ಆ್ಯಪ್ನಗರ

ಗಣರಾಜ್ಯೋತ್ಸವಕ್ಕೆ ಮಹಾತ್ಮ ಗಾಂಧೀಜಿ, ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಸ್ತಬ್ಧಚಿತ್ರ

ಅಧಿವೇಶನದಲ್ಲಿ ಕನ್ನಡ ನಾಡು ಮತ್ತು ಕನ್ನಡ ಭಾಷೆಯ ಇತಿಹಾಸ ಮತ್ತು ಸಂಸ್ಕೃತಿ ಬಿಂಬಿಸುವ ಕಾರ್ಯ ಸಹ ನಡೆಯಿತು. ಇದರ ಅಂಗವಾಗಿ, ಹುಯಿಲುಗೋಳ ನಾರಾಯಣರಾವ್‌ ಅವರ 'ಉದಯವಾಗಲಿ ಚೆಲುವ ಕನ್ನಡ ನಾಡು' ಗೀತೆಯನ್ನು ಹಾಡಲಾಗಿತ್ತು.

Vijaya Karnataka Web 23 Jan 2019, 10:30 pm
ಬೆಂಗಳೂರು : ಹೊಸದಿಲ್ಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಈ ಬಾರಿ ಕರ್ನಾಟಕದ ವತಿಯಿಂದ 'ಮಹಾತ್ಮ ಗಾಂಧೀಜಿ-ಬೆಳಗಾವಿ ಕಾಂಗ್ರೆಸ್‌ ಅಧಿವೇಶನ' ವಿಷಯಾಧಾರಿತ ಸ್ತಬ್ಧಚಿತ್ರ ಸಾಗಲಿದೆ.
Vijaya Karnataka Web ರಾಜ್ಯದ ಸ್ತಬ್ಧ ಚಿತ್ರ
ರಾಜ್ಯದ ಸ್ತಬ್ಧ ಚಿತ್ರ


ಮಹಾತ್ಮ ಗಾಂಧಿ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಈ ಸ್ತಬ್ಧಚಿತ್ರ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪ್ರದರ್ಶಿಸಲಾಗುತ್ತದೆ. 1924ರ ಡಿ.26 ಮತ್ತು 27ರಂದು ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನ ಒಂದು ಐತಿಹಾಸಿಕ ಘಟನೆಯಾಗಿದೆ.

ಜತೆಗೆ, ಜವಾಹರಲಾಲ್‌ ನೆಹರೂ, ಸರೋಜಿನಿ ನಾಯ್ಡು, ವಲ್ಲಭಾಬಾಯಿ ಪಟೇಲ್‌ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು. ಅಧಿವೇಶನದಲ್ಲಿ ಕನ್ನಡ ನಾಡು ಮತ್ತು ಕನ್ನಡ ಭಾಷೆಯ ಇತಿಹಾಸ ಮತ್ತು ಸಂಸ್ಕೃತಿ ಬಿಂಬಿಸುವ ಕಾರ್ಯ ಸಹ ನಡೆಯಿತು. ಇದರ ಅಂಗವಾಗಿ, ಹುಯಿಲುಗೋಳ ನಾರಾಯಣರಾವ್‌ ಅವರ 'ಉದಯವಾಗಲಿ ಚೆಲುವ ಕನ್ನಡ ನಾಡು' ಗೀತೆಯನ್ನು ಹಾಡಲಾಗಿತ್ತು.

ಹಾಗಾಗಿ, ಈ ಬಾರಿ ಕಲಾವಿದ ಶಶಿಧರ ಅಡಪ ಅವರು ವಿನ್ಯಾಸಗೊಳಿಸಿರುವ ಮಹಾತ್ಮ ಗಾಂಧೀಜಿ-ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಎಂಬ ವಿಷಯಾಧಾರಿತ ಸ್ತಬ್ಧಚಿತ್ರ ರಾಜ್ಯವನ್ನು ಪ್ರತಿನಿಧಿಸಲಿದೆ. ಸಂಗೀತ ನಿರ್ದೇಶಕ ಪ್ರವೀಣ್‌ ಡಿ.ರಾವ್‌ ಅವರು 'ಉದಯವಾಗಲಿ ಚೆಲುವ ಕನ್ನಡ ನಾಡು' ಗೀತೆಗೆ ಸ್ವರ ಸಂಯೋಜಿಸಿದ್ದಾರೆ. ಪಥಸಂಚಲನದ ವೇಳೆ ಈ ಗೀತೆಯನ್ನು ಸಹ ಪ್ರಸಾರ ಮಾಡಲಾಗುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ