ಆ್ಯಪ್ನಗರ

ತಗ್ಗಿದ ನಿವಾರ್ ಚಂಡಮಾರುತದ ಅಬ್ಬರ: ಕರ್ನಾಟಕದಲ್ಲಿ ಮುಂದುವರೆಯಲಿದೆ ಮಳೆ!

ಭೀಕರ ನಿವಾರ್ ಚಂಡಮಾರುತದ ಅಬ್ಬರ ತಗ್ಗಿದ್ದು, ಶಕ್ತಿ ಕಳೆದುಕೊಂಡು ದುರ್ಬಲವಾಗಿದೆ. ಆದರೆ ನಿವಾರ್ ಚಂಡಮಾರುತದ ಅಬ್ಬರ ತಗ್ಗಿದ್ದರೂ ಕರ್ನಾಟಕದಲ್ಲಿ ಮಾತ್ರ ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Vijaya Karnataka Web 26 Nov 2020, 9:37 pm
ಬೆಂಗಳೂರು: ಭೀಕರ ನಿವಾರ್ ಚಂಡಮಾರುತದ ಅಬ್ಬರ ತಗ್ಗಿದ್ದು, ಶಕ್ತಿ ಕಳೆದುಕೊಂಡು ದುರ್ಬಲವಾಗಿದೆ. ಈ ಭೀಕರ ಚಂಡಮಾರುತವನ್ನು ತಮಿಳುನಾಡು ಹಾಗೂ ಪುದುಚೇರಿ ಯಶಸ್ವಿಯಾಗಿ ಎದುರಿಸಿವೆ. ನಿವಾರ್ ಇದೀಗ ಆಂಧ್ರಪ್ರದೇಶದ ಕರಾವಳಿಯತ್ತ ಮುನ್ನುಗ್ಗುತ್ತಿದೆ.
Vijaya Karnataka Web Cyclone Nivar
ತಗ್ಗಿದ ನಿವಾರ್ ಚಂಡಮಾರುತದ ಅಬ್ಬರ


ಆದರೆ ನಿವಾರ್ ಚಂಡಮಾರುತದ ಅಬ್ಬರ ತಗ್ಗಿದ್ದರೂ ಕರ್ನಾಟಕದಲ್ಲಿ ಮಾತ್ರ ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈಗಾಗಲೇ ನಿವಾರ್ ಚಂಡಮಾರುತದ ಪರಿಣಾಮವಾಗಿ ರಾಜ್ಯದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಮಳೆಯಾಗಿದ್ದು, ನ.28(ಶನಿವಾರ)ರವೆರೆಗೆ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ನಿವಾರ್ ಎಫೆಕ್ಟ್‌ ;ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಇನ್ನು ಬಳ್ಳಾರಿ, ತುಮಕೂರು ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಚದುರಿದಂತೆ ಮಳೆಯಾಗಿದ್ದು, ನ.28ರವರೆಗೆ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನಾಳೆ(ನ.27-ಶುಕ್ರವಾರ)ವರೆಗೆ ಯೆಲ್ಲೋ ಅಲರ್ಟ್ ಮುಂದುವರೆಯಲಿದ್ದು, ನ. 28(ಶನಿವಾರ)ರ ಬಳಿಕ ಮಳೆ ನಿಲ್ಲಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜಧಾನಿ ಬೆಂಗಳೂರು:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು(ಗುರುವಾರ) ಸಂಜೆಯಿಂದಲೇ ಭಾರೀ ಮಳೆಯಾಗುತ್ತಿದ್ದು, ಕೆಲವು ಪ್ರದೇಶಗಳಲ್ಲಿ ಮಳೆಯ ಈಗಲೂ ಮುಂದುವರೆದಿದೆ.

ಕರ್ನಾಟಕದಲ್ಲಿ ಎರಡು ದಿನಗಳವರೆಗೆ ಮಳೆ ಮುಂದುವರಿಕೆ


ರಾಜ್ಯದ ಇತರ ನಗರಗಳಿಗೆ ಹೋಲಿಸಿದರೆ ರಾಜಧಾನಿ ಬೆಂಗಳೂರಿನಲ್ಲೇ ಅತಿ ಹೆಚ್ಚು ಮಳೆಯಾಗಿದ್ದು, ನಾಳೆ(ನ.27) ಮತ್ತು ಶನಿವಾರ(ನ.28)ರವರೆಗೂ ಮಳೆ ಮುಂದುವರೆಯಲಿದೆ ಎನ್ನಲಾಗಿದೆ.

ನಿವಾರ್ ಚಂಡಮಾರುತ- ಬೆಂಗಳೂರಿನಲ್ಲೂ ತುಂತುರು ಮಳೆ

ಒಟ್ಟಿನಲ್ಲಿ ನಿವಾರ್ ಅಬ್ಬರ ತಗ್ಗಿದ್ದರೂ, ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಚಂಡಮಾರುತದ ಪ್ರಭಾವ ಇರಲಿದೆ ಎಂಬುದು ನಿಸ್ಸಂದೇಹ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ