ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ತಲೆಧೋರಿದ್ದ ಪ್ರವಾಹದ ಎಫೆಕ್ಟ್ ಬೆಳಗಾವಿ ಅಧಿವೇಶನಕ್ಕೂ ತಟ್ಟಿದೆ. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯಬೇಕಾಗಿದ್ದ ಅಧಿವೇಶ ಅಕ್ಟೋಬರ್ 14 ರಿಂದ 21 ರವರೆಗೆ ಬೆಂಗಳೂರಿನಲ್ಲೇ ನಡೆಯಲಿದೆ.
ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಹಿರಿಯ ಸಚಿವರ ಸಭೆಯಲ್ಲಿಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಳಗಾವಿ ಜಿಲ್ಲೆ ಪ್ರವಾಹ ಪೀಡಿತವಾಗಿದ್ದು, ಅಧಿವೇಶನ ನಡೆಸಿದರೆ ಪರಿಹಾರ ಕಾರ್ಯಕ್ಕೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಬೆಂಗಳೂರಿನಲ್ಲೇ ಅಧಿವೇಶನ ನಡೆಸಲಾಗುತ್ತದೆ. ಹೀಗಾಗಿ ಮುಂದಿನ ವರ್ಷದ ನವೆಂಬರ್ ವರೆಗೂ ಬೆಳಗಾವಿ ಸುವರ್ಣಸೌಧ ಸರಕಾರದ ಯಾವುದೇ ಚಟುವಟಿಕೆಗೂ ಬಳಕೆಯಾಗುವುದಿಲ್ಲ.
ಸರಕಾರದ ನಿರ್ಧಾರಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು ಬೆಳಗಾವಿಯಲ್ಲಿ ನಡೆಯಬೇಕಿದ್ದ ಅಧಿವೇಶನವನ್ನು ಸರಕಾರ ಬೆಂಗಳೂರಿಗೆ ವರ್ಗಾಯಿಸಲು ಮುಂದಾಗಿದ್ದು ಆ ಭಾಗದ ಜನರಿಗೆ ಬಗೆದ ದ್ರೋಹವಾಗಿದೆ ಎಂದಿದೆ. ನೆರೆ, ಬರ ಪೀಡಿತ ಜನರ ಪ್ರತಿಭಟನೆ ಎದುರಿಸಲಾಗದೆ ಭಯದಿಂದ ಅಧಿವೇಶವನ್ನು ಬೆಳಗಾವಿಯಲ್ಲಿ ನಡೆಸುತ್ತಿಲ್ಲ ಎಂದು ಸರಕಾರ ನಿರ್ಧಾರವನ್ನು ಕಾಂಗ್ರೆಸ್ ವಿರೋಧಿಸಿದೆ.
ಇನ್ನು, ಈ ಬಾರಿ ಪೂರಕ ಬಜೆಟ್ ಮಂಡಿಸಲು ಯಡಿಯೂರಪ್ಪ ನಿರ್ಧರಿಸಿದ ಹಿನ್ನೆಲೆಯಲ್ಲಿ ಹೊಸ ಬಜೆಟ್ ನಿರೀಕ್ಷೆ ಹುಸಿಯಾಗಿದೆ. ಸೆ.18ರಂದು ನಡೆಯುವ ಸಂಪುಟ ಸಭೆಯಲ್ಲಿಈ ಬಗ್ಗೆ ಅಧಿಕೃತ ನಿರ್ಧಾರ ಪ್ರಕಟವಾಗುತ್ತದೆ.
ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಹಿರಿಯ ಸಚಿವರ ಸಭೆಯಲ್ಲಿಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಳಗಾವಿ ಜಿಲ್ಲೆ ಪ್ರವಾಹ ಪೀಡಿತವಾಗಿದ್ದು, ಅಧಿವೇಶನ ನಡೆಸಿದರೆ ಪರಿಹಾರ ಕಾರ್ಯಕ್ಕೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಬೆಂಗಳೂರಿನಲ್ಲೇ ಅಧಿವೇಶನ ನಡೆಸಲಾಗುತ್ತದೆ. ಹೀಗಾಗಿ ಮುಂದಿನ ವರ್ಷದ ನವೆಂಬರ್ ವರೆಗೂ ಬೆಳಗಾವಿ ಸುವರ್ಣಸೌಧ ಸರಕಾರದ ಯಾವುದೇ ಚಟುವಟಿಕೆಗೂ ಬಳಕೆಯಾಗುವುದಿಲ್ಲ.
ಸರಕಾರದ ನಿರ್ಧಾರಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು ಬೆಳಗಾವಿಯಲ್ಲಿ ನಡೆಯಬೇಕಿದ್ದ ಅಧಿವೇಶನವನ್ನು ಸರಕಾರ ಬೆಂಗಳೂರಿಗೆ ವರ್ಗಾಯಿಸಲು ಮುಂದಾಗಿದ್ದು ಆ ಭಾಗದ ಜನರಿಗೆ ಬಗೆದ ದ್ರೋಹವಾಗಿದೆ ಎಂದಿದೆ. ನೆರೆ, ಬರ ಪೀಡಿತ ಜನರ ಪ್ರತಿಭಟನೆ ಎದುರಿಸಲಾಗದೆ ಭಯದಿಂದ ಅಧಿವೇಶವನ್ನು ಬೆಳಗಾವಿಯಲ್ಲಿ ನಡೆಸುತ್ತಿಲ್ಲ ಎಂದು ಸರಕಾರ ನಿರ್ಧಾರವನ್ನು ಕಾಂಗ್ರೆಸ್ ವಿರೋಧಿಸಿದೆ.
ಇನ್ನು, ಈ ಬಾರಿ ಪೂರಕ ಬಜೆಟ್ ಮಂಡಿಸಲು ಯಡಿಯೂರಪ್ಪ ನಿರ್ಧರಿಸಿದ ಹಿನ್ನೆಲೆಯಲ್ಲಿ ಹೊಸ ಬಜೆಟ್ ನಿರೀಕ್ಷೆ ಹುಸಿಯಾಗಿದೆ. ಸೆ.18ರಂದು ನಡೆಯುವ ಸಂಪುಟ ಸಭೆಯಲ್ಲಿಈ ಬಗ್ಗೆ ಅಧಿಕೃತ ನಿರ್ಧಾರ ಪ್ರಕಟವಾಗುತ್ತದೆ.