ಆ್ಯಪ್ನಗರ

ಕೆಪಿಸಿಸಿ ಕಚೇರಿಯಲ್ಲಿ ಡಿಸಿಸಿ ಅಧ್ಯಕ್ಷರ ಸಭೆ, ಉಪ ಚುನಾವಣೆ ಸಿದ್ಧತೆಗೆ ಸೂಚನೆ

ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರುಗಳಿಗೆ ಕೆಪಿಸಿಸಿಯಿಂದ ಸೂಚನೆ ನೀಡಲಾಗಿದೆ.

Vijaya Karnataka 8 Aug 2019, 5:00 am
ಬೆಂಗಳೂರು : ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರುಗಳಿಗೆ ಕೆಪಿಸಿಸಿಯಿಂದ ಸೂಚನೆ ನೀಡಲಾಗಿದೆ.
Vijaya Karnataka Web congress-flag


ಪಕ್ಷದ ಕಚೇರಿಯಲ್ಲಿ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಈ ಸಂಬಂಧ ಬುಧವಾರ ಸಭೆ ನಡೆಸಿದರು. ಪ್ರವಾಹ ಪೀಡಿತ ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಜಿಲ್ಲೆಗಳ ಕಾಂಗ್ರೆಸ್‌ ಅಧ್ಯಕ್ಷರನ್ನು ಹೊರತು ಪಡಿಸಿ ಇತರರು ಭಾಗಿಯಾಗಿದ್ದರು. ಪಕ್ಷದ್ರೋಹಿಗಳಿಗೆ ಪಾಠ ಕಲಿಸಬೇಕು ಎಂಬ ಆಗ್ರಹವೂ ಸಭೆಯಲ್ಲಿ ವ್ಯಕ್ತವಾಯಿತು. ಹೊಸ ಪದಾಧಿಕಾರಿಗಳನ್ನು ತಕ್ಷಣವೇ ನೇಮಿಸಬೇಕು ಎಂಬ ಒತ್ತಾಯವೂ ಕೇಳಿಬಂತು.

ಪಕ್ಷಕ್ಕೆ ಶಕ್ತಿ ತುಂಬುವುದು ಸೇರಿದಂತೆ ಉಪ ಚುನಾವಣೆ ಬಗ್ಗೆಯೂ ಚರ್ಚಿಸಲಾಯಿತು ಎಂದು ಸಭೆ ಬಳಿಕ ಮಾತನಾಡಿದ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಅನರ್ಹರಿಗೆ ಸಂತ್ರಸ್ತರ ನೆರವಿಗೆ ಧಾವಿಸಲು ಖರ್ಗೆ ಸಲಹೆ
ಬೆಂಗಳೂರು : ಮಾನವೀಯ ನೆಲೆಯಲ್ಲಿ ಅನರ್ಹ ಶಾಸಕರೂ ತಮ್ಮ ಕ್ಷೇತ್ರಗಳ ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಸಾಮಾಜಿಕ ಕಾರ್ಯಕರ್ತರಾಗಿ ಕೆಲಸ ಮಾಡಬಹುದು ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ''ಸರಕಾರವೂ ತುರ್ತು ಪರಿಹಾರ ಒದಗಿಸಲು ಹೆಚ್ಚಿನ ಗಮನ ಹರಿಸಬೇಕು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ