ಆ್ಯಪ್ನಗರ

ಆದಷ್ಟು ಬೇಗ 'ದೋಸ್ತಿ ಹಿಡಿತದಿಂದ' ರಾಜ್ಯಕ್ಕೆ ಮುಕ್ತಿ ಬಿಜೆಪಿ ಗುರಿ: ಮುರಳೀಧರ ರಾವ್

105 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಆದಷ್ಟು ಬೇಗನೆ ರಾಜ್ಯದಲ್ಲಿ ಅಧಿಕಾರ ಸ್ಥಾಪಿಸಿ ವಿಕಾಸದ ಹಾದಿಯಲ್ಲಿ ಕೊಂಡೊಯ್ಯುತ್ತದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ತಿಳಿಸಿದರು.

Vijaya Karnataka Web 22 Jun 2019, 12:48 pm
ಬೆಂಗಳೂರು: ಎಷ್ಟು ಸಾಧ್ಯವೋ ಅಷ್ಟು ಬೇಗ ಈ ಸರಕಾರವನ್ನು ಮುಕ್ತಗೊಳಿಸುವುದು ನಮ್ಮ ಅಜೆಂಡಾ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಪಿ. ಮುರಳೀಧರ್ ರಾವ್ ಹೇಳಿದ್ದಾರೆ.
Vijaya Karnataka Web V Muralidhara Rao


ಬಿಜೆಪಿ ಸದಸ್ಯತ್ವ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, 105 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ನಾವು ರಾಜ್ಯದಲ್ಲಿ ಅಧಿಕಾರ ಸ್ಥಾಪಿಸುವುದು ನಮ್ಮ ಕೆಲಸವಷ್ಟೇ ಅಲ್ಲ, ಕರ್ತವ್ಯವೂ ಹೌದು. ಎಷ್ಟು ಬೇಗ ನಾವು ಈ ಸರಕಾರವನ್ನು ರಾಜ್ಯದಿಂದ ಮುಕ್ತಗೊಳಿಸುತ್ತೇವೆಯೋ ಅಷ್ಟು ಬೇಗ ರಾಜ್ಯದ ವಿಕಾಸಕ್ಕೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಆದರೆ ಮೈತ್ರಿ ಸರಕಾರದ ಮುಖ್ಯಸ್ಥರು ಈಗ ಮಧ್ಯಂತರ ಚುನಾವಣೆ ಹೆಸರಿನಲ್ಲಿ ಶಾಸಕರನ್ನು ಬ್ಲಾಕ್ ಮೇಲ್ ಮಾಡಲಾರಂಭಿಸಿದ್ದಾರೆ. ಬಿಜೆಪಿ ಇದಕ್ಕೆ ಅವಕಾಶ ನೀಡುವುದಿಲ್ಲ. ಜನತೆಗೂ ಮಧ್ಯಂತರ ಚುನಾವಣೆ ಬೇಕಿಲ್ಲ. ಬಿಜೆಪಿ ಸರಕಾರ ರಚನೆ ಮಾಡುತ್ತದೆ ಎಂದು ಹೇಳಿದರು. ಈ ಮೂಲಕ ಭವಿಷ್ಯದಲ್ಲಿ ಆಪರೇಷನ್ ಕಮಲ ಸಾಧ್ಯತೆಯನ್ನು ಮುಕ್ತವಾಗಿಟ್ಟಿದ್ದಾರೆ.

ಆದಷ್ಟು ಬೇಗ ತೊಲಗಿ: ಸಮ್ಮಿಶ್ರ ಸರಕಾರಕ್ಕೆ ಬಿಎಸ್‌ವೈ ಆಗ್ರಹ
ಸರಕಾರ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ, ರಾಜ್ಯದ ಜನತೆ ಮಧ್ಯಂತರ ಚುನಾವಣೆ ಬಯಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ನಾವು 105 ಶಾಸಕರನ್ನು ಹೊಂದಿದ್ದೇವೆ. ಕಾಂಗ್ರೆಸ್ ಜೆಡಿಎಸ್‌ನಲ್ಲಿ 20ಕ್ಕೂ ಹೆಚ್ಚು ಅತೃಪ್ತರಿದ್ದಾರೆ. ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಅಗಬಹುದು. ಕಾದು ನೋಡೋಣ. ಈ ಸರಕಾರ ರಷ್ಟು ಸಾಧ್ಯವೋ ಅಷ್ಟು ಬೇಗ ತೊಲಗಬೇಕು ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ