ಆ್ಯಪ್ನಗರ

Dk Shivakumar : ರಾಜ್ಯದಲ್ಲಿ ರೋಗಿಗಳಿಗೆ, ಕಾರ್ಮಿಕರಿಗೆ, ರೈತರಿಗಿಲ್ಲ ರಕ್ಷಣೆ: ಸರ್ಕಾರದ ವಿರುದ್ಧ ಡಿಕೆಶಿ ವಾಗ್ದಾಳಿ

Dk Shivakumar ರಾಜ್ಯದಲ್ಲಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಮಾತ್ರವಲ್ಲ ಕಾರ್ಮಿಕರಿಗೆ, ರೈತರಿಗೂ ರಕ್ಷಣೆ ಇಲ್ಲದಂತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು ಈ ಬಗ್ಗೆ ಹೇಳಿದ್ದಿಷ್ಟು.

Vijaya Karnataka Web 26 Sep 2022, 11:55 am

ಹೈಲೈಟ್ಸ್‌:

  • ರಾಜ್ಯದಲ್ಲಿ ರೋಗಿಗಳಿಗೆ, ಕಾರ್ಮಿಕರಿಗೆ, ರೈತರಿಗಿಲ್ಲ ರಕ್ಷಣೆ
  • ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಾಗ್ದಾಳಿ
  • ಆಡಳಿತ ನಡೆಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web DK Shivakumar
ಬೆಂಗಳೂರು: ರಾಜ್ಯದಲ್ಲಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ರಕ್ಷಣೆ ಸಿಗುತ್ತಿಲ್ಲ. ಅಷ್ಟೇ ಏಕೆ, ಕಾರ್ಮಿಕರಿಗೆ, ರೈತರಿಗೂ ಈ ಸರ್ಕಾರದಿಂದ ರಕ್ಷಣೆ ಸಿಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಭಾನುವಾರ ಆಂಬುಲೆನ್ಸ್ 108 ತುರ್ತು ಸೇವೆ ಸ್ಥಗಿತ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ರೋಗಿಗಳ ರಕ್ಷಣೆ ಮಾಡುತಿಲ್ಲ, ರೈತರ ರಕ್ಷಣೆ ಇಲ್ಲ, ಕಾರ್ಮಿಕರ ರಕ್ಷಣೆ ಕೂಡ ಮಾಡ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್‌ ಅಬ್ಬರ: ಕೌಂಟರ್‌ ನೀಡಲು ಬಿಜೆಪಿ ವಿಫಲ
ರಾಜ್ಯದಲ್ಲಿ ಸರ್ಕಾರವೇ ಇಲ್ಲ ಇದ್ದರೂ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಾನೂನು ಸಚಿವರೇ ಹೇಳಿದ್ದಾರೆ ನಾವು ಸರ್ಕಾರ ನಡೆಸುತ್ತಿಲ್ಲ ಬದಲಾಗಿ ಮ್ಯಾನೇಜ್‌ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು. ಸಚಿವರೇ ಹೀಗೆ ಹೇಳಿದ ಮೇಲೆ ಆಂಬುಲೆನ್ಸ್‌ ದ್ದು ಏನು ಕಥೆ ಬಿಡಿ ಎಂದು ಟೀಕಿಸಿದರು.

ಭಾನುವಾರ ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ‘108 ಆಂಬುಲೆನ್ಸ್’ ಸೇವೆ ಸ್ಥಗಿತಗೊಂಡಿತ್ತು. ಸಕಾಲಕ್ಕೆ ಆಂಬುಲೆನ್ಸ್ ಸಿಗದೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಐಡಿಹಳ್ಳಿಯ ಜಯಮ್ಮ(65) ಎಂಬುವವರು ಮೃತಪಟ್ಟಿದ್ದಾರೆ. ಏಕಾಏಕಿ ಉದ್ಭವಿಸಿರುವ ಈ ಪರಿಸ್ಥಿತಿಗೆ ತಾಂತ್ರಿಕ ಸಮಸ್ಯೆಯೇ ಕಾರಣ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಹೇಳಿದ್ದಾರೆ. ಸಾಫ್ಟ್ವೇರ್ನ ಮದರ್ಬೋರ್ಡ್ ಹಾಳಾಗಿದ್ದು, ಅದರ ಬಿಡಿಭಾಗ ಎಲ್ಲಿಯೂ ಸಿಗುತ್ತಿಲ್ಲ ಎಂದು ತಿಳಿಸಿದ್ದರು.

ಆಂಬುಲೆನ್ಸ್ ಸೇವೆ ರದ್ದಾಗಿರುವ ಕುರಿತಾಗಿ ಕಾಂಗ್ರೆಸ್ ಸರಣಿ ಟ್ವೀಟ್‌ಗಳನ್ನು ಮಾಡುವ ಮೂಲಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಡಾ. ಕೆ. ಸುಧಾಕರ್ ಅವರೇ, ನಿಮ್ಮ ದುರಾಡಳಿತದಿಂದ ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿ ಪರಿವರ್ತನೆಯಾಗಿದೆ. ಜನ ಮತ್ತೊಮ್ಮೆ ಹಾದಿಬೀದಿಯಲ್ಲಿ ಸಾಯಲಿ ಎಂದು ಬಯಸುತ್ತಿರುವಿರಾ?ಎಂದು ಪ್ರಶ್ನಿಸಿತ್ತು.

ಇನ್ನು ಇದೇ ಸಂದರ್ಭದಲ್ಲಿ ಪೇ ಸಿಎಂ ಅಭಿಯಾನಕ್ಕೆ ಕೌಂಟರ್ ಆಗಿ ಕಾಂಗ್ರೆಸ್ ಲಿಂಗಾಯತ ಸಮುದಾಯದ ಮುಖ್ಯಮಂತ್ರಿಯನ್ನು ಟಾರ್ಗೆಟ್ ಮಾಡುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ ಲಿಂಗಾಯತ ಜಾತಿ ಮೇಲೆ ಸಿಎಂ ಆಗಿದ್ದಾರಾ..? ಸಂವಿಧಾನದ ಪ್ರಕಾರ ಅವರು ಸಿಎಂ ಆಗಿದ್ದಾರೆ. ನಾವು ಸರ್ಕಾರಕ್ಕೆ ಟಾರ್ಗೆಟ್ ಮಾಡ್ತಿದೇವೆ .ಸಿಎಂ ಆದವರು ಸರ್ಕಾರ ಮುಖ್ಯಸ್ಥರು ಎಂದು ತಿರುಗೇಟು ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ