ಆ್ಯಪ್ನಗರ

ಕೆಪಿಸಿಸಿ ನೋಟಿಸ್‌ಗೆ ಕೋಳಿವಾಡ, ರಾಜಣ್ಣ ಖಡಕ್‌ ಉತ್ತರ

ಶಿಸ್ತು ಕ್ರಮದ ಎಚ್ಚರಿಕೆ ನೀಡಿ ಕೆಪಿಸಿಸಿ ಜಾರಿ ಮಾಡಿದ್ದ ನೋಟಿಸ್‌ಗೆ ಮಾಜಿ ಸ್ಪೀಕರ್‌ ಕೆ.ಬಿ. ಕೋಳಿವಾಡ ಹಾಗೂ ಮಾಜಿ ಶಾಸಕ ಕೆ.ಎನ್‌. ರಾಜಣ್ಣ ಖಾರವಾದ ಉತ್ತರ ನೀಡಿದ್ದಾರೆ.

Vijaya Karnataka Web 4 Aug 2018, 10:33 am
ಬೆಂಗಳೂರು: ಶಿಸ್ತು ಕ್ರಮದ ಎಚ್ಚರಿಕೆ ನೀಡಿ ಕೆಪಿಸಿಸಿ ಜಾರಿ ಮಾಡಿದ್ದ ನೋಟಿಸ್‌ಗೆ ಮಾಜಿ ಸ್ಪೀಕರ್‌ ಕೆ.ಬಿ. ಕೋಳಿವಾಡ ಹಾಗೂ ಮಾಜಿ ಶಾಸಕ ಕೆ.ಎನ್‌. ರಾಜಣ್ಣ ಖಾರವಾದ ಉತ್ತರ ನೀಡಿದ್ದಾರೆ.
Vijaya Karnataka Web koliwad

ಮೈತ್ರಿ ಸರಕಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರಿಂದ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಈ ನಾಯಕರಿಗೆ ನೋಟಿಸ್‌ ಕೊಟ್ಟಿದ್ದರು.
ಇದಕ್ಕೆ ಉತ್ತರಿಸಿರುವ ಕೋಳಿವಾಡ, ರಾಜಣ್ಣ ‘‘ನಾವು ಯಾವುದೇ ತಪ್ಪು ಮಾಡಿಲ್ಲ. ಪಕ್ಷ ವಿರೋಧಿ ಚಟುವಟಿಕೆಯನ್ನೂ ನಡೆಸಿಲ್ಲ. ಪಕ್ಷದ ಹಿತದೃಷ್ಟಿಯಿಂದಲೇ ಸಲಹೆ, ಸೂಚನೆ ಕೊಡಲಾಗಿದೆ. ಲೋಕಸಭೆ ಚುನಾವಣೆಗೆ ಯಾವ ನಿಲುವು ಕೈಗೊಂಡರೆ ಸೂಕ್ತವೆಂಬ ಅಭಿಪ್ರಾಯ ಹಂಚಿಕೊಳ್ಳಲಾಗಿದೆ. ಇದನ್ನು ಪಕ್ಷ ವಿರೋಧಿ ಚಟುವಟಿಕೆಯೆಂದು ಭಾವಿಸಿದ್ದಕ್ಕೆ ಅಚ್ಚರಿಯಾಗಿದೆ ಎಂದು ವಿವರಿಸಿದ್ದಾರೆ ಎನ್ನಲಾಗಿದೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ