಂಭಿಕ ವಿಘ್ನ
ಭೈರಮಂಗಲ ಜಲಾಶಯದ ಕಾಮಗಾರಿಗೆ ನೀರಿನ ಹರಿವು ಸ್ಥಗಿತಗೊಳಿಸಲು ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಎಡದಂಡೆ ಮತ್ತು ಬಲದಂಡೆ ನಾಲೆಗಳ ಕಾಮಗಾರಿಯನ್ನು ಪೂರ್ಣಗೊಳಿಸಲು ಟೆಂಡರ್ ಪಡೆದ ಗುತ್ತಿಗೆದಾರ 18 ತಿಂಗಳ ಕಾಲಾವಕಾಶ ಕೋರಿದ್ದಾರೆ. ಆದರೆ ಭೈರಮಂಗಲ ಜಲಾಶಯದ ನೀರನ್ನೆ ನಂಬಿ ಕೃಷಿ ಮಾಡುತ್ತಿರುವ ರೈತರಿಂದ ನೀರು ಬಂದ್ಗೆ ಭಾರಿ ವಿರೋಧ ವ್ಯಕ್ತವಾಗಿದೆ.
ಹುಣಸೋಡು ಡೈನಾಮೈಟ್ ಸ್ಫೋಟ, ತನಿಖೆ
ಹುಣಸೋಡು ಸ್ಫೋಟದ ಸಮಗ್ರ ತನಿಖೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು 5 ತಂಡಗಳನ್ನು ರಚಿಸಿದೆ. ಐವರು ಇನ್ಸ್ಪೆಕ್ಟರ್ಗಳ ನೇತೃತ್ವದ ಪಿಎಸ್ಐ ಮತ್ತು ಇತರೆ ಸಿಬ್ಬಂದಿಯ ತಂಡವನ್ನು ಎಸ್ಪಿ ಕೆ. ಎಂ. ಶಾಂತರಾಜು ಅವರು ರಚನೆ ಮಾಡಿದ್ದಾರೆ. ತಂಡಗಳು ಈಗಾಗಲೇ ತನಿಖೆ ಆರಂಭಿಸಿವೆ.
ನಿತ್ಯವೂ ಜಿಲೆಟಿನ್ ಸ್ಫೋಟ
ಕುರುವಳ್ಳಿಯಲ್ಲಿ ಬಂಡೆ ಸೀಳಲು ಪ್ರತಿದಿನ ಜಿಲೆಟಿನ್ ಸ್ಪೋಟಿಸಲಾಗುತ್ತಿದೆ. ಅಧಿಕ ಶಬ್ದದ ಜಿಲೆಟಿನ್ ಸ್ಫೋಟ ಕುರುವಳ್ಳಿ ಬಂಡೆಯಲ್ಲಿ ಹೆಚ್ಚಾಗಿದ್ದು ನಿಯಂತ್ರಣದ ಕಾನೂನು ಕ್ರಮ ಮಾತ್ರ ದೂರವಾಗಿದೆ. ಯಾವುದೇ ಕ್ಷಣ ಕಲ್ಲುಗಣಿಗಾರಿಕೆ ಪ್ರದೇಶದಲ್ಲಿ ಮಹಾದುರಂತದ ಮುನ್ಸೂಚನೆ ನೀಡಿದಂತಿದೆ.
ರಾಜ್ಯದ ಎರಡನೇ ಅತಿದೊಡ್ಡ ಧ್ವಜಸ್ತಂಭ ಲೋಕಾರ್ಪಣೆ!
ನಗರದ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬಿ.ಎಚ್. ರಸ್ತೆಯ ಗಣಪತಿ ಕೆರೆ ಪಕ್ಕದಲ್ಲಿ 159 ಅಡಿ ಎತ್ತರದಲ್ಲಿ 30* 45 ಅಡಿ ಅಳತೆಯ ಬೃಹತ್ ರಾಷ್ಟ್ರಧ್ವಜ ನಿರಂತರ ಹಾರಾಡುವ ಅತ್ಯಾಕರ್ಷಕ ವ್ಯವಸ್ಥೆ ಲೋಕಾರ್ಪಣೆಗೆ ಸಜ್ಜುಗೊಂಡಿದೆ.
ಖಾತೆ ಹಂಚಿಕೆಯಲ್ಲಿ ಮತ್ತೆ ಬದಲಾವಣೆ!
ಖಾತೆ ಬದಲಾವಣೆಯಿಂದ ಅತೃಪ್ತಗೊಂಡಿದ್ದ ಸಚಿವರ ಒತ್ತಡಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಮತ್ತೆ ಮಣಿದಿದ್ದಾರೆ. ಖಾತೆ ಹಂಚಿಕೆಯಿಂದ ಅಸಮಾಧಾನಗೊಂಡಿದ್ದ ಆರೋಗ್ಯ ಸಚಿವ ಡಾ. ಕೆ ಸುಧಾಕರ್ಗೆ ಆರೋಗ್ಯ ಇಲಾಖೆಯ ಜೊತೆಗೆ ವೈದ್ಯಕೀಯ ಶಿಕ್ಷಣವನ್ನು ನೀಡಲಾಗಿದೆ. ಈ ಮೂಲಕ ಇದೀಗ ಎರಡನೇ ಬಾರಿ ಖಾತೆ ಮರುಹಂಚಿಕೆ ಮಾಡಲಾಗಿದೆ.
ಎಫ್ಡಿಎ ಪ್ರಶ್ನೆಪತ್ರಿಕೆ ಸೋರಿಕೆ ಮೂಲ ಪತ್ತೆ..!
ಎಫ್ಡಿಎ ಪ್ರಶ್ನೆಪತ್ರಿಕೆ ಸೋರಿಕೆಯ ಮೂಲವನ್ನು ಪತ್ತೆಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಇಬ್ಬರು ನೌಕರರನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಆಡಳಿತ ಪಕ್ಷಕ್ಕೆ ಶಾಕ್ ಕೊಡಲು ಕಾಂಗ್ರೆಸ್ ಸಿದ್ಧತೆ
ಗುರುವಾರ ವಿಧಾನಮಂಡಲ ಜಂಟಿ ಅಧಿವೇಶನ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಡಳಿತ ಪಕ್ಷಕ್ಕೆ ಶಾಕ್ ನೀಡಿಲು ವಿರೋಧ ಪಕ್ಷ ಕಾಂಗ್ರೆಸ್ ಸಜ್ಜಾಗುತ್ತಿದೆ. ಕೋವಿಡ್, ಆಡಳಿತ ವೈಫಲ್ಯ, ಅಭಿವೃದ್ದಿ ಕೆಲಸಗಳಲ್ಲಿ ಹಿನ್ನಡೆ, ಅನುದಾನ ಬಿಡುಗಡೆ ವಿಳಂಬ ಇತ್ಯಾದಿ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಮುಂದಾಗಿದೆ.
ರೈತರಲ್ಲಿ ಬಿ.ಸಿ.ಪಾಟೀಲ್ ಮನವಿ
ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ರೈತರು ಹಮ್ಮಿಕೊಂಡಿರುವ ಪ್ರತಿಭಟನೆಯನ್ನು ಕೈಬಿಡುವಂತೆ ಕೃಷಿ ಸಚಿವ ಬಿ.ಸಿ ಪಾಟೀಲ್ ರೈತರಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಕಾಂಗ್ರೆಸ್ ರೈತರ ವಿಚಾರದಲ್ಲಿ ದ್ವಂದ್ವ ನೀತಿ ಹೊಂದಿದ್ದು, ಡಬಲ್ ಗೇಮ್ ಆಡುತ್ತಿದೆ ಎಂದು ಆರೋಪಿಸಿದರು.
ಅಶ್ವತ್ಥ ನಾರಾಯಣ ಆರೋಪ
ರೈತರ ಕಲ್ಯಾಣಕ್ಕಾಗಿ ರೂಪಿಸಿರುವ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಕಟುವಾಗಿ ಟೀಕಿಸಿದ್ದಾರೆ.
ಬಿಜೆಪಿ ಸರಕಾರವು ಕುತಂತ್ರ ರಾಜಕಾರಣದ ಮೂಲಕ ಮಹಿಳಾ ಶಾಸಕಿ ಸೌಮ್ಯರೆಡ್ಡಿ ಅವರ ಮೇಲೆ ಸುಳ್ಳು ದೂರನ್ನು ದಾಖಲಿಸಿ ಎಫ್ಐಆರ್ ದಾಖಲಿಸಿರುವುದನ್ನು ಕರ್ನಾಟಕ ರೆಡ್ಡಿ ಜನ ಸಂಘ ತೀವ್ರವಾಗಿ ಖಂಡಿಸಿದೆ.
ರಾಜ್ಯದಲ್ಲಿ ಈವರೆಗೆ 1.87 ಲಕ್ಷ ಜನರಿಗೆ ಕೊರೊನಾ ಲಸಿಕೆ
ಕೊರೊನಾ ಲಸಿಕೆ ಅಭಿಯಾನದಡಿ ರಾಜ್ಯದಲ್ಲಿ ಈವರೆಗೆ 1,87,211 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.
'ನಾನೂ ಆಮ್ ಆದ್ಮಿ' ಎಂದ ರಮೇಶ್ ಕುಮಾರ್
ನಾನು ಆರೋಗ್ಯ ಸಚಿವನಾಗಿದ್ದಾಗ ದೆಹಲಿಗೆ ಭೇಟಿ ಕೊಟ್ಟು ಅಲ್ಲಿನ ಮೊಹಲ್ಲಾ ಕ್ಲಿನಿಕ್, ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಆಶ್ಚರ್ಯಗೊಂಡೆ, ಅರವಿಂದ್ ಕೇಜ್ರಿವಾಲ್ ಅವರ ಕ್ರಾಂತಿಕಾರಕ ಬದಲಾವಣೆಗಳನ್ನು ನೋಡಿ ಅವರ ದೊಡ್ಡ ಅಭಿಮಾನಿಯಾದೆ ಎಂದು ಶಾಸಕ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ನುಡಿದರು.
ಯುವಿಸಿಇಗೆ ಹೈಟೆಕ್ ಟಚ್
ನಗರದ ಕೆ.ಆರ್. ವೃತ್ತದಲ್ಲಿರುವ ಯುವಿಸಿಇ (ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು)ಗೆ ಹೈಟೆಕ್ ಸ್ಪರ್ಶದೊಂದಿಗೆ ಹೊಸ ಮೆರುಗು ನೀಡಲಾಗುತ್ತಿದೆ.
ಟ್ರ್ಯಾಕ್ಟರ್ ಜಾಥಾಗೆ ಕಾಂಗ್ರೆಸ್ ಬೆಂಬಲ
ಮಂಗಳವಾರ ಬೆಂಗಳೂರಿನಲ್ಲಿ ರೈತರು ನಡೆಸಲು ಮುಂದಾಗಿರುವ ಟ್ರ್ಯಾಕ್ಟರ್ ಜಾಥಾಗೆ ಪೊಲೀಸರು ಅಡ್ಡಬಂದರೆ, ನಾವು ರೈತರ ಬೆಂಬಲವಾಗಿ ನಿಲ್ಲಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯ..!
ರಾಜ್ಯದಲ್ಲಿ ಈಗ ಆಡಳಿತ ನಡೆಸುತ್ತಿರೋದು ಬಿಜೆಪಿ-ಕಾಂಗ್ರೆಸ್ ಮೈತ್ರಿ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಿಂದ ಗೆದ್ದ ಸದಸ್ಯರನ್ನು ಕರೆದುಕೊಂಡು ಹೋಗಿ ಬಿಜೆಪಿಯವರು ಸರ್ಕಾರ ರಚಿಸಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದೆ ಎಂದು ಹೇಳಲು ಸಾಧ್ಯವಿಲ್ಲ. ಅದು ಕಾಂಗ್ರೆಸ್- ಬಿಜೆಪಿ ಮೈತ್ರಿ ಸರ್ಕಾರ ಎಂದು ಡಿಕೆಶಿ ಮುಗುಳ್ನಕ್ಕರು.
ಸಚಿವ ಎಸ್ಟಿ ಸೋಮಶೇಖರ್ ಗುಣಗಾನ..!
ಬಜೆಟ್ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳ ಅಭಿವೃದ್ಧಿಗೆ ಬೇಕಾದದ್ದನ್ನು ಸ್ಥಳೀಯ ರಾಜಕಾರಣಿಗಳೊಂದಿಗೆ ಚರ್ಚಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಬಗ್ಗೆ ಪ್ರತಿ ಜಿಲ್ಲೆಗಳಲ್ಲೂ ನಿರೀಕ್ಷೆಗಳು ಇದ್ದೇ ಇರುತ್ತದೆ. ಹೀಗಾಗಿ ಒಂದು ಜಿಲ್ಲೆಯ ಅಭಿವೃದ್ಧಿಗೆ ಏನು ಬೇಕು ಎಂಬ ಸ್ಥಳೀಯ ಸಂಸದರು, ಶಾಸಕರು ಸೇರಿ ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ. ಅಭಿವೃದ್ಧಿಯ ಹಿನ್ನೆಲೆ ಮಾತುಕತೆ ನಡೆಸುತ್ತಿರುವುದು ಇದು ಮೊದಲು ಎಂದರು.
ಮೈಸೂರಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಭವಿಷ್ಯ
ಇತ್ತೀಚೆಗೆ ಬಿಜೆಪಿ ಸಚಿವ ಸಂಪುಟದಲ್ಲಿ ಸ್ಥಾನ ಪಡೆದುಕೊಂಡ ಸಚಿವರು ಮುಂದಿನ ಆರು ತಿಂಗಳಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಭವಿಷ್ಯ ನುಡಿದಿದ್ದಾರೆ.
ಭೈರಮಂಗಲ ಯೋಜನೆಗೆ ಆರಂಭಿಕ ವಿಘ್ನ
ಭೈರಮಂಗಲ ಜಲಾಶಯದ ಕಾಮಗಾರಿಗೆ ನೀರಿನ ಹರಿವು ಸ್ಥಗಿತಗೊಳಿಸಲು ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಎಡದಂಡೆ ಮತ್ತು ಬಲದಂಡೆ ನಾಲೆಗಳ ಕಾಮಗಾರಿಯನ್ನು ಪೂರ್ಣಗೊಳಿಸಲು ಟೆಂಡರ್ ಪಡೆದ ಗುತ್ತಿಗೆದಾರ 18 ತಿಂಗಳ ಕಾಲಾವಕಾಶ ಕೋರಿದ್ದಾರೆ. ಆದರೆ ಭೈರಮಂಗಲ ಜಲಾಶಯದ ನೀರನ್ನೆ ನಂಬಿ ಕೃಷಿ ಮಾಡುತ್ತಿರುವ ರೈತರಿಂದ ನೀರು ಬಂದ್ಗೆ ಭಾರಿ ವಿರೋಧ ವ್ಯಕ್ತವಾಗಿದೆ.
ಹುಣಸೋಡು ಡೈನಾಮೈಟ್ ಸ್ಫೋಟ, ತನಿಖೆ
ಹುಣಸೋಡು ಸ್ಫೋಟದ ಸಮಗ್ರ ತನಿಖೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು 5 ತಂಡಗಳನ್ನು ರಚಿಸಿದೆ. ಐವರು ಇನ್ಸ್ಪೆಕ್ಟರ್ಗಳ ನೇತೃತ್ವದ ಪಿಎಸ್ಐ ಮತ್ತು ಇತರೆ ಸಿಬ್ಬಂದಿಯ ತಂಡವನ್ನು ಎಸ್ಪಿ ಕೆ. ಎಂ. ಶಾಂತರಾಜು ಅವರು ರಚನೆ ಮಾಡಿದ್ದಾರೆ. ತಂಡಗಳು ಈಗಾಗಲೇ ತನಿಖೆ ಆರಂಭಿಸಿವೆ.
ನಿತ್ಯವೂ ಜಿಲೆಟಿನ್ ಸ್ಫೋಟ
ಕುರುವಳ್ಳಿಯಲ್ಲಿ ಬಂಡೆ ಸೀಳಲು ಪ್ರತಿದಿನ ಜಿಲೆಟಿನ್ ಸ್ಪೋಟಿಸಲಾಗುತ್ತಿದೆ. ಅಧಿಕ ಶಬ್ದದ ಜಿಲೆಟಿನ್ ಸ್ಫೋಟ ಕುರುವಳ್ಳಿ ಬಂಡೆಯಲ್ಲಿ ಹೆಚ್ಚಾಗಿದ್ದು ನಿಯಂತ್ರಣದ ಕಾನೂನು ಕ್ರಮ ಮಾತ್ರ ದೂರವಾಗಿದೆ. ಯಾವುದೇ ಕ್ಷಣ ಕಲ್ಲುಗಣಿಗಾರಿಕೆ ಪ್ರದೇಶದಲ್ಲಿ ಮಹಾದುರಂತದ ಮುನ್ಸೂಚನೆ ನೀಡಿದಂತಿದೆ.
ರಾಜ್ಯದ ಎರಡನೇ ಅತಿದೊಡ್ಡ ಧ್ವಜಸ್ತಂಭ ಲೋಕಾರ್ಪಣೆ!
ನಗರದ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬಿ.ಎಚ್. ರಸ್ತೆಯ ಗಣಪತಿ ಕೆರೆ ಪಕ್ಕದಲ್ಲಿ 159 ಅಡಿ ಎತ್ತರದಲ್ಲಿ 30* 45 ಅಡಿ ಅಳತೆಯ ಬೃಹತ್ ರಾಷ್ಟ್ರಧ್ವಜ ನಿರಂತರ ಹಾರಾಡುವ ಅತ್ಯಾಕರ್ಷಕ ವ್ಯವಸ್ಥೆ ಲೋಕಾರ್ಪಣೆಗೆ ಸಜ್ಜುಗೊಂಡಿದೆ.
ಖಾತೆ ಹಂಚಿಕೆಯಲ್ಲಿ ಮತ್ತೆ ಬದಲಾವಣೆ!
ಖಾತೆ ಬದಲಾವಣೆಯಿಂದ ಅತೃಪ್ತಗೊಂಡಿದ್ದ ಸಚಿವರ ಒತ್ತಡಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಮತ್ತೆ ಮಣಿದಿದ್ದಾರೆ. ಖಾತೆ ಹಂಚಿಕೆಯಿಂದ ಅಸಮಾಧಾನಗೊಂಡಿದ್ದ ಆರೋಗ್ಯ ಸಚಿವ ಡಾ. ಕೆ ಸುಧಾಕರ್ಗೆ ಆರೋಗ್ಯ ಇಲಾಖೆಯ ಜೊತೆಗೆ ವೈದ್ಯಕೀಯ ಶಿಕ್ಷಣವನ್ನು ನೀಡಲಾಗಿದೆ. ಈ ಮೂಲಕ ಇದೀಗ ಎರಡನೇ ಬಾರಿ ಖಾತೆ ಮರುಹಂಚಿಕೆ ಮಾಡಲಾಗಿದೆ.
ಎಫ್ಡಿಎ ಪ್ರಶ್ನೆಪತ್ರಿಕೆ ಸೋರಿಕೆ ಮೂಲ ಪತ್ತೆ..!
ಎಫ್ಡಿಎ ಪ್ರಶ್ನೆಪತ್ರಿಕೆ ಸೋರಿಕೆಯ ಮೂಲವನ್ನು ಪತ್ತೆಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಇಬ್ಬರು ನೌಕರರನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಆಡಳಿತ ಪಕ್ಷಕ್ಕೆ ಶಾಕ್ ಕೊಡಲು ಕಾಂಗ್ರೆಸ್ ಸಿದ್ಧತೆ
ಗುರುವಾರ ವಿಧಾನಮಂಡಲ ಜಂಟಿ ಅಧಿವೇಶನ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಡಳಿತ ಪಕ್ಷಕ್ಕೆ ಶಾಕ್ ನೀಡಿಲು ವಿರೋಧ ಪಕ್ಷ ಕಾಂಗ್ರೆಸ್ ಸಜ್ಜಾಗುತ್ತಿದೆ. ಕೋವಿಡ್, ಆಡಳಿತ ವೈಫಲ್ಯ, ಅಭಿವೃದ್ದಿ ಕೆಲಸಗಳಲ್ಲಿ ಹಿನ್ನಡೆ, ಅನುದಾನ ಬಿಡುಗಡೆ ವಿಳಂಬ ಇತ್ಯಾದಿ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಮುಂದಾಗಿದೆ.
ರೈತರಲ್ಲಿ ಬಿ.ಸಿ.ಪಾಟೀಲ್ ಮನವಿ
ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ರೈತರು ಹಮ್ಮಿಕೊಂಡಿರುವ ಪ್ರತಿಭಟನೆಯನ್ನು ಕೈಬಿಡುವಂತೆ ಕೃಷಿ ಸಚಿವ ಬಿ.ಸಿ ಪಾಟೀಲ್ ರೈತರಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಕಾಂಗ್ರೆಸ್ ರೈತರ ವಿಚಾರದಲ್ಲಿ ದ್ವಂದ್ವ ನೀತಿ ಹೊಂದಿದ್ದು, ಡಬಲ್ ಗೇಮ್ ಆಡುತ್ತಿದೆ ಎಂದು ಆರೋಪಿಸಿದರು.
ಅಶ್ವತ್ಥ ನಾರಾಯಣ ಆರೋಪ
ರೈತರ ಕಲ್ಯಾಣಕ್ಕಾಗಿ ರೂಪಿಸಿರುವ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಕಟುವಾಗಿ ಟೀಕಿಸಿದ್ದಾರೆ.