ಆ್ಯಪ್ನಗರ

ಉಪಚುನಾವಣೆ ಸೋಲಿಗೆ ನೈತಿಕ ಹೊಣೆ - ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ

ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ ಮುಂದುವರಿಯುತ್ತಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಸಲ್ಲಿಸಿದ್ದಾರೆ.

Vijaya Karnataka Web 9 Dec 2019, 5:14 pm
ಬೆಂಗಳೂರು: ಉಪಚುನಾವಣೆ ಸೋಲಿಗೆ ನೈತಿಕ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ದಿನೇಶ್ ಗುಂಡೂರಾವ್ ಕೂಡಾ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆಯನ್ನು ಪ್ರಕಟಿಸಿದ್ದಾರೆ.
Vijaya Karnataka Web kpcc president dinesh gundu rao resign
ಉಪಚುನಾವಣೆ ಸೋಲಿಗೆ ನೈತಿಕ ಹೊಣೆ - ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ


ಉಪಚುನಾವಣೆಯ ಸೋಲಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದರೂ ಪಕ್ಷಕ್ಕಾಗಿ ಶಕ್ತಿ ಮೀರಿ ಕೆಲಸ ಮಾಡುತ್ತೇವೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು. ಉಪಚುನಾವಣೆಲ್ಲಿ ಪಕ್ಷದ ಗೆಲುವಿಗೆ ಸಾಕಷ್ಟು ಪ್ರುಯತ್ನ ಪಟ್ಟಿದ್ದೆ. ಆದರೆ ಅದು ಸಾಧ್ಯವಾಗಲಿಲ್ಲ. ಈ ಕಾರಣಕ್ಕಾಗಿ ರಾಜೀನಾಮೆ ಸಲ್ಲಿಸುತ್ತೇನೆ ಎಂದರು.


ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಶಾಸಕಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಈಗಾಗಲೇ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ದಿನೇಶ್ ಗುಂಡೂರಾವ್ ಕೂಡಾ ಅವರ ದಾರಿಯನ್ನೇ ಅನುಸರಿಸಿದ್ದಾರೆ.

ಬೈ ಎಲೆಕ್ಷನ್ ಸೋಲಿಗೆ ತಲೆದಂಡ! ಸಿಎಲ್‌ಪಿ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ರಾಜೀನಾಮೆಗೆ ಉಪಚುನಾವಣಾ ಸೋಲಿಗೆ ನೈತಿಕ ಹೊಣೆ ಕಾರಣ ಎಂದು ಹೇಳುತ್ತಿದ್ದರು ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಉಪಚುನಾವಣಾ ಸಂದರ್ಭದಲ್ಲಿ ಟಿಕೆಟ್ ನೀಡುವ ವಿಚಾರವಾಗಿಯೂ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರ ವಿರುದ್ಧ ಪಕ್ಷದ ಹಿರಿಯ ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು.

ಉಪಚುನಾವಣಾ ಪ್ರಚಾರಕ್ಕೂ ಹಿರಿಯ ಮುಖಂಡರು ಹೆಚ್ಚಾಗಿ ಕಾಣಿಸಿಕೊಂಡಿರಲಿಲ್ಲ. ಖರ್ಗೆ ಮಹಾರಾಷ್ಟ್ರದ ರಾಜಕೀಯ ಚಟುವಟಿಕೆಗಳಲ್ಲಿ ಬ್ಯುಸಿಯಾಗಿದ್ದ ಕಾರಣ ನೀಡಿ ಉಪಚುನಾವಣಾ ಪ್ರಚಾರದಲ್ಲಿ ಕಾಣಿಸಿಕೊಂಡಿರಲಿಲ್ಲ. ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಕೂಡಾ ಹೆಚ್ಚಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿರಲಿಲ್ಲ.

ಆದರೆ ಸಿದ್ದರಾಮಯ್ಯ ಏಕಾಂಗಿಯಾಗಿ ಚುನಾವಣಾ ಅಖಾಡದಲ್ಲಿ ಪ್ರಚಾರ ನಡೆಸಿದ್ದರು. ಪ್ರಚಾರ ಸಂಧರ್ಭದಲ್ಲಿ ಆತ್ಮವಿಶ್ವಾಸದಲ್ಲಿದ್ದರೂ ಫಲಿತಾಂಶ ಭಿನ್ನವಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ