ಆ್ಯಪ್ನಗರ

ಮಧ್ಯಾಹ್ನದವರೆಗೆ ಕಲಾಪಕ್ಕೆ ಬಾರದ ಸಿಎಂ

ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಮಂಗಳವಾರ ಮಧ್ಯಾಹ್ನದವರೆಗೆ ವಿಧಾನಸಭೆ ಕಲಾಪದಿಂದ ಹೊರಗುಳಿದು, ಮೈತ್ರಿ ಸರಕಾರ ಉಳಿಸಿಕೊಳ್ಳುವ ಕೊನೇ ಪ್ರಯತ್ನದಲ್ಲಿ ತೊಡಗಿದ್ದರು.

Vijaya Karnataka 24 Jul 2019, 5:00 am
ಬೆಂಗಳೂರು: ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಮಂಗಳವಾರ ಮಧ್ಯಾಹ್ನದವರೆಗೆ ವಿಧಾನಸಭೆ ಕಲಾಪದಿಂದ ಹೊರಗುಳಿದು, ಮೈತ್ರಿ ಸರಕಾರ ಉಳಿಸಿಕೊಳ್ಳುವ ಕೊನೇ ಪ್ರಯತ್ನದಲ್ಲಿ ತೊಡಗಿದ್ದರು.
Vijaya Karnataka Web 2307-2-2-100 (39)


ಬೆಳಗ್ಗೆ ತಮ್ಮ ನಿವಾಸದಿಂದ ಹೊರಟು ಪದ್ಮನಾಭನಗರದ ಮನೆಯಲ್ಲಿ ದೇವೇಗೌಡರನ್ನು ಭೇಟಿ ಮಾಡಿ ತಾಜ್‌ ವೆಸ್ಟೆಂಡ್‌ ಹೋಟೆಲ್‌ ಸೇರಿಕೊಂಡ ಸಿಎಂ, ವಿಧಾನಸಭೆಯತ್ತ ಮುಖ ಮಾಡಲಿಲ್ಲ.

ವಿಶ್ವಾಸಮತ ಯಾಚನೆ ಪ್ರಸ್ತಾವನೆ ಮೇಲಿನ ಚರ್ಚೆಯಿಂದ ಹೊರಗುಳಿದ ಅವರು ಹೋಟೆಲ್‌ ಕೊಠಡಿಗೆ ಸಚಿವ ಡಿ.ಕೆ.ಶಿವಕುಮಾರ್‌ ಮತ್ತಿತರರನ್ನು ಕರೆಸಿಕೊಂಡು ಸಮಾಲೋಚನೆ ನಡೆಸಿದರು. ಭೋಜನ ವಿರಾಮದ ಬಳಿಕವಷ್ಟೇ ಸದನಕ್ಕೆ ಬಂದ ಸಿಎಂ ವಿಶ್ವಾಸಮತ ಯಾಚನೆ ಪ್ರಸ್ತಾವನೆ ಮೇಲೆ ಅಂತಿಮ ಭಾಷಣ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ