ಆ್ಯಪ್ನಗರ

ಜ. 20-30 ರವೆಗೆ ವಿಧಾನ ಮಂಡಲ ಅಧಿವೇಶನ: ಸಂಪುಟ ಸಭೆ ತೀರ್ಮಾನ

ಬಿಡಿಎ ವ್ಯಾಪ್ತಿಯ ಅನಧಿಕೃತ ಕಟ್ಟಡದಾರರಿಗೆ ಉಡುಗೊರೆ ನೀಡಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಬಿಡಿಎಯ 98cಗೆ ತಿದ್ದುಪಡಿ ತಂದು ಬಿಡಿಎ ವ್ಯಾಪ್ತಿಯ ಸುಮಾರು 75 ಸಾವಿರ ಅನಧಿಕೃತ ಕಟ್ಟಡಗಳನ್ನು ಸಕ್ರಮಗೊಳಿಸಲು ತೀರ್ಮಾನಿಸಲಾಗಿದ್ದು, ಇವುಗಳಿಗೆ ದಂಡ ಕಟ್ಟಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಲಾಗಿದೆ.

Vijaya Karnataka 12 Dec 2019, 6:43 pm
ಬೆಂಗಳೂರು: ಜಂಟಿ ಅಧಿವೇಶನವನ್ನು ಜನವರಿ 20-30 ರವೆಗೆ ನಡೆಸಲು ಗುರುವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.
Vijaya Karnataka Web JC Madhu Swamy


ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆಸಿ ಮಾಧುಸ್ವಾಮಿ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದರು.ಆರ್ಯ ವೈಶ್ಯ ಸಮುದಾಯದವರಿಗೆ ಸದ್ಯ ಸಾಲ ತೆಗೆದುಕೊಳ್ಳಲು ಮಾತ್ರ ಅವಕಾಶವಿದ್ದು, ಶೀಘ್ರದಲ್ಲೇ ಶಿಕ್ಷಣ ಮತ್ತು ಉದ್ಯೋಗಕ್ಕೆ ಅನುಕೂಲವಾಗುವಂತೆ ಜಾತಿ ಪ್ರಮಾಣ ಪತ್ರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ ನೀಡಿದ್ದು, ಕಟ್ಟಡ ಹಾಗೂ ಇನ್ನಿತರ ಕಾಮಗಾರಿಗಳಿಗೆ 525 ಕೋಟಿ ರೂಪಾಯಿ ನೀಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಪರಿಶಿಷ್ಠ ಜಾತಿಯ ಐಟಿಐ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಲು ನಿರ್ಧರಿಸಲಾಗಿದ್ದು ಲ್ಯಾಪ್‌ಟಾಪ್‌ ಖರೀದಿಗೆ 16.98 ಕೋಟಿ ರೂಪಾಯಿ ನೀಡಲು ಸಂಪುಟ ಒಪ್ಪಿಗೆ ನೀಡಿದೆ.

ಬಾಗಲಕೋಟೆಯ ಪಟ್ಟದಕಲದಲ್ಲು ಪ್ರವಾಸಿ ತಾಣ ಅಭಿವೃದ್ದಿ ನಿಟ್ಟಿನಲ್ಲಿ 129.25 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರವಾಸಿ ಪ್ಲಾಜಾ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. 24 ಎಕರೆ ಖರೀದಿಸಿ ಟ್ಯೂರಿಸಂ ಪ್ಲಾಜಾ ನಿರ್ಮಾಣ ಮಾಡಲಾಗುತ್ತದೆ ಎಂದು ಮಾಧುಸ್ವಾಮಿ ವಿವರ ನೀಡಿದರು.

ಬಿಡಿಎ ವ್ಯಾಪ್ತಿಯ ಅನಧಿಕೃತ ಕಟ್ಟಡದಾರರಿಗೆ ಉಡುಗೊರೆ ನೀಡಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಬಿಡಿಎಯ 98cಗೆ ತಿದ್ದುಪಡಿ ತಂದು ಬಿಡಿಎ ವ್ಯಾಪ್ತಿಯ ಸುಮಾರು 75 ಸಾವಿರ ಅನಧಿಕೃತ ಕಟ್ಟಡಗಳನ್ನು ಸಕ್ರಮಗೊಳಿಸಲು ತೀರ್ಮಾನಿಸಲಾಗಿದ್ದು, ಇವುಗಳಿಗೆ ದಂಡ ಕಟ್ಟಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಲಾಗಿದೆ. ಈ ಸಂಬಂಧ ತಿದ್ದುಪಡಿ ತರಲು ಡಿಸಿಎಂ ಅಶ್ವಥ್ ನಾರಾಯಣ್, ಸಚಿವರಾದ ವಿ. ಸೋಮಣ್ಣ, ಆರ್. ಅಶೋಕ್, ಸುರೇಶ್ ಕುಮಾರ್ ನೇತೃತ್ವದಲ್ಲಿ ಸಮಿತಿ ರಚಿಸಲಾಗುತ್ತದೆ.

2 ಸಾವಿರ ದಾದಿಯರ ನೇಮಕಕ್ಕೂ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಲಿಖಿತ ಪರೀಕ್ಷೆಯ ಮೂಲಕ ದಾದಿಯ ಆಯ್ಕೆ ನಡೆಯಲಿದೆ ಎಂದು ಡಿಸಿಎಂ ಅಶ್ವಥ್‌ ನಾರಾಯಣ್‌ ವಿವರ ನೀಡಿದ್ದಾರೆ. ಆಸ್ಪತ್ರೆ ಮತ್ತು ನರ್ಸಿಂಗ್‌ ಕಾಲೇಜುಗಳಲ್ಲಿ ನೂತನ ಕಾರ್ಯಕ್ರಮ ಜಾರಿಗೆ ತರುತ್ತಿದ್ದೇವೆ ಎಂದು ಹೇಳಿದ ಅವರು, ಇದಕ್ಕಾಗಿ ಮುಖ್ಯಮಂತ್ರಿಗಳು 2,500 ಕೋಟಿ ರೂ. ಅನುದಾನ ನೀಡಿದ್ದಾರೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ