ಆ್ಯಪ್ನಗರ

ಕೆಪಿಸಿಸಿ ನೋಟಿಸ್‌ಗೆ ಸೊಪ್ಪು ಹಾಕದ ರಾಜಣ್ಣ

ಪಕ್ಷವಿರೋಧಿ ಚಟುವಟಿಕೆ ನಡೆಸಿಲ್ಲವೆಂದು ಸಮರ್ಥಿಸಿಕೊಂಡಿರುವ ಕಾಂಗ್ರೆಸ್‌ನ ಮಾಜಿ ಶಾಸಕ ಕೆ.ಎನ್‌. ರಾಜಣ್ಣ, ಪಕ್ಷದ ಕಾರ್ಯಕರ್ತರಲ್ಲಿ ವಿಶ್ವಾಸ ತುಂಬುವ ದೃಷ್ಟಿಯಿಂದ ಹೇಳಿಕೆ ನೀಡಲಾಗಿತ್ತು ಎಂದಿದ್ದಾರೆ.

Vijaya Karnataka 31 Jul 2018, 8:09 am
ಬೆಂಗಳೂರು : ಪಕ್ಷವಿರೋಧಿ ಚಟುವಟಿಕೆ ನಡೆಸಿಲ್ಲವೆಂದು ಸಮರ್ಥಿಸಿಕೊಂಡಿರುವ ಕಾಂಗ್ರೆಸ್‌ನ ಮಾಜಿ ಶಾಸಕ ಕೆ.ಎನ್‌. ರಾಜಣ್ಣ, ಪಕ್ಷದ ಕಾರ್ಯಕರ್ತರಲ್ಲಿ ವಿಶ್ವಾಸ ತುಂಬುವ ದೃಷ್ಟಿಯಿಂದ ಹೇಳಿಕೆ ನೀಡಲಾಗಿತ್ತು ಎಂದಿದ್ದಾರೆ.
Vijaya Karnataka Web knrajanna


ಮೈತ್ರಿ ಸರಕಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರಿಂದ ರಾಜಣ್ಣ ಹಾಗೂ ಮಾಜಿ ಸ್ಪೀಕರ್‌ ಕೆ.ಬಿ. ಕೋಳಿವಾಡ ಅವರಿಗೆ ಕೆಪಿಸಿಸಿ ನೋಟಿಸ್‌ ಜಾರಿ ಮಾಡಿತ್ತು. ಈ ನೋಟಿಸ್‌ ಜಾರಿಯಾದ ಬೆನ್ನಿಗೇ ಪ್ರತಿಕ್ರಿಯಿಸಿದ್ದ ಕೋಳಿವಾಡ, ತಮ್ಮ ವರ್ತನೆಯನ್ನು ಸಮರ್ಥಿಸಿಕೊಂಡಿದ್ದರು.

ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ರಾಜಣ್ಣ, ''ನೋಟಿಸ್‌ ಕೊಟ್ಟಾಕ್ಷಣ ಆಕಾಶ ಬಿದ್ದು ಹೋಗುವುದಿಲ್ಲ. ಇದಕ್ಕೆ ಉತ್ತರಿಸಲು ಸಮಯವಿದೆ. ತಕ್ಕ ಉತ್ತರವನ್ನೂ ನೀಡಲಾಗುವುದು. ಅಷ್ಟಕ್ಕೂ ಪಕ್ಷದ ಹಿತದೃಷ್ಟಿಯಿಂದಲೇ ನಾನು ಹೇಳಿಕೆ ನೀಡಿದ್ದೆ. ಕಾರ್ಯಕರ್ತರಲ್ಲಿ ವಿಶ್ವಾಸ ತುಂಬುವ ಕೆಲಸವಾಗದಿದ್ದರೆ ಮುಂದಿನ ಚುನಾವಣೆಯಲ್ಲಿ ಹಾನಿಯಾಗುತ್ತದೆ ಎಂಬ ಅರ್ಥದಲ್ಲಿ ಮಾತನಾಡಿದ್ದೆ. ದಿನೇಶ್‌ ಗುಂಡೂರಾವ್‌ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮುನ್ನಡೆಸುತ್ತಿದ್ದಾರೆ. ಹಿರಿಯರು ಅವರಿಗೆ ಮಾರ್ಗದರ್ಶನ ಮಾಡಬೇಕಿದೆ,'' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ