ಆ್ಯಪ್ನಗರ

ರಾಜ್ಯ ಸರ್ಕಾರದ ಅನುಮತಿ ಬಳಿಕವಷ್ಟೇ ಪದಗ್ರಹಣ ಕಾರ್ಯಕ್ರಮ, ಡಿಕೆಶಿ ಸ್ಪಷ್ಟನೆ

ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದ ಬಳಿಕವಷ್ಟೇ ನಡೆಯಲಿರುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಹೇಳಿದ್ದಿಷ್ಟು.

Vijaya Karnataka Web 10 Jun 2020, 2:13 pm
ಬೆಂಗಳೂರು: ಜೂನ್‌ 14 ರಂದು ನಿಗದಿಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಪದಗ್ರಹಣ ಕಾರ್ಯಕ್ರಮವನ್ನು ರಾಜ್ಯ ಸರ್ಕಾರದ ಅನುಮತಿ ಸಿಕ್ಕಿದ ಬಳಕವಷ್ಟೇ ನಡೆಸಲಾಗುವುದು ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಯಾವುದೇ ಕಾರಣಕ್ಕೂ ಕಾರ್ಯಕ್ರಮವನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದರು.
Vijaya Karnataka Web dks


ಇದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಕಾರ್ಯಕ್ರಮ, ಅನುಮತಿಯನ್ನು ಪಡೆದುಕೊಂಡು ಕಾನೂನಿನ ಚೌಕಟ್ಟಿನಲ್ಲೇ ನಡೆಸಲಾಗುವುದು. ನೀವು ಏನೇ ಪ್ರಯತ್ನ ಪಟ್ಟರರೂ ಕಾರ್ಯಕ್ರಮ ನಿಲ್ಲುವುದಿಲ್ಲ ಎಂದು ಬಿ.ಎಸ್ ಯಡಿಯೂರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡ ಅವರು,ಆಶಾಡ ಬರಲಿ ಏನೇ ಬರಲಿ ಸರ್ಕಾರದ ಅನುಮತಿ ನೀಡಿದ ದಿನದಂದು ಕಾರ್ಯಕ್ರಮ ನಡೆಯಲಿದೆ. ನನಗೂ ನಂಬಿಕೆ ಇದೆ. ಆದರೆ ನನ್ನ ಪಾಲಿಗೆ ಪ್ರತಿ ದಿನನೂ ಶುಭ ದಿನ ಎಂದರು.

ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ಸರಕಾರ ಅಡ್ಡಿ ಮಾಡುತ್ತಿಲ್ಲ - ಆರ್‌. ಅಶೋಕ್‌

30 ವರ್ಷಗಳಿಂದ ರಾಜಕಾರಣದಲ್ಲಿ ಇದ್ದೇನೆ, ಈನಿಟ್ಟಿನಲ್ಲಿ ಕಾನೂನಿಗೆ ಗೌರವ ನೀಡುತ್ತೇನೆ. ಕೇಂದ್ರದ ಮಾರ್ಗಸೂಚಿ ಅರಿವಿದ್ದು ನಮಗೂ ಜಾವಾಬ್ದಾರಿ ಇರುವುದರಿಂದ ಕಾನೂನು ಉಲ್ಲಂಘನೆ ಮಾಡುವಿದಿಲ್ಲ ಎಂದರು. ಇನ್ನೆರಡು ದಿನಗಳಲ್ಲಿ ಮತ್ತೆ ದಿನಾಂಕ ನಿಗದಿ ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯುತ್ತೇನೆ. ಅವರು ಯಾವತ್ತು ಅನುಮತಿ ನೀಡುತ್ತಾರೆ ಅಂದು ಕಾರ್ಯಕ್ರಮ ನಡೆಯಲಿದೆ.

ಡಿಕೆಶಿ ಪದಗ್ರಹಣಕ್ಕೆ ಅನುಮತಿ ನಿರಾಕರಣೆ, ಬಿಜೆಪಿ ವಿರುದ್ಧ ‘ಕೈ’ಗೆ ಸಿಕ್ಕಿದ ರಾಜಕೀಯ ಅಸ್ತ್ರ!

ಈ ಕಾರ್ಯಕ್ರಮಕ್ಕಾಗಿ ಹಳ್ಳಿ ಹಳ್ಳಿಗಳಲ್ಲಿ ಎಲ್ಲಾ ತಯಾರಿ ನಡೆಸಿದ್ದರು. ಹಗಲೂ ರಾತ್ರಿ ಕಾರ್ಯಕರ್ತರು ಕೆಲಸ ಮಾಡಿದ್ದರು. ಎಲ್ಲಾ ರೀತಿಯ ತಯಾರಿಗಳನ್ನು ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಎರಡು ಮೂರು ದಿನಗಳಲ್ಲಿ ಸಭೆ ಸೇರಿ ಚರ್ಚೆ ನಡೆಸಿ ಮತ್ತೆ ದಿನಾಂಕ ನಿಗದಿ ಮಾಡುತ್ತೇವೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ