ಆ್ಯಪ್ನಗರ

ಆವಿಷ್ಕಾರದಲ್ಲಿ ಕರ್ನಾಟಕ ನಂ. 1: ನೀತಿ ಆಯೋಗ ಸೂಚ್ಯಂಕದಲ್ಲಿ ಸತತ 2ನೇ ಬಾರಿ ಅಗ್ರಸ್ಥಾನ !

ನೀತಿ ಆಯೋಗ ಬಿಡುಗಡೆ ಮಾಡಿರುವ ಆವಿಷ್ಕಾರ ಸೂಚ್ಯಂಕ 2020ರ ಪಟ್ಟಿಯಲ್ಲಿ ಕರ್ನಾಟಕ ಮತ್ತೆ ಅಗ್ರಸ್ಥಾನ ಪಡೆದಿದೆ. 2019ರಲ್ಲಿ ಮೊದಲ ಬಾರಿಗೆ ಪ್ರಕಟಿಸಿದ್ದ ಪಟ್ಟಿಯಲ್ಲೂ ಕರ್ನಾಟಕ ಪ್ರಥಮ ಸ್ಥಾನ ಪಡೆದಿತ್ತು. ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ, ಕೇರಳ ಕ್ರಮವಾಗಿ ಎರಡು, ಮೂರು, ನಾಲ್ಕು ಮತ್ತು ಐದನೇ ಸ್ಥಾನದಲ್ಲಿವೆ.

Vijaya Karnataka Web 21 Jan 2021, 6:37 am
ಬೆಂಗಳೂರು: ನೀತಿ ಆಯೋಗ ಬಿಡುಗಡೆ ಮಾಡಿರುವ ಆವಿಷ್ಕಾರ ಸೂಚ್ಯಂಕ 2020ರ ಪಟ್ಟಿಯಲ್ಲಿ ಕರ್ನಾಟಕ ಸತತ ಎರಡನೇ ಸಲವೂ ಅಗ್ರ ಸ್ಥಾನ ಪಡೆದಿದೆ. ಸಂಶೋಧನೆ ಹಾಗೂ ನವೀನ ತಂತ್ರಜ್ಞಾನಗಳ ಅನುಷ್ಠಾನದಲ್ಲಿ ರಾಜ್ಯಗಳ ಸಾಧನೆಯನ್ನು ಪರಿಗಣಿಸಿ ಸೂಚ್ಯಂಕವನ್ನು ಬಿಡುಗಡೆಗೊಳಿಸಲಾಗಿದೆ.
Vijaya Karnataka Web ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ


''ನೀತಿ ಆಯೋಗದ ಆವಿಷ್ಕಾರ ಸೂಚ್ಯಂಕದಲ್ಲಿ ಸತತ ಎರಡನೇ ಬಾರಿಗೆ ಕರ್ನಾಟಕ ಅಗ್ರ ಶ್ರೇಯಾಂಕ ಪಡೆದಿರುವುದು ಹೆಮ್ಮೆಯ ವಿಷಯ. ಮಾನವ ಸಂಪನ್ಮೂಲ ಲಭ್ಯತೆ, ಉನ್ನತ ಶಿಕ್ಷಣ ಸಂಸ್ಥೆಗಳು, ಪ್ರಮುಖ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳು, ಉತ್ತಮ ಆಡಳಿತ ಹಾಗೂ ಹೂಡಿಕೆಗೆ ಪೂರಕ ವಾತಾವರಣದಿಂದಾಗಿ ಅಗ್ರ ಸ್ಥಾನ ಪಡೆಯಲು ಸಾಧ್ಯವಾಗಿದೆ,'' ಎಂದು ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ಸಂತಸ ವ್ಯಕ್ತಪಡಿಸಿದ್ದಾರೆ.

2019ರಲ್ಲಿ ಮೊದಲ ಬಾರಿಗೆ ಪ್ರಕಟಿಸಿದ್ದ ಪಟ್ಟಿಯಲ್ಲೂ ಕರ್ನಾಟಕ ಪ್ರಥಮ ಸ್ಥಾನ ಪಡೆದಿತ್ತು. ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ, ಕೇರಳ ಕ್ರಮವಾಗಿ ಎರಡು, ಮೂರು, ನಾಲ್ಕು ಮತ್ತು ಐದನೇ ಸ್ಥಾನದಲ್ಲಿವೆ. ಪಟ್ಟಿಯಲ್ಲಿರುವ 17 ಪ್ರಮುಖ ರಾಜ್ಯಗಳ ಪೈಕಿ ಹರಿಯಾಣ 6ನೇ ಸ್ಥಾನದಲ್ಲಿದ್ದರೆ, ಬಿಹಾರ ಕಡೆಯ ಸ್ಥಾನದಲ್ಲಿದೆ. ಈಶಾನ್ಯ ರಾಜ್ಯಗಳು ಹಾಗೂ ಗುಡ್ಡಗಾಡು ರಾಜ್ಯಗಳ ರ್ಯಾಂಕಿಂಗ್‌ ನಲ್ಲಿ ಹಿಮಾಚಲ ಪ್ರದೇಶ ಮೊದಲ ಸ್ಥಾನ ಗಳಿಸಿದೆ. ಮೇಘಾಲಯ ಕೊನೆಯ ರ್ಯಾಂಕ್‌ ಗಳಿಸಿದೆ. ಕೇಂದ್ರಾಡಳಿತ ಪ್ರದೇಶಗಳ ಪೈಕಿ ದಿಲ್ಲಿ ಮೊದಲ ರ್ಯಾಂಕ್‌ ಹಾಗೂ ಲಕ್ಷದ್ವೀಪ ಕೊನೆಯ ಸ್ಥಾನದಲ್ಲಿದೆ.
ಆವಿಷ್ಕಾರದಲ್ಲಿ ನಂ.1 ಎಂದು ಸಂಭ್ರಮಿಸುವ ಮುನ್ನ ಸೂಚ್ಯಂಕವನ್ನು ಅರ್ಥೈಸೋಣ!
ಮಾನದಂಡಗಳೇನು?
ಆವಿಷ್ಕಾರ, ಅನುಷ್ಠಾನ, ಮಾನವ ಸಂಪನ್ಮೂಲ, ಹೂಡಿಕೆ, ವಿಷಯ ತಜ್ಞರು, ಉದ್ಯಮಸ್ನೇಹಿ ವಾತಾವರಣ, ಸುರಕ್ಷತೆ, ಉತ್ತಮ ಕಾನೂನು, ಸಾಧನೆ, ಜ್ಞಾನ ಪ್ರಸಾರ ಮುಂತಾದ ಅಂಶಗಳನ್ನು ಆಧರಿಸಿ ಸೂಚ್ಯಂಕ ನಿರ್ಧರಿಸಲಾಗುತ್ತದೆ. ಈ ಎಲ್ಲ ಮಾನದಂಡಗಳಲ್ಲಿ ಕರ್ನಾಟಕ ಅಗ್ರ ಸ್ಥಾನ ಕಾಯ್ದುಕೊಂಡಿದೆ.

ಆವಿಷ್ಕಾರ ರ್ಯಾಂಕ್‌ ಮತ್ತು ಸ್ಕೋರ್‌
1. ಕರ್ನಾಟಕ: 42.50
2. ಮಹಾರಾಷ್ಟ್ರ: 38.03
3. ತಮಿಳುನಾಡು: 37.91
4. ತೆಲಂಗಾಣ: 33.23
5. ಕೇರಳ: 30.58
6. ಹರಿಯಾಣ: 25.81
7. ಆಂಧ್ರಪ್ರದೇಶ: 24.19
8. ಗುಜರಾತ್‌: 23.63
9. ಉತ್ತರಪ್ರದೇಶ: 22.85
10. ಪಂಜಾಬ್‌: 22.54
ಭಾರತೀಯ ಆವಿಷ್ಕಾರ ಸೂಚ್ಯಂಕ, ಕರ್ನಾಟಕ ನಂ.1ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಹೊಸ ಮಾನದಂಡ ಅಳವಡಿಸಲಾಗಿತ್ತು. ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ರಾಜ್ಯಗಳು ಮಾಡುವ ವೆಚ್ಚ ಹಾಗೂ ಹೊಸ ವ್ಯಾಪಾರೋದ್ಯಮಗಳ ನೋಂದಣಿ ಇವುಗಳಲ್ಲಿ ಪ್ರಮುಖ. ರಾಜ್ಯವು ಎಲ್ಲಾ ವಿಭಾಗಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಡಾ. ಸಿ.ಎನ್‌.ಅಶ್ವತ್ಥನಾರಾಯಣ, ಉಪ ಮುಖ್ಯಮಂತ್ರಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ