ಆ್ಯಪ್ನಗರ

ಜುಲೈ 2 ಕ್ಕೆ ಡಿಕೆಶಿ ಪದಗ್ರಹಣ ಫಿಕ್ಸ್? ಹೋಮ ನಡೆದ ಸ್ಥಳದಲ್ಲೇ ಪ್ರತಿಜ್ಞಾವಿಧಿ ಸ್ವೀಕಾರ!

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಜುಲೈ 2 ಕ್ಕೆ ಅಧಿಕಾರ ಸ್ವೀಕಾರ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ವಿಶೇಷ ಪೂಜೆ ಹಾಗೂ ಹೋಮ ಕೈಗೊಳ್ಳಲಾಗಿದೆ. ಇದೇ ಸ್ಥಳದಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡುತ್ತಾರೆ ಎನ್ನಲಾಗಿದೆ.

Vijaya Karnataka Web 14 Jun 2020, 12:19 pm
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕಾರ ಕಾರ್ಯಕ್ರಮ ಜುಲೈ 2 ಕ್ಕೆ ಬಹುತೇಕ ಫಿಕ್ಸ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜೂನ್‌ 14 ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿತ್ತು. ಒಟ್ಟು ಮೂರು ಬಾರಿ ಕಾರ್ಯಕ್ರಮ ಮಂದೂಡಲ್ಪಟ್ಟಿದ್ದು ಇದೀಗ ಜುಲೈ 2 ರಂದು ನಡೆಯಲು ತೀರ್ಮಾನ ಮಾಡಲಾಗಿದೆ ಎಂಬ ಮಾಹಿತಿ ಇದೆ.
Vijaya Karnataka Web dk pooje


ಜೂನ್ 29 ರಂದು ವಿಧಾನಪರಿಷತ್ ಚುನಾವಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಪಕ್ಷದ ಅಭ್ಯರ್ಥಿಯ ಆಯ್ಕೆ ಇನ್ನು ಅಂತಿಮಗೊಂಡಿಲ್ಲ. ಸಾಕಷ್ಟು ಜನರು ಲಾಬಿ ನಡೆಸುತ್ತಿದ್ದು ಅಭ್ಯರ್ಥಿ ಆಯ್ಕೆಯೂ ಜಟಿಲಗೊಂಡಿದೆ. ಪರಿಣಾಮ ಪ್ರಮುಖ ಮುಖಂಡರು ಸಭೆ ನಡೆಸಿ ಅಭ್ಯರ್ಥಿ ಆಯ್ಕೆ ಮಾಡಬೇಕಾಗಿದೆ.

ಕೆಪಿಸಿಸಿ ಕಟ್ಟಡದಲ್ಲಿ ವಿಶೇಷ ಪೂಜೆ, ಮಂಗಳಮುಖಿಯರಿಗೆ ಕಾಣಿಕೆ ಕೊಟ್ಟು ನಾಣ್ಯ ಪಡೆದುಕೊಂಡ ಡಿಕೆಶಿ

ಈ ಗೊಂದಲ ಬಗೆಹರಿದ ಬೆನ್ನಲ್ಲೇ ಕಾರ್ಯಮ್ರಮವನ್ನು ಹಮ್ಮಿಕೊಳ್ಳುವುದು ಡಿಕೆಶಿ ಯೋಜನೆಯಾಗಿದೆ. ಸದ್ಯ ತರಾತುರಿಯಲ್ಲಿ ಕಾರ್ಯಕ್ರಮ ನಡೆಸುವುದರಿಂದ ಸಮಸ್ಯೆಯಾಗಲಿರುವುದರಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿ ಇದೆ.

ಕಾರ್ಯಕ್ರಮಕ್ಕೆ ಅಡೆತಡೆ ಉಂಟಾದ ಹಿನ್ನೆಲೆಯಲ್ಲಿ ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ವಿಶೇಷ ಪೂಜೆ ನಡೆಸಲಾಗಿದೆ. ಗಣಪತಿ ಹೋಮ , ಪುಣ್ಯ ಹೋಮ, ವಾಸ್ತು ಹೋಮಾ, ರಕ್ಷೋಜ್ಞ ಹೋಮ, ಭೂ ವರಹ ಹೋಮ, ನವಗ್ರಹ ಹೋಮ, ಮೃತ್ಯುಂಜಯ ಹೋಮ,ಅಷ್ಟ ಲಕ್ಷ್ಮೀ ಹೋಮ ಹಾಗೂ ಗಾಯಿತ್ರಿ ಹೋಮ, ಪೂರ್ಣಾಹುತಿ, ಮಹಾಮಂಗಳಾರತಿಗಳನ್ನು ನಡೆಸಲಾಗಿದೆ.

ಡಿಕೆಶಿ ಪದಗ್ರಹಣ ಕಾರ್ಯಕ್ರಮಕ್ಕೆ ಬಿಎಸ್‌ವೈ ಅನುಮತಿ, ಆದ್ರೆ ಕೆಲವು ಷರತ್ತುಗಳು ಅನ್ವಯ!

ದೋಷ ಪರಿಹಾರ ಮಾಡುವ ನಿಟ್ಟಿನಲ್ಲಿ ಈ ವಿಶೇಷ ಪೂಜೆ ಹಾಗೂ ಹೋಮಗಳನ್ನು ನಡೆಸಲಾಗಿದೆ. ಹೋಮ ನಡೆದ ಸ್ಥಳದಲ್ಲೇ ಜುಲೈ 2 ರಂದು ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ