ಆ್ಯಪ್ನಗರ

ಚುನಾವಣೆ ಪಕ್ಷಾತೀತವಾದರೂ, ನಮ್ಮ ಕಾರ್ಯಕರ್ತರಿಗೆ ಅಗತ್ಯ ಸಂದೇಶ ನೀಡುತ್ತೇವೆ: ಡಿ.ಕೆ ಶಿವಕುಮಾರ್

ಗ್ರಾಮಪಂಚಾಯತ್ ಚುನಾವಣೆ ಪಕ್ಷಾತೀತವಾಗಿದ್ದರೂ ನಾವು ನಮ್ಮ ಕಾರ್ಯಕರ್ತರಿಗೆ ಸಂದೇಶ ನೀಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.‌ ಶುಕ್ರವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಬಗ್ಗೆ ಹೇಳಿದ್ದು ಹೀಗೆ.

Vijaya Karnataka Web 4 Dec 2020, 3:16 pm
ಬೆಂಗಳೂರು:'ನಮಗೆ ಪಕ್ಷ, ಸಿದ್ಧಾಂತ ಇದೆ. ನಾವು ನಮ್ಮ ಕೆಲಸ ಮಾಡಬೇಕಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿರುವ ನಾವು ಗ್ರಾಮ ಪಂಚಾಯ್ತಿ ಚುನಾವಣೆ ನಡೆಯಬೇಕು ಅಂತಾ ನ್ಯಾಯಾಲಯದ ಮೆಟ್ಟಿಲೇರಿದ್ದೆವು. ನಮ್ಮ ಅರ್ಜಿಗೆ ನ್ಯಾಯಾಲಯ ಗೌರವಿಸಿ ಚುನಾವಣೆ ಆದೇಶಿಸಿದೆ. ಈ ಚುನಾವಣೆ ಪಕ್ಷಾತೀತವಾಗಿದ್ದರೂ ನಾವು ನಮ್ಮ ಕಾರ್ಯಕರ್ತರಿಗೆ ಸಂದೇಶ ನೀಡುತ್ತೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
Vijaya Karnataka Web DK Shivakumar


ಶುಕ್ರವಾರ ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, 'ಸುರ್ಜೆವಾಲ ಅವರು ನಮ್ಮ ಪ್ರಧಾನ ಕಾರ್ಯದರ್ಶಿಗಳು. ಅವರು 6ರಂದು ಬೆಂಗಳೂರಿಗೆ ಆಗಮಿಸಿ ನಮಗೆ, ನಮ್ಮ ನಾಯಕರಿಗೆ ಮಾರ್ಗದರ್ಶನ ನೀಡಲಿದ್ದಾರೆ' ಎಂದರು. ಡಿಸೆಂಬರ್‌ 22 ರಿಂದ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದೆ. ಎರಡು ಹಂತದಲ್ಲಿ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಸಿದ್ದತೆ ನಡೆಸುತ್ತಿದೆ.

ಬಿಬಿಎಂಪಿ 198 ವಾರ್ಡ್ ಗಳಿಗೆ ಚುನಾವಣೆ ನಡೆಸಬೇಕು, ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ

ಇನ್ನು ಬಸವಕಲ್ಯಾಣ, ಬೆಳಗಾವಿ, ಮಸ್ಕಿ ಉಪಚುನಾವಣೆ ನಡೆಯಲಿದ್ದು ಪಕ್ಷ ಸಂಘಟನೆಯ ನಿಟ್ಟಿನಲ್ಲಿ ಡಿಸೆಂಬರ್ ಆರರಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಜಾಕಿರ್ ಬಂಧನ ಪ್ರತಿಕ್ರಿಯೆಗೆ ನಕಾರ

'ಡಿ.ಜೆ ಹಳ್ಳಿ ಪ್ರಕರಣದಲ್ಲಿ ಜಾಕಿರ್ ಅವರು ಬಂಧನದ ವಿಚಾರವನ್ನು ಪತ್ರಿಕೆಗಳಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ