ಆ್ಯಪ್ನಗರ

ಪದಗ್ರಹಣ ಕಾರ್ಯಕ್ರಮಕ್ಕೆ ಸಿಕ್ತು ಅನುಮತಿ, ಡಿಕೆಶಿ ಮುಂದಿನ ನಡೆ ಏನು?

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆದರೆ ಜೂನ್ 14 ರಂದು ನಿಗದಿಯಾಗಿದ್ದ ಕಾರ್ಯಕ್ರಮ ಅದೇ ದಿನ ನಡೆಯುತ್ತಾ ಎಂಬುವುದು ಇನ್ನೂ ನಿರ್ಧಾರವಾಗಿಲ್ಲ.

Vijaya Karnataka Web 11 Jun 2020, 12:40 pm
ಬೆಂಗಳೂರು: ಜೂನ್ 14 ರಂದು ನಡೆಯಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮಕ್ಕೆ ಕೊನೆಗೂ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಸಾಕಷ್ಟು ರಾಜಕೀಯ ಚರ್ಚೆಗೆ ಗ್ರಾಸವಾದ ಈ ಕಾರ್ಯಕ್ರಮ ಇದೀಗ ನಿಗದಿತ ದಿನದಂದೇ ನಡೆಯುತ್ತಾ ಎಂಬುವುದು ಇನ್ನೂ ನಿರ್ಧಾರವಾಗಿಲ್ಲ. ಕಾರ್ಯಕ್ರಮಕ್ಕೆ ಅನುಮತಿ ನೀಡದಿದ್ದ ಸರ್ಕಾರದ ನಡೆಯನ್ನು ಡಿಕೆಶಿ ಖಂಡಿಸಿದ್ದರು. ಆದರೆ ಇದೀಗ ಅವರ ನಡೆ ಏನು ಎಂಬವುದು ಕುತೂಹಲ ಕೆರಳಿಸಿದೆ.
Vijaya Karnataka Web dk 2


ಜೂನ್ 14 ರಂದು ನಡೆಯಬೇಕಾಗಿದ್ದ ಕಾರ್ಯಕ್ರಮಕ್ಕೆ ಎಲ್ಲಾ ತಯಾರಿಗಳನ್ನು ಮಾಡಲಾಗಿತ್ತು. ಈ ಸಂಬಂಧ ಅನುಮತಿ ಪಡೆಯಲು ಸರ್ಕಾರಕ್ಕೆ ಪತ್ರವನ್ನು ಬರೆಯಲಾಗಿತ್ತು. ಆದರೆ ಕೊನೆಯಗಳಿಗೆಯಲ್ಲಿ ಅನುಮತಿ ನಿರಾಕರಣೆ ಮಾಡಲಾಗಿತ್ತು. ಸರ್ಕಾರದ ನಡೆ ಆಡಳಿತ ಹಾಗೂ ವಿರೋಧ ಪಕ್ಷದ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು.

ಡಿಕೆಶಿ ಪದಗ್ರಹಣ ಕಾರ್ಯಕ್ರಮಕ್ಕೆ ಬಿಎಸ್‌ವೈ ಅನುಮತಿ, ಆದ್ರೆ ಕೆಲವು ಷರತ್ತುಗಳು ಅನ್ವಯ!

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಗುರುವಾರ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಡಿಕೆಶಿ ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಾರೆ. ಆದರೆ ಹೆಚ್ಚಿನ ಸಂಖ್ಯೆಯ ಜನರು ಸೇರಬಾರದು ಎಂದು ಷರತ್ತು ವಿಧಿಸಿದ್ದಾರೆ.

ರಾಜ್ಯ ಸರ್ಕಾರದ ಅನುಮತಿ ಬಳಿಕವಷ್ಟೇ ಪದಗ್ರಹಣ ಕಾರ್ಯಕ್ರಮ, ಡಿಕೆಶಿ ಸ್ಪಷ್ಟನೆ

ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಬುಧವಾರ ಕಾರ್ಯಕ್ರಮದ ದಿನಾಂಕವನ್ನು ಮುಂದೂಡಲಾಗಿತ್ತು. ಇದೀಗ ಅದೇ ದಿನ ಕಾರ್ಯಕ್ರಮ ನಡೆಯುತ್ತಾ ಎಂಬುವುದು ನಿರ್ಧಾರವಾಗಿಲ್ಲ. ಈ ನಿಟ್ಟಿನಲ್ಲಿ ಗುರುವಾರ ಸಭೆಯನ್ನು ನಡೆಸುವ ಸಾಧ್ಯತೆ ಇದೆ. ಸಭೆಯಲ್ಲಿ ಕಾರ್ಯಕ್ರಮದ ದಿನಾಂಕ ಪ್ರಕಟಗೊಳ್ಳಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ