ಆ್ಯಪ್ನಗರ

ಆರ್‌.ಆರ್‌ ನಗರ ಬೈಎಲೆಕ್ಷನ್: ಪ್ಯಾರಾ ಮಿಲಿಟರಿ ರಕ್ಷಣೆ ಬೇಡಿಕೆ ಬಗ್ಗೆ ಡಿಕೆಶಿ ಪ್ರತಿಕ್ರಿಯೆ ಏನು?

ಆರ್‌.ಆರ್‌ ನಗರ ಬೈಎಲೆಕ್ಷನ್‌ನಲ್ಲಿ ಪ್ಯಾರಾ ಮಿಲಿಟರಿ ರಕ್ಷಣೆ ಬೇಡಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಬೆಂಗಳೂರಿನಲ್ಲಿ ಗುರುವಾರ ಪ್ರತಿಕ್ರಿಯೆ ನೀಡಿದ್ದಾರೆ. ಅಷ್ಟಕ್ಕೂ ಈ ಬೇಡಿಕೆಯ ಕುರಿತಾಗಿ ಅವರು ಏನಂದ್ರು ಎಂಬ ವಿವರ ಇಲ್ಲಿದೆ.

Vijaya Karnataka Web 22 Oct 2020, 2:52 pm
ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಪ್ಯಾರಾ ಮಿಲಿಟರಿ ರಕ್ಷಣೆ ನೀಡಬೇಕು ಎಂದು ಪತ್ರ ಬರೆಯುವುದಾಗಿ ಮಾಜಿ ಶಾಸಕರು ನೀಡಿರುವ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
Vijaya Karnataka Web dk shivakumar


ಆರ್‌ ಆರ್‌ ನಗರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಬುಧವಾರ ಗಲಾಟೆ ನಡೆದಿತ್ತು. ಬಿಜೆಪಿ ಮುಖಂಡರೊಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಆದರೆ ಈ ಆರೋಪವನ್ನು ಬಿಜೆಪಿ ನಿರಾಕರಣೆ ಮಾಡಿದೆ.

ನಳಿನ್ ಕುಮಾರ್ ಕಟೀಲ್ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿರಲು ನಾಲಾಯಕ್! ಸಿದ್ದರಾಮಯ್ಯ ಕೆಂಡಾಮಂಡಲ

ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದ ಮಾಜಿ ಶಾಸಕರೊಬ್ಬರು, ಆರ್ ಆರ್ ನಗರದಲ್ಲಿ ಮಾರಾಮಾರಿ ರಾಜಕಾರಣ ನಡೆಯುತ್ತಿದೆ. ಹೆಣಗಳು ಬೀಳುತ್ತವೆ ಹೀಗಾಗಿ ಪ್ಯಾರಾ ಮಿಲಿಟರಿ ರಕ್ಷಣೆ ನೀಡಬೇಕು ಎಂದು ಪತ್ರ ಬರೆಯುವುದಾಗಿ ಮಾಜಿ ಶಾಸಕರು ಹೇಳಿಕೆ ನೀಡಿದ್ದರು.

ಇದಕ್ಕೆ ಬೆಂಗಳೂರಿಲ್ಲಿ ಪ್ರತಿಕ್ರಿಯೆ ನೀಡಿದ ಡಿಕೆಶಿ ಅವರು ಮುಂಚೆಯೇ ಈ ಪತ್ರ ಬರೆಯಬೇಕಿತ್ತು. ಈಗ ತಡವಾಗಿದೆ. ಆ ಪತ್ರವನ್ನು ಮುಖ್ಯಮಂತ್ರಿಗಳಿಂದಲೋ ಅಥವಾ ಪಕ್ಷದ ಅಧ್ಯಕ್ಷರಿಂದಲೋ ಬರೆಸಿದ್ದಾರೆ ಉತ್ತಮವಾಗಿರುತ್ತಿತ್ತು ಎಂದಿದ್ದಾರೆ.

ಬಿಎಸ್‌ವೈ, ಸಿದ್ದರಾಮಯ್ಯ ಅವರ ಅದೃಷ್ಟಕ್ಕೆ ಮುಖ್ಯಮಂತ್ರಿಯಾದರು, ನಮ್ಮ ಹಣೆಬರಹ ಇಷ್ಟಿದೆ: ಹೊರಟ್ಟಿ

ಮಾರಾಮಾರಿ ರಾಜಕಾರಣ ಮಾಡುವಂತಹ ಸಂಸ್ಕೃತಿ ಇರುವವರನ್ನು ನಾವು ಬೆಳೆಸಿದೆವಲ್ಲ ಏನು ಮಾಡುವುದು? ಈಗ ಪಶ್ಚಾತ್ತಾಪ ಪಡಬೇಕಾಗಿದೆ. ನಾನು ಯಾರಿಗೂ ಗುರುಗಳಲ್ಲ. ಎಲ್ಲರಿಗೂ ಶಿಷ್ಯರಾಗಿ ಇರುತ್ತೇನೆ. ನಿಮಗೂ ಶಿಷ್ಯನೇ ಎಂದು ವ್ಯಂಗ್ಯವಾಡಿದರು.

ನಾವು ಹತಾಶರಾಗಿದ್ದೇವೆ, ನಮ್ಮನ್ನು ಬೆಂಗಳೂರಿನ ಜನ ಪ್ಯಾಕ್ ಮಾಡಿ ಕಳಿಸುತ್ತಾರೆ ಎಂದು ಹೇಳಿದವರಿಗೆ ಒಳ್ಳೆಯದಾಗಲಿ. ನಾನು ಯಾರಿಗೂ ಏನನ್ನೂ ಹೇಳುವುದಿಲ್ಲ. ಕಾನೂನು ಪಾಲನೆ ಮಾಡಿ, ಜನರ ರಕ್ಷಣೆ ಮಾಡಿ, ಆ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ಕ್ಷೇತ್ರವನ್ನಾಗಿ ಮಾಡಲು ಮಾತ್ರ ನಾವು ಪ್ರಯತ್ನಿಸುತ್ತೇವೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ