ಆ್ಯಪ್ನಗರ

ಕಾಂಗ್ರೆಸ್‌ ಸಿಎಂ ಅಭ್ಯರ್ಥಿ ಯಾರು? ಚುನಾವಣೆ ಬಂದಾಗ ಚರ್ಚೆ ಮಾಡೋಣ ಅಂದ್ರು ಡಿಕೆಶಿ

ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ‌ ಸಿಎಂ ಅಭ್ಯರ್ಥಿ ಯಾರು? ಹೀಗೊಂದು ಚರ್ಚೆ ರಾಜಕೀಯ ವಲಯದಲ್ಲಿ ತೀವ್ರಗೊಂಡಿದೆ. ಶಾಸಕರ ನಾನಾ ಹೇಳಿಕೆಗಳು ಕಾರ್ಯಕರ್ತರಲ್ಲೂ ಗೊಂದಲ ಸೃಷ್ಟಿಸಿದೆ. ಈ ಬಗ್ಗೆ ಡಿಕೆ ಶಿವಕುಮಾರ್ ಏನು ಹೇಳಿದ್ರು?

Vijaya Karnataka Web 25 Oct 2020, 2:02 pm
ಬೆಂಗಳೂರು: ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರವನ್ನು ಚುನಾವಣೆ ಬಂದಾಗ ಚರ್ಚೆ ಮಾಡೋಣ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಅವರು, ನನಗೆ ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇದೆ ಎನ್ನುವ ಮೂಲಕ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದರು.
Vijaya Karnataka Web dk shivakumar


ಸಿಎಂ ಅಭ್ಯರ್ಥಿ ಕುರಿತಾಗಿ ಹೇಳಿಕೆ ನೀಡಿದ್ದ ಶಾಸಕ ಜಮೀರ್‌ ಅಹಮ್ಮದ್ ಖಾನ್ ಹಾಗೂ ಸೌಮ್ಯ ರೆಡ್ಡಿ ವಿರುದ್ಧ ನೋಟಿಸ್‌ ಜಾರಿಗೊಳಿಸುವ ವಿಚಾರವಾಗಿ ಮಾಜಿ ಸ್ಪೀಕರ್‌ ಕೆ.ಬಿ ಕೋಳಿವಾಡ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ನಲ್ಲಿ ಶಿಸ್ತು ಪಾಲನಾ ಸಮಿತಿ ಇದೆ ಎಂದು ನಿಮಗೂ ಗೊತ್ತಾಗಿದೆಯಲ್ಲಾ ಅವರೇ ಕ್ರಮ ಕೈಗೊಳ್ಳಲಿ, ನಾನು ಮಧ್ಯಪ್ರವೇಶ ಮಾಡುವಿದಿಲ್ಲ ಎಂದರು.

ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಚುನಾವಣೆಯೂ ಬಂದಿಲ್ಲ! ಸಿಎಂ ಅಭ್ಯರ್ಥಿ ಯಾರೆಂಬ ಪ್ರಶ್ನೆಗೆ ಸಿದ್ದು ಉತ್ತರ

ನನಗೆ ಸಾಮೂಹಿಕ ನಾಯಕತ್ವದ ಬಗ್ಗೆ ನಂಬಿಕೆ ಇದೆ. ಕಾರ್ಯಕರ್ತರು, ಮುಖಂಡರು ಸೇರಿ ಬಿಜೆಪಿ ಸರ್ಕಾರವನ್ನು ತೆಗೆಯುವಂತಹ ಕೆಲಸ ಮಾಡಿದ ಮೇಲೆ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಯಾರು ಎಂಬ ಬಗ್ಗೆ ನಿರ್ಧಾರ ಮಾಡೋಣ ಎಂದರು.

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಮಳೆಯಿಂದ ವ್ಯಾಪಕ ಹಾನಿ ಉಂಟಾಗುತ್ತಿದೆ. ಕರ್ನಾಟಕ ಸರ್ಕಾರದಲ್ಲಿ ಸಚಿವರು ಸೇರಿದಂತೆ ಯಾರೂ ಯಾರ ನಿಯಂತ್ರಣದಲ್ಲಿ ಇಲ್ಲ, ಬಡ ಜನರಿಗೆ ಶಾಶ್ವತ ಪರಿಹಾರ ನಿಡುವ ಕಾರ್ಯಕ್ರಮವೂ ಸರ್ಕಾರದ ಬಳಿ ಇಲ್ಲ. ಸಿಎಂ ಬಿಎಸ್‌ವೈ ಕೇವಲ ಆಶ್ವಾಸನೆ ನೀಡುತ್ತಿದ್ದಾರೆ. ವೈಮಾನಿಕ ಪರೀಕ್ಷೆ ನಡೆಸಿದರೂ ಜನರ ಸಮಸ್ಯೆಗೆ ಯಾವ ಸಚಿವರು ಸ್ಪಂದಿಸಿಲ್ಲ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರದಿಂದ ಹೆಚ್ಚಿನ ಪರಿಹಾರ ಪಡೆಯುವ ನಿಟ್ಟಿನಲ್ಲಿ ಸರ್ವ ಪಕ್ಷದ ನಿಯೋಗವನ್ನು ಕರೆದುಕೊಂದು ಹೋಗುತ್ತಿಲ್ಲ, ಕೇಂದ್ರದಿಂದ ಪರಿಹಾರ ಕೇಳುವ ಶಕ್ತಿಯನ್ನು ಸರ್ಕಾರ ಕಳೆದಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ