ಆ್ಯಪ್ನಗರ

ಕೊರೊನಾ ಸುರಕ್ಷತೆಗಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯತಂಡ ರಚನೆ, ಸಮಸ್ಯೆಗೆ ಸಿಗುತ್ತಾ ಪರಿಹಾರ?

ಕೊರೊನಾ ಸುರಕ್ಷತೆಗಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ರಾಜ್ಯ ಮುಖ್ಯ ಕಾರ್ಯದರ್ಶಿ ಕಾರ್ಯತಂಡಗಳನ್ನ ರಚನೆ ಮಾಡಿದ್ದಾರೆ. ಈ ಕಾರ್ಯತಂಡ ಕೊರೊನಾ ಸುರಕ್ಷತೆ ಬಗ್ಗೆ ಕ್ರಮಕೈಗೊಳ್ಳಲಿದೆ.

Vijaya Karnataka Web 4 Jul 2020, 9:22 am
ಬೆಂಗಳೂರು : ಅನ್‌ಲಾಕ್‌-2ರ ಮಾರ್ಗಸೂಚಿ ಅನುಸಾರ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊರತು ಪಡಿಸಿ ಇತರ ಜಿಲ್ಲೆಗಳಲ್ಲಿಆರೋಗ್ಯ ಸುರಕ್ಷತೆ ಸಂಬಂಧ 14 ಕಾರ್ಯತಂಡಗಳನ್ನು ರಚಿಸಿರುವ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌ ಆದೇಶ ಹೊರಡಿಸಿದ್ದಾರೆ.
Vijaya Karnataka Web jpg (41)


ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿಈ ತಂಡಗಳು ಕಾರ್ಯ ನಿರ್ವಹಿಸಲಿವೆ. ಜಿಲ್ಲೆ, ತಾಲೂಕು ಕೇಂದ್ರ ಹಾಗೂ ಸ್ಥಳೀಯ ಮಟ್ಟದಲ್ಲಿ ಸೋಂಕಿತರ ಕ್ವಾರಂಟೈನ್‌ ಮಾಡಿಸುವುದು, ರೋಗಿಗಳ ಸ್ಥಳಾಂತರಕ್ಕೆ ಆಂಬುಲೆನ್ಸ್‌ ಒದಗಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್‌, ಸ್ಯಾನಿಟೈಸರ್‌ ಪೂರೈಸುವುದು, ಕೋವಿಡ್‌ ಬಗ್ಗೆ ಜಾಗೃತಿ ಮೂಡಿಸುವುದು ಈ ತಂಡಗಳ ಕರ್ತವ್ಯವಾಗಿದೆ.

ಈ ತಂಡಗಳ ಕಾರ್ಯ ನಿರ್ವಹಣೆಗೆ ಅಗತ್ಯವಾದ ನೆರವು ಕಲ್ಪಿಸುವುದು ಜಿಲ್ಲಾಧಿಕಾರಿಗಳ ಹೊಣೆಯಾಗಿದೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ದಿನ ನಿತ್ಯ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಸೋಂಕು ವ್ಯಾಪಕವಾಗಿರ ಹರಡುತ್ತಿದೆ. ಇದರ ನಿಯಂತ್ರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಸಮಯಕ್ಕೆ ಸರಿಯಾಗಿ ವೆಂಟಿಲೇಟರ್‌ ಸಿಗದೆ, ಇಬ್ಬರು ಪೊಲೀಸರು ಸೇರಿ ಮೂವರು ಸಾವು!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ