ಬೆಂಗಳೂರು: ತನ್ನ ಇಬ್ಬರು ಪತ್ನಿಯರು ಹಾಗೂ ಪುತ್ರಿಯನ್ನು ಕೊಲೆ ಮಾಡಿ ಕಳೆದ 30 ವರ್ಷಗಳಿಂದ ಜೈಲಿನಲ್ಲಿರುವ ಕಲಬುರಗಿ ಜಿಲ್ಲೆಯ ಅಫ್ಜಲ್ಪುರದ ಅಪರಾಧಿ ಸಾಯಿಬಣ್ಣನಿಗೆ ಹೈಕೋರ್ಟ್ ಜೀವದಾನ ನೀಡಿದೆ. ಅಪರಾಧಿಗೆ 70 ವರ್ಷ ವಯಸ್ಸಾಗಿದೆ ಎನ್ನುವ ಕಾರಣಕ್ಕೆ ಹೈಕೋರ್ಟ್, ಅಧೀನ ನ್ಯಾಯಾಲಯ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿದೆ. ಇದರಿಂದ ಏಕಾಂಗಿ ಸೆರೆವಾಸ ಅನುಭವಿಸುತ್ತಿರುವ ಆತ ಜೀವವಿರುವರೆಗೂ ಜೈಲಿನಲ್ಲೇ ಕಾಲ ಕಳೆಯಬೇಕಾಗುತ್ತದೆ. ಗಲ್ಲುಶಿಕ್ಷೆ ಪ್ರಶ್ನಿಸಿ ಸಾಯಿಬಣ್ಣ ಅಲಿಯಾಸ್ ನಿಂಗಪ್ಪ ನಾಟಿಕರ್ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾ. ಜಿ.ನರೇಂದರ್ ಮತ್ತು ನ್ಯಾ.ಸಿ.ಎಂ.ಪೂಣಚ್ಚ ಅವರಿದ್ದ ಅವರಿದ್ದ ವಿಭಾಗೀಯ ಪೀಠ, ಈ ತೀರ್ಪು ನೀಡಿದೆ.
''ಅರ್ಜಿದಾರ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ಮೊದಲಿಗೆ ಸರಕಾರದಲ್ಲಿ 2005ರ ಮೇ 31ರಿಂದ 2007ರ ಜ.9ರವರೆಗೆ ಅಂದರೆ ಒಂದು ವರ್ಷ 9 ತಿಂಗಳು ಮತ್ತ 9 ದಿನ ವಿಳಂಬವಾಗಿದೆ. ಎರಡನೇಯದಾಗಿ ರಾಜ್ಯಪಾಲರ ಸಚಿವಾಲಯದಲ್ಲಿ 2007ರ ಜ.12ರಿಂದ ಫೆ.2ರವರೆಗೆ ವಿಳಂಬವಾಗಿದೆ. ಮೂರನೆಯದಾಗಿ ಕೇಂದ್ರ ಸರಕಾರಕ್ಕೆ ಸಂವಹನ ಕಳುಹಿಸಿಕೊಡುವಲ್ಲಿ 24 ದಿನ ವಿಳಂಬವಾಗಿದೆ. ನಾಲ್ಕನೆಯದಾಗಿ ರಾಷ್ಟ್ರಪತಿ ಬಳಿ ಅರ್ಜಿ 2007ರ ಫೆ.28 ರಿಂದ 2013ರ ಜ.3ರವರೆಗೆ ಇತ್ಯರ್ಥವಾಗದೆ ಉಳಿದಿತ್ತು. ಒಟ್ಟಾರೆ ನಾಲ್ಕು ಹಂತಗಳಲ್ಲಿ ಕ್ಷಮಾದಾನ ಅರ್ಜಿ ಪರಿಗಣಿಸುವುದು 7 ವರ್ಷ 8 ತಿಂಗಳು ವಿಳಂಬವಾಗಿದೆ. ಆದರೆ ಅದಕ್ಕೆ ಯಾವುದೇ ಕಾರಣ ನೀಡಿಲ್ಲ,'' ಎಂದು ನ್ಯಾಯಪೀಠ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅಭಿಪ್ರಾಯಪಟ್ಟಿದೆ.
ಅರ್ಜಿದಾರರ ಪರ ವಕೀಲರು, ಅರ್ಜಿದಾರನ ಕ್ಷಮಾದಾನ ಅರ್ಜಿ ಇತ್ಯರ್ಥವಾಗುವುದು 7 ವರ್ಷ 8 ತಿಂಗಳು, 9 ದಿನ ವಿಳಂಬವಾಗಿದೆ ಮತ್ತು ಕಾನೂನಿನಲ್ಲಿ ಸಮ್ಮತಿ ಇಲ್ಲದಿದ್ದರೂ ಏಕಾಂಗಿ ಸೆರೆವಾಸ ವಿಧಿಸಲಾಗಿದೆ. ಹಾಗಾಗಿ, ಅವರಿಗೆ ನೀಡಿರುವ ಗಲ್ಲುಶಿಕ್ಷೆ ರದ್ದುಗೊಳಿಸಬೇಕು ಎಂದು ಕೋರಿದ್ದರು.
ಅಮಿಕಸ್ ಕ್ಯೂರಿ, ಹಿರಿಯ ನ್ಯಾಯವಾದಿ ವಿಕ್ರಂ ಹುಯಿಲಗೋಳ, ಏಕಾಂಗಿ ಸೆರೆವಾಸ ವಿಧಿಸಿರುವುದು ನಿಜವಾಗಿದೆ. ಹಾಗಾಗಿ, ಆತ ಗಲ್ಲುಶಿಕ್ಷೆ ಕಡಿತಗೊಳಿಸುವಂತೆ ಕೋರಲು ಹಕ್ಕಿದೆ. ಕ್ಷಮಾದಾನ ಅರ್ಜಿ ಪರಿಗಣಿಸುವುದು ಮತ್ತು ವಿಲೇವಾರಿಯಲ್ಲಿ ವಿಳಂಬವಾಗಿರುವುದನ್ನು ಗಾಯವೆಂದು ಪರಿಗಣಿಸಬಹುದಾಗಿದೆ ಎಂದು ಹೇಳಿದ್ದರು. ಆದರೆ, ಪ್ರಾಸಿಕ್ಯೂಷನ್, ಶಿಕ್ಷೆ ಕಡಿತದ ಅರ್ಜಿಯನ್ನು ವಜಾಗೊಳಿಸಬೇಕೆಂದು ಕೋರಿತ್ತು.
ಕಲಬುರಗಿ ಸೆಷನ್ಸ್ ಕೋರ್ಟ್, ಸಾಯಿಬಣ್ಣನಿಗೆ ಗಲ್ಲುಶಿಕ್ಷೆ ವಿಧಿಸಿತ್ತು. ನಂತರ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಕೂಡ ಆ ಮರಣದಂಡನೆ ಶಿಕ್ಷೆಯನ್ನು ಎತ್ತಿಹಿಡಿದಿತ್ತು. ಆದರೆ, ಆತ ಕ್ಷಮಾದಾನ ಅರ್ಜಿ ವಿಲೇವಾರಿಯಲ್ಲಿ 7 ವರ್ಷ 8 ತಿಂಗಳು ವಿಳಂಬ ಹಿನ್ನೆಲೆ ಗಲ್ಲುಶಿಕ್ಷೆಯಿಂದ ವಿನಾಯಿತಿ ನೀಡುವಂತೆ ಹೈಕೋರ್ಟ್ ಮೊರೆ ಹೋಗಿದ್ದ.
30 ವರ್ಷಗಳ ಶಿಕ್ಷೆ ಅನುಭವಿಸಿದ್ದಾನೆ ಎಂದ ಕೋರ್ಟ್
''ಇಡೀ ಪ್ರಕರಣದ ವಿವರಗಳು ಮತ್ತು ಸಂದರ್ಭ ಪರಿಗಣಿಸಿದರೆ ಅರ್ಜಿದಾರನು ಈಗಾಗಲೇ 30 ವರ್ಷಕ್ಕೂ ಅಧಿಕ ಸೆರೆವಾಸ ಅನುಭವಿಸಿದ್ದಾನೆ. ನಮ್ಮ ಪ್ರಕಾರ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಲು ಸ್ವಾತಂತ್ರ್ಯ ನೀಡುವುದರ ಜತೆಗೆ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿದರೆ ನ್ಯಾಯ ಸಂದಾಯವಾದಂತಾಗುತ್ತದೆ,'' ಎಂದು ನ್ಯಾಯಪೀಠ ಹೇಳಿದೆ.''ಅರ್ಜಿದಾರ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ಮೊದಲಿಗೆ ಸರಕಾರದಲ್ಲಿ 2005ರ ಮೇ 31ರಿಂದ 2007ರ ಜ.9ರವರೆಗೆ ಅಂದರೆ ಒಂದು ವರ್ಷ 9 ತಿಂಗಳು ಮತ್ತ 9 ದಿನ ವಿಳಂಬವಾಗಿದೆ. ಎರಡನೇಯದಾಗಿ ರಾಜ್ಯಪಾಲರ ಸಚಿವಾಲಯದಲ್ಲಿ 2007ರ ಜ.12ರಿಂದ ಫೆ.2ರವರೆಗೆ ವಿಳಂಬವಾಗಿದೆ. ಮೂರನೆಯದಾಗಿ ಕೇಂದ್ರ ಸರಕಾರಕ್ಕೆ ಸಂವಹನ ಕಳುಹಿಸಿಕೊಡುವಲ್ಲಿ 24 ದಿನ ವಿಳಂಬವಾಗಿದೆ. ನಾಲ್ಕನೆಯದಾಗಿ ರಾಷ್ಟ್ರಪತಿ ಬಳಿ ಅರ್ಜಿ 2007ರ ಫೆ.28 ರಿಂದ 2013ರ ಜ.3ರವರೆಗೆ ಇತ್ಯರ್ಥವಾಗದೆ ಉಳಿದಿತ್ತು. ಒಟ್ಟಾರೆ ನಾಲ್ಕು ಹಂತಗಳಲ್ಲಿ ಕ್ಷಮಾದಾನ ಅರ್ಜಿ ಪರಿಗಣಿಸುವುದು 7 ವರ್ಷ 8 ತಿಂಗಳು ವಿಳಂಬವಾಗಿದೆ. ಆದರೆ ಅದಕ್ಕೆ ಯಾವುದೇ ಕಾರಣ ನೀಡಿಲ್ಲ,'' ಎಂದು ನ್ಯಾಯಪೀಠ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅಭಿಪ್ರಾಯಪಟ್ಟಿದೆ.
ಒಂದೇ ಕೋಣೆಯಲ್ಲಿ ಏಕಾಂಗಿಯಾಗಿ 16 ವರ್ಷ ಸೆರೆವಾಸ
ಅಲ್ಲದೆ, ಅಪರಾಧಿಯನ್ನು 2003ರ ಜ.10ರಿಂದ 2019ರ ಮೇ 20ರವರೆಗೆ ಬೆಳಗಾವಿಯ ಒಂದೇ ಕೊಣೆಯಲ್ಲಿಏಕಾಂಕಿಯಾಗಿ ಇರಿಸಲಾಗಿದೆ. ಅದರಂತೆ ಆತ 16 ವರ್ಷ ಏಕಾಂಗಿ ಸೆರೆವಾಸ ಅನುಭವಿಸಿದಂತಾಗಿದೆ ಎಂದು ನ್ಯಾಯಪೀಠ ಹೇಳಿದೆ.ಆರೋಗ್ಯ ಸಮಸ್ಯೆ ಉಲ್ಲೇಖ
ಕಾರಾಗೃಹ ಅಧಿಕಾರಿಗಳು ಸಲ್ಲಿಸಿರುವ ಆರೋಗ್ಯ ವರದಿ ಪ್ರಕಾರ, " ಅರ್ಜಿದಾರನು ಎದೆಯ ಎರಡೂ ಭಾಗಗಳಲ್ಲಿ ನೋವಿದೆ, ಭಯದಿಂದ ತತ್ತರಿಸಿದ್ದಾನೆ ಮತ್ತು ಬೇಧಿಯಿಂದ ಬಳಲಿದ್ದು, ಸಿಕ್ಕಾಪಟ್ಟೆ ಆಯಾಸವಾಗಿದೆ ಎಂದು ತಿಳಿಸಲಾಗಿದೆ. ಏಕಾಂಗಿ ಸೆರೆವಾಸದಿಂದಾಗಿ ಆತನಿಗೆ ಹೀಗೆಲ್ಲಾಆಗುತ್ತಿರಬಹುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.ಅರ್ಜಿದಾರರ ಪರ ವಕೀಲರು, ಅರ್ಜಿದಾರನ ಕ್ಷಮಾದಾನ ಅರ್ಜಿ ಇತ್ಯರ್ಥವಾಗುವುದು 7 ವರ್ಷ 8 ತಿಂಗಳು, 9 ದಿನ ವಿಳಂಬವಾಗಿದೆ ಮತ್ತು ಕಾನೂನಿನಲ್ಲಿ ಸಮ್ಮತಿ ಇಲ್ಲದಿದ್ದರೂ ಏಕಾಂಗಿ ಸೆರೆವಾಸ ವಿಧಿಸಲಾಗಿದೆ. ಹಾಗಾಗಿ, ಅವರಿಗೆ ನೀಡಿರುವ ಗಲ್ಲುಶಿಕ್ಷೆ ರದ್ದುಗೊಳಿಸಬೇಕು ಎಂದು ಕೋರಿದ್ದರು.
ಅಮಿಕಸ್ ಕ್ಯೂರಿ, ಹಿರಿಯ ನ್ಯಾಯವಾದಿ ವಿಕ್ರಂ ಹುಯಿಲಗೋಳ, ಏಕಾಂಗಿ ಸೆರೆವಾಸ ವಿಧಿಸಿರುವುದು ನಿಜವಾಗಿದೆ. ಹಾಗಾಗಿ, ಆತ ಗಲ್ಲುಶಿಕ್ಷೆ ಕಡಿತಗೊಳಿಸುವಂತೆ ಕೋರಲು ಹಕ್ಕಿದೆ. ಕ್ಷಮಾದಾನ ಅರ್ಜಿ ಪರಿಗಣಿಸುವುದು ಮತ್ತು ವಿಲೇವಾರಿಯಲ್ಲಿ ವಿಳಂಬವಾಗಿರುವುದನ್ನು ಗಾಯವೆಂದು ಪರಿಗಣಿಸಬಹುದಾಗಿದೆ ಎಂದು ಹೇಳಿದ್ದರು. ಆದರೆ, ಪ್ರಾಸಿಕ್ಯೂಷನ್, ಶಿಕ್ಷೆ ಕಡಿತದ ಅರ್ಜಿಯನ್ನು ವಜಾಗೊಳಿಸಬೇಕೆಂದು ಕೋರಿತ್ತು.
ಪ್ರಕರಣದ ಹಿನ್ನೆಲೆ ಏನು
ಅನೈತಿಕ ಸಂಬಂಧ ಶಂಕೆ ವ್ಯಕ್ತಪಡಿಸಿ ಸಾಯಿಬಣ್ಣ 1988ರ ಜನವರಿ 9ರಂದು ಪತ್ನಿ ಮಾಲಕವ್ವಳನ್ನು ಕೊಲೆ ಮಾಡಿ ತಾನೇ ಬಂದು ಪೊಲೀಸರಿಗೆ ಶರಣಾಗಿದ್ದ. ಆನಂತರ ಜೈಲಿನಲ್ಲಿರುವಾಗ ಸಹ ಕೈದಿ ದತ್ತು ಎಂಬಾತನೊಂದಿಗೆ ಆತನ ಸ್ನೇಹ ಬೆಳೆಯಿತು. ಜಾಮೀನು ಪಡೆದು ಸಹ ಕೈದಿ ದತ್ತುವಿನ ಪುತ್ರಿ ನಾಗಮ್ಮಗಳನ್ನು ವಿವಾಹವಾಗಿದ್ದನು. 2ನೇ ಪತ್ನಿ ನಾಗಮ್ಮಳಿಗೆ ವಿಜಯಲಕ್ಷ್ಮಿ ಎಂಬ ಮಗು ಜನಿಸಿತ್ತು. ಈ ಮಧ್ಯೆ, ಮೊದಲ ಪತ್ನಿ ಕೊಲೆ ಕೇಸಿನಲ್ಲಿ ಸಾಯಿಬಣ್ಣನಿಗೆ ಜೀವಾವಧಿ ಶಿಕ್ಷೆಯಾಗಿತ್ತು. 1994ರಲ್ಲಿ ಪೆರೋಲ್ ಪಡೆದು ಹೊರಬಂದಿದ್ದ ಸಾಯಿಬಣ್ಣ, 2ನೇ ಪತ್ನಿ ಹಾಗೂ ಮಗುವನ್ನು ಕೊಲೆ ಮಾಡಿ ಮತ್ತೆ ಜೈಲು ಸೇರಿದ್ದ.ಕಲಬುರಗಿ ಸೆಷನ್ಸ್ ಕೋರ್ಟ್, ಸಾಯಿಬಣ್ಣನಿಗೆ ಗಲ್ಲುಶಿಕ್ಷೆ ವಿಧಿಸಿತ್ತು. ನಂತರ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಕೂಡ ಆ ಮರಣದಂಡನೆ ಶಿಕ್ಷೆಯನ್ನು ಎತ್ತಿಹಿಡಿದಿತ್ತು. ಆದರೆ, ಆತ ಕ್ಷಮಾದಾನ ಅರ್ಜಿ ವಿಲೇವಾರಿಯಲ್ಲಿ 7 ವರ್ಷ 8 ತಿಂಗಳು ವಿಳಂಬ ಹಿನ್ನೆಲೆ ಗಲ್ಲುಶಿಕ್ಷೆಯಿಂದ ವಿನಾಯಿತಿ ನೀಡುವಂತೆ ಹೈಕೋರ್ಟ್ ಮೊರೆ ಹೋಗಿದ್ದ.