ಆ್ಯಪ್ನಗರ

ರಾಜ್ಯದ ಶೇ. 49 ಮಕ್ಕಳಿಗೆ ಕರುಳಿನ ಹುಳ ಬಾಧೆ

ರಾಜ್ಯದಲ್ಲೂ ಆರೋಗ್ಯ ಇಲಾಖೆ ವತಿಯಿಂದ ಲಸಿಕೆ ಕಾರ್ಯಕ್ರಮ ಜಾರಿಮಾಡಿದ್ದು, ಸರಕಾರಿ ಶಾಲೆಗಳಲ್ಲಿ ಉತ್ತಮ ಸ್ಪಂದನೆ ಕಂಡುಬಂದರೆ, ಖಾಸಗಿ ಶಾಲೆಗಳಲ್ಲಿ ಮಾತ್ರ ಯೋಜನೆ ಜಾರಿಗೆ ತೊಡಕುಂಟಾಗಿದೆ.

Vijaya Karnataka Web 4 Jan 2019, 4:48 pm
ಬೆಂಗಳೂರು: ರಾಜ್ಯದಲ್ಲಿ 14 ವರ್ಷದೊಳಗಿನ ಶೇ. 49 ಮಕ್ಕಳಿಗೆ ಕರುಳಿನ ಹುಳದ ತೊಂದರೆ ಕಾಣಿಸಿಕೊಂಡಿತ್ತು ಎಂದು ವರದಿ ಹೇಳಿದೆ.
Vijaya Karnataka Web Injection


2016ರಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ರಾಷ್ಟ್ರೀಯ ಲಸಿಕೆ ಕಾರ್ಯಕ್ರಮ ಜಾರಿ ಮಾಡಿದ್ದು, ಈವರೆಗೆ ದೇಶಾದ್ಯಂತ 14 ವರ್ಷದೊಳಗಿನ 22.7 ಕೋಟಿ ಮಕ್ಕಳಿಗೆ ಲಸಿಕೆ ಹಾಕಲಾಗಿದೆ.

ಹುಳದ ಸಮಸ್ಯೆಗೆ ಒಳಗಾದ ಮಕ್ಕಳಲ್ಲಿ ಪೌಷ್ಟಿಕತೆಯ ಕೊರತೆ ಮತ್ತು ಅನೀಮಿಯಾ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಹೀಗಾಗಿ ವಿಶ್ವ ಆರೋಗ್ಯ ಸಂಸ್ಥೆಯ ಸೂಚನೆಯಂತೆ ಲಸಿಕೆ ಕಾರ್ಯಕ್ರಮ ಜಾರಿಮಾಡಲಾಗಿತ್ತು.

ರಾಜ್ಯದಲ್ಲೂ ಆರೋಗ್ಯ ಇಲಾಖೆ ವತಿಯಿಂದ ಲಸಿಕೆ ಕಾರ್ಯಕ್ರಮ ಜಾರಿಮಾಡಿದ್ದು, ಸರಕಾರಿ ಶಾಲೆಗಳಲ್ಲಿ ಉತ್ತಮ ಸ್ಪಂದನೆ ಕಂಡುಬಂದರೆ, ಖಾಸಗಿ ಶಾಲೆಗಳಲ್ಲಿ ಮಾತ್ರ ಯೋಜನೆ ಜಾರಿಗೆ ತೊಡಕುಂಟಾಗಿದೆ.


ರಾಜ್ಯದಲ್ಲಿ 2015ರಿಂದ ಈವರೆಗೆ 1.6 ಕೋಟಿ ಮಕ್ಕಳಿಗೆ ಲಸಿಕೆ ನೀಡಲಾಗಿದ್ದು, ಅವರ ಪೈಕಿ ತೊಂದರೆಗೊಳಗಾಗಿದ್ದ ಶೇ. 49 ಮಕ್ಕಳು ಕೂಡ ಇದ್ದು, ಸಮಸ್ಯೆ ನಿವಾರಣೆಯಾಗಿದೆ ಎನ್ನಲಾಗಿದೆ.

ಆದರೆ ಲಸಿಕೆ ಯೋಜನೆಗೆ ನಗರದಲ್ಲಿನ ವಿವಿಧ ಶಾಲೆಗಳಲ್ಲಿ ಸಕಾರಾತ್ಮಕ ಸ್ಪಂದನೆ ಬಂದಿಲ್ಲ. ಅಲ್ಲದೆ ಖಾಸಗಿ ಶಾಲೆಗಳಲ್ಲಿ ಲಸಿಕೆ ಕಾರ್ಯಕ್ರಮಕ್ಕೆ ಮಕ್ಕಳ ಪಾಲಕರು ಕೂಡ ವಿರೋಧ ವ್ಯಕ್ತಪಡಿಸಿದ್ದರು. ಸರಕಾರದ ಯೋಜನೆ ಮೇಲೆ ನಂಬಿಕೆಯಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರಿಂದ ಯೋಜನೆ ಪೂರ್ಣ ಜಾರಿ ಸಾಧ್ಯವಾಗಿಲ್ಲ ಎಂದು ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ