ಇಂಟಿರೀಯರ್ ಡಿಸೈನರ್ ವಂಚನೆ!
ಮನೆ ಇಂಟಿರಿಯರ್ ಡಿಸೈನಿಂಗ್ ಮಾಡಿಕೊಡುತ್ತೇನೆಂದು ವ್ಯಕ್ತಿಯೊಬ್ಬ ಮನೆ ಮಾಲಕಿಯಿಂದ ಬರೋಬ್ಬರಿ ಎಂಟು ಲಕ್ಷ ಪಡೆದು ಪಂಗನಾಮ ಹಾಕಿರುವ ಘಟನೆ ನಡೆದಿದೆ.
ಮೆಡಿಕಲ್ ಸೀಟ್ಗಾಗಿ ಲಕ್ಷ.. ಲಕ್ಷ.. ಕಳೆದುಕೊಂಡ ಜನ..!
ರಾಜಧಾನಿಯಲ್ಲಿ ಬೃಹತ್ ವೈದ್ಯಕೀಯ ಶಿಕ್ಷಣದ ವಂಚನೆ ಪ್ರಕರಣ ಬಯಲಾಗಿದೆ. 20 ವೈದ್ಯಕೀಯ ಸೀಟ್ ಆಕಾಂಕ್ಷಿಗಳು ರೆಸಿಡೆನ್ಸಿ ರಸ್ತೆ ಹಾಗೂ ಬ್ರಿಗೇಡ್ ರೋಡ್ನಲ್ಲಿ ನಕಲಿ ಸಮಾಲೋಚನಾ ಕಂಪನಿಗಳಿಂದ ವಂಚನೆಗೆ ಒಳಗಾಗಿದ್ದು, 50 ಲಕ್ಷಕ್ಕೂ ಹೆಚ್ಚಿನ ಹಣವನ್ನು ಕಳೆದುಕೊಂಡಿದ್ದಾರೆ.
ವರ್ಷವಿಡೀ ಮೈಸೂರು ಸ್ವಚ್ಛವಾಗಿರಲು ವಿಶೇಷ ಯೋಜನೆ
ಕೇವಲ ಸ್ವಚ್ಛ ಮೈಸೂರು ಸರ್ವೇಕ್ಷಣೆ ಸಂದರ್ಭದಲ್ಲಿ ಮಾತ್ರವಲ್ಲ, ವರ್ಷದ 365 ದಿನಗಳಲ್ಲೂ ಮೈಸೂರನ್ನು ಸ್ವಚ್ಛವಾಗಿ ಇಡುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ತಿಳಿಸಿದರು.
ಗ್ಯಾಸ್ ಸಿಲಿಂಡರ್ ಆರೋಪಿ ಬಂಧನ
ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ಗಳನ್ನು ಅಕ್ರಮವಾಗಿ ಡಂಪಿಂಗ್ ಮತ್ತು ರೀಫಿಲ್ಲಿಂಗ್ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮೀನುಗಾರಿಕೆಗೆ ತೆರಳಿದ ಬೆಸ್ತ ಬಲೆಗೆ ಸಿಲುಕಿ ಸಾವು
ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೋರ್ವ ಮೀನನ ಬಲೆಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.
ರಾಜನಹಳ್ಳಿಯಲ್ಲಿ 2 ದಿನ ವಾಲ್ಮೀಕಿ ಜಾತ್ರೆ
ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗುರುಪೀಠದಲ್ಲಿ ಮೂರನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರೆಗೆ ಸೋಮವಾರ ಬೆಳಗ್ಗೆ ಚಾಲನೆ ದೊರೆಯಿತು. ರಾಜ್ಯದ ನಾನಾ ಭಾಗದಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು ಎರಡನೇ ದಿನ ಮಂಗಳವಾರ ನಡೆಯಲಿರುವ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಲಿರುವ ಸಿಎಂ ಯಡಿಯೂರಪ್ಪ ಎಸ್ಟಿ ಮೀಸಲು ಪ್ರಮಾಣವನ್ನು ಶೇ.7.5 ಕ್ಕೆ ಹೆಚ್ಚಿಸುವ ಸಂಬಂಧ ಘೋಷಣೆಯ ನಿರೀಕ್ಷೆಯಲ್ಲಿದ್ದಾರೆ.
ಬಳ್ಳಾರಿಯಲ್ಲಿ 2ನೇ ಹಂತದ ಕೊರೊನಾ ಲಸಿಕಾ ಅಭಿಯಾನ
ಎರಡನೇ ಹಂತದ ಕೊರೊನಾ ಲಸಿಕಾ ಅಭಿಯಾನ ಸೋಮವಾರ ಪ್ರಾರಂಭವಾಯಿತು. ನಗರದ ಡಿಹೆಚ್ಒ ಕಚೇರಿ ಆವರಣದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಯಿತು.
ಬಾಗಲಕೋಟೆ: ಇಳಕಲ್ನಲ್ಲಿ ಭಾರಿ ಬೆಂಕಿ ಅವಘಡ
ಇಳಕಲ್ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಭಾನುವಾರ ರಾತ್ರಿ ಬೃಹತ್ ಕಾಂಪ್ಲೆಕ್ಸ್ಗೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆಗೆ 17 ಅಂಗಡಿಗಳು ಭಸ್ಮವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಣ ಸವದಿ ಅಭಿಮತ
ವಿರೋಧಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಎಷ್ಟೊಂದು ವಾಕ್ಪ್ರಹಾರ ನಡೆಸಿ ಆರೋಪಗಳ ಸುರಿಮಳೆಗೈದಿದ್ದರೂ ಸಹ ಅವುಗಳಿಗೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಅಭಿಪ್ರಾಯಪಟ್ಟಿದ್ದಾರೆ. ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತಾಗಿ ಆಡಿದ ಮಾತಿನ ಬಗ್ಗೆ ಲಕ್ಷ್ಮಣ ಸವದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ 31ನೇ ಜಿಲ್ಲೆಯಾಗಿ 'ವಿಜಯನಗರ' ಉದಯ..!
ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರವನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಸೋಮವಾರ ಗೆಜೆಟ್ ನೊಟಿಫಿಕೇಷನ್ ಮೂಲಕ ವಿಜಯನಗರವನ್ನು ನೂತನ ಜಿಲ್ಲೆಯನ್ನಾಗಿ ಸರಕಾರ ಘೋಷಿಸಿದೆ.
ವಿವಿಧ ಇಲಾಖೆಗಳೊಂದಿಗೆ ಬಿಎಸ್ವೈ ಸಭೆ
ರಾಜ್ಯ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೆ ಬಜೆಟ್ ಪೂರ್ವಭಾವಿ ಸಭೆಯನ್ನು ನಡೆಸಿದರು. ಬೆಂಗಳೂರಿನ ಶಕ್ತಿ ಸೌಧದಲ್ಲಿ ಸೋಮವಾರ ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೆ ಸಿಎಂ ಬಿಎಸ್ ಯಡಿಯೂರಪ್ಪ ಚರ್ಚೆ ನಡೆಸಿ ಬಜೆಟ್ ಕುರಿತಾಗಿ ಇಲಾಖಾವಾರು ಮಾಹಿತಿ ಕಲೆ ಹಾಕಿದರು.
ಮಾಡ್ಯೂಲರ್ ಐಸಿಯು ಲೋಕಾರ್ಪಣೆ
ಕೋವಿಡ್ನಂಥ ಸಂಕಷ್ಟ ಪರಿಸ್ಥಿತಿಯೂ ಸೇರಿದಂತೆ ಯಾವುದೇ ತುರ್ತು ಸಂದರ್ಭದಲ್ಲೂ ಪರಿಣಾಮಕಾರಿಯಾಗಿ ಬಳಕೆ ಮಾಡಬಲ್ಲ ಅತ್ಯಾಧುನಿಕ ಮಾಡ್ಯೂಲರ್ ಐಸಿಯು ಘಟಕವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಲೋಕಾರ್ಪಣೆ ಮಾಡಿದರು.
ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ: ನಜೀರ್ ಅಹ್ಮದ್ ಕಣಕ್ಕೆ
ಮಂಗಳವಾರ ನಡೆಯಲಿರುವ ವಿಧಾನಪರಿಷತ್ ಸಭಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಜೀರ್ ಅಹ್ಮದ್ ಕಣಕ್ಕಿಳಿದಿದ್ದಾರೆ. ಸೋಮವಾರ ಅವರು ವಿಧಾನಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ನಾಮಪತ್ರವನ್ನು ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್, ಬಿ.ಕೆ ಹರಿಪ್ರಸಾದ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಲಿಂಬಾವಳಿಗೆ ಕಾಂಗ್ರೆಸ್ ಟಾಂಗ್
ನನಗೆ ಎರಡು ಖಾತೆ ಕೊಟ್ಟಿದ್ದಾರೆ. ಹಗಲು ನಾಡಲ್ಲಿ ಕೆಲಸ ಮಾಡಬೇಕು ರಾತ್ರಿ ಹೊತ್ತು ಕಾಡಲ್ಲಿ ಕೆಲಸ ಮಾಡಬೇಕು ಎಂದು ಸಚಿವ ಅರವಿಂದ್ ಲಿಂಬಾವಳಿ ಅಸಹಾಯಕತೆ ತೋಡಿಕೊಂಡಿದ್ದರು. ಸಚಿವರ ಅಸಹಾಯಕತೆಗೆ ಕಾಂಗ್ರೆಸ್ ಟ್ವಿಟ್ಟರ್ನಲ್ಲಿ ಟಾಂಗ್ ಕೊಟ್ಟಿದೆ.
ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ
ಮಂಗಳವಾರ ನಡೆಯಲಿರುವ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ನ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಸಿದರು.
ನಲಪಾಡ್ನಿಂದ ಮುಂದುವರಿದ ಒತ್ತಡ ತಂತ್ರ
ಯೂತ್ ಕಾಂಗ್ರೆಸ್ ಅಧ್ಯಕ್ಷ ಪಟ್ಟ ವಿಚಾರವಾಗಿ ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಪುತ್ರ ಮುಹಮ್ಮದ್ ಹ್ಯಾರಿಸ್ ನಲಪಾಡ್ ಒತ್ತಡ ತಂತ್ರ ಮುಂದುವರಿಸಿದ್ದಾರೆ. ಅತೀ ಹೆಚ್ಚು ಮತಗಳನ್ನು ಪಡೆದರೂ ಕ್ರಿಮಿನಲ್ ಹಿನ್ನೆಲೆ ಕಾರಣಕ್ಕಾಗಿ ಅಧ್ಯಕ್ಷ ಸ್ಥಾನವನ್ನು ಕಳೆದುಕೊಂಡ ನಲಪಾಡ್ ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರ ಮೇಲೆ ಒತ್ತಡ ತಂತ್ರ ಪ್ರಯೋಗ ಮಾಡುತ್ತಿದ್ದಾರೆ.
ಮನೆ ಇಂಟಿರಿಯರ್ ಡಿಸೈನಿಂಗ್ ಮಾಡಿಕೊಡುತ್ತೇನೆಂದು ವ್ಯಕ್ತಿಯೊಬ್ಬ ಮನೆ ಮಾಲಕಿಯಿಂದ ಬರೋಬ್ಬರಿ ಎಂಟು ಲಕ್ಷ ಪಡೆದು ಪಂಗನಾಮ ಹಾಕಿರುವ ಘಟನೆ ನಡೆದಿದೆ.
ಮೆಡಿಕಲ್ ಸೀಟ್ಗಾಗಿ ಲಕ್ಷ.. ಲಕ್ಷ.. ಕಳೆದುಕೊಂಡ ಜನ..!
ರಾಜಧಾನಿಯಲ್ಲಿ ಬೃಹತ್ ವೈದ್ಯಕೀಯ ಶಿಕ್ಷಣದ ವಂಚನೆ ಪ್ರಕರಣ ಬಯಲಾಗಿದೆ. 20 ವೈದ್ಯಕೀಯ ಸೀಟ್ ಆಕಾಂಕ್ಷಿಗಳು ರೆಸಿಡೆನ್ಸಿ ರಸ್ತೆ ಹಾಗೂ ಬ್ರಿಗೇಡ್ ರೋಡ್ನಲ್ಲಿ ನಕಲಿ ಸಮಾಲೋಚನಾ ಕಂಪನಿಗಳಿಂದ ವಂಚನೆಗೆ ಒಳಗಾಗಿದ್ದು, 50 ಲಕ್ಷಕ್ಕೂ ಹೆಚ್ಚಿನ ಹಣವನ್ನು ಕಳೆದುಕೊಂಡಿದ್ದಾರೆ.
ವರ್ಷವಿಡೀ ಮೈಸೂರು ಸ್ವಚ್ಛವಾಗಿರಲು ವಿಶೇಷ ಯೋಜನೆ
ಕೇವಲ ಸ್ವಚ್ಛ ಮೈಸೂರು ಸರ್ವೇಕ್ಷಣೆ ಸಂದರ್ಭದಲ್ಲಿ ಮಾತ್ರವಲ್ಲ, ವರ್ಷದ 365 ದಿನಗಳಲ್ಲೂ ಮೈಸೂರನ್ನು ಸ್ವಚ್ಛವಾಗಿ ಇಡುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ತಿಳಿಸಿದರು.
ಗ್ಯಾಸ್ ಸಿಲಿಂಡರ್ ಆರೋಪಿ ಬಂಧನ
ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ಗಳನ್ನು ಅಕ್ರಮವಾಗಿ ಡಂಪಿಂಗ್ ಮತ್ತು ರೀಫಿಲ್ಲಿಂಗ್ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮೀನುಗಾರಿಕೆಗೆ ತೆರಳಿದ ಬೆಸ್ತ ಬಲೆಗೆ ಸಿಲುಕಿ ಸಾವು
ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೋರ್ವ ಮೀನನ ಬಲೆಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.
ರಾಜನಹಳ್ಳಿಯಲ್ಲಿ 2 ದಿನ ವಾಲ್ಮೀಕಿ ಜಾತ್ರೆ
ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗುರುಪೀಠದಲ್ಲಿ ಮೂರನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರೆಗೆ ಸೋಮವಾರ ಬೆಳಗ್ಗೆ ಚಾಲನೆ ದೊರೆಯಿತು. ರಾಜ್ಯದ ನಾನಾ ಭಾಗದಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು ಎರಡನೇ ದಿನ ಮಂಗಳವಾರ ನಡೆಯಲಿರುವ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಲಿರುವ ಸಿಎಂ ಯಡಿಯೂರಪ್ಪ ಎಸ್ಟಿ ಮೀಸಲು ಪ್ರಮಾಣವನ್ನು ಶೇ.7.5 ಕ್ಕೆ ಹೆಚ್ಚಿಸುವ ಸಂಬಂಧ ಘೋಷಣೆಯ ನಿರೀಕ್ಷೆಯಲ್ಲಿದ್ದಾರೆ.
ಬಳ್ಳಾರಿಯಲ್ಲಿ 2ನೇ ಹಂತದ ಕೊರೊನಾ ಲಸಿಕಾ ಅಭಿಯಾನ
ಎರಡನೇ ಹಂತದ ಕೊರೊನಾ ಲಸಿಕಾ ಅಭಿಯಾನ ಸೋಮವಾರ ಪ್ರಾರಂಭವಾಯಿತು. ನಗರದ ಡಿಹೆಚ್ಒ ಕಚೇರಿ ಆವರಣದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಯಿತು.
ಬಾಗಲಕೋಟೆ: ಇಳಕಲ್ನಲ್ಲಿ ಭಾರಿ ಬೆಂಕಿ ಅವಘಡ
ಇಳಕಲ್ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಭಾನುವಾರ ರಾತ್ರಿ ಬೃಹತ್ ಕಾಂಪ್ಲೆಕ್ಸ್ಗೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆಗೆ 17 ಅಂಗಡಿಗಳು ಭಸ್ಮವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಣ ಸವದಿ ಅಭಿಮತ
ವಿರೋಧಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಎಷ್ಟೊಂದು ವಾಕ್ಪ್ರಹಾರ ನಡೆಸಿ ಆರೋಪಗಳ ಸುರಿಮಳೆಗೈದಿದ್ದರೂ ಸಹ ಅವುಗಳಿಗೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಅಭಿಪ್ರಾಯಪಟ್ಟಿದ್ದಾರೆ. ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತಾಗಿ ಆಡಿದ ಮಾತಿನ ಬಗ್ಗೆ ಲಕ್ಷ್ಮಣ ಸವದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ 31ನೇ ಜಿಲ್ಲೆಯಾಗಿ 'ವಿಜಯನಗರ' ಉದಯ..!
ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರವನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಸೋಮವಾರ ಗೆಜೆಟ್ ನೊಟಿಫಿಕೇಷನ್ ಮೂಲಕ ವಿಜಯನಗರವನ್ನು ನೂತನ ಜಿಲ್ಲೆಯನ್ನಾಗಿ ಸರಕಾರ ಘೋಷಿಸಿದೆ.
ವಿವಿಧ ಇಲಾಖೆಗಳೊಂದಿಗೆ ಬಿಎಸ್ವೈ ಸಭೆ
ರಾಜ್ಯ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೆ ಬಜೆಟ್ ಪೂರ್ವಭಾವಿ ಸಭೆಯನ್ನು ನಡೆಸಿದರು. ಬೆಂಗಳೂರಿನ ಶಕ್ತಿ ಸೌಧದಲ್ಲಿ ಸೋಮವಾರ ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೆ ಸಿಎಂ ಬಿಎಸ್ ಯಡಿಯೂರಪ್ಪ ಚರ್ಚೆ ನಡೆಸಿ ಬಜೆಟ್ ಕುರಿತಾಗಿ ಇಲಾಖಾವಾರು ಮಾಹಿತಿ ಕಲೆ ಹಾಕಿದರು.
ಮಾಡ್ಯೂಲರ್ ಐಸಿಯು ಲೋಕಾರ್ಪಣೆ
ಕೋವಿಡ್ನಂಥ ಸಂಕಷ್ಟ ಪರಿಸ್ಥಿತಿಯೂ ಸೇರಿದಂತೆ ಯಾವುದೇ ತುರ್ತು ಸಂದರ್ಭದಲ್ಲೂ ಪರಿಣಾಮಕಾರಿಯಾಗಿ ಬಳಕೆ ಮಾಡಬಲ್ಲ ಅತ್ಯಾಧುನಿಕ ಮಾಡ್ಯೂಲರ್ ಐಸಿಯು ಘಟಕವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಲೋಕಾರ್ಪಣೆ ಮಾಡಿದರು.
ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ: ನಜೀರ್ ಅಹ್ಮದ್ ಕಣಕ್ಕೆ
ಮಂಗಳವಾರ ನಡೆಯಲಿರುವ ವಿಧಾನಪರಿಷತ್ ಸಭಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಜೀರ್ ಅಹ್ಮದ್ ಕಣಕ್ಕಿಳಿದಿದ್ದಾರೆ. ಸೋಮವಾರ ಅವರು ವಿಧಾನಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ನಾಮಪತ್ರವನ್ನು ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್, ಬಿ.ಕೆ ಹರಿಪ್ರಸಾದ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಲಿಂಬಾವಳಿಗೆ ಕಾಂಗ್ರೆಸ್ ಟಾಂಗ್
ನನಗೆ ಎರಡು ಖಾತೆ ಕೊಟ್ಟಿದ್ದಾರೆ. ಹಗಲು ನಾಡಲ್ಲಿ ಕೆಲಸ ಮಾಡಬೇಕು ರಾತ್ರಿ ಹೊತ್ತು ಕಾಡಲ್ಲಿ ಕೆಲಸ ಮಾಡಬೇಕು ಎಂದು ಸಚಿವ ಅರವಿಂದ್ ಲಿಂಬಾವಳಿ ಅಸಹಾಯಕತೆ ತೋಡಿಕೊಂಡಿದ್ದರು. ಸಚಿವರ ಅಸಹಾಯಕತೆಗೆ ಕಾಂಗ್ರೆಸ್ ಟ್ವಿಟ್ಟರ್ನಲ್ಲಿ ಟಾಂಗ್ ಕೊಟ್ಟಿದೆ.
ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ
ಮಂಗಳವಾರ ನಡೆಯಲಿರುವ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ನ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಸಿದರು.
ನಲಪಾಡ್ನಿಂದ ಮುಂದುವರಿದ ಒತ್ತಡ ತಂತ್ರ
ಯೂತ್ ಕಾಂಗ್ರೆಸ್ ಅಧ್ಯಕ್ಷ ಪಟ್ಟ ವಿಚಾರವಾಗಿ ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಪುತ್ರ ಮುಹಮ್ಮದ್ ಹ್ಯಾರಿಸ್ ನಲಪಾಡ್ ಒತ್ತಡ ತಂತ್ರ ಮುಂದುವರಿಸಿದ್ದಾರೆ. ಅತೀ ಹೆಚ್ಚು ಮತಗಳನ್ನು ಪಡೆದರೂ ಕ್ರಿಮಿನಲ್ ಹಿನ್ನೆಲೆ ಕಾರಣಕ್ಕಾಗಿ ಅಧ್ಯಕ್ಷ ಸ್ಥಾನವನ್ನು ಕಳೆದುಕೊಂಡ ನಲಪಾಡ್ ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರ ಮೇಲೆ ಒತ್ತಡ ತಂತ್ರ ಪ್ರಯೋಗ ಮಾಡುತ್ತಿದ್ದಾರೆ.