ಆ್ಯಪ್ನಗರ

ರಾಜಕಾರಣಿಗಳಿಗೆ ತಾಳ್ಮೆ ಅಗತ್ಯ, ಮಾಧುಸ್ವಾಮಿ ವರ್ತನೆಗೆ ಡಿಕೆಶಿ ಗರಂ

ಜನಪ್ರತಿನಿಧಿಗಳಾದವರು ತಾಳ್ಮೆಯನ್ನು ಕಳೆದುಕೊಳ್ಳಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಜೆ.ಸಿ ಮಾಧುಸ್ವಾಮಿ ಮಹಿಳೆಯೊಬ್ಬರಿಗೆ ರಾಸ್ಕಲ್‌ ಎಂದು ನಿಂದಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vijaya Karnataka Web 21 May 2020, 1:56 pm
ಬೆಂಗಳೂರು: ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಗೆ ರಾಸ್ಕಲ್ ಎಂದ ಸಚಿವ ಜೆ.ಸಿ ಮಾಧುಸ್ವಾಮಿ ವರ್ತನೆಗೆ ಕೆಪಿಸಿಸಿ ಆಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಧುಸ್ವಾಮಿ ಹಿರಿಯ ಸಚಿವರಾಗಿ ಹೀಗೆ ವರ್ತಿಸಬಾರದು ಎಂದರು.
Vijaya Karnataka Web dk 3


ಜನಪ್ರತಿನಿಧಿಗಳ ಬಳಿ ಹಾಗೂ ಅಧಿಕಾರಿಗಳ ಬಳಿ ಜನರು ಕಷ್ಟ ಹೇಳಿಕೊಳ್ಳಲು ಬರುತ್ತಾರೆ. ಆ ಸಂದರ್ಭದಲ್ಲಿ ನಾವು ಅವರ ಜೊತೆಗೆ ಹೇಗೆ ನಡೆದುಕೊಳ್ಳಬೇಕು ಎಂದು ಪ್ರಮುಖವಾಗುತ್ತದೆ. ಜನರ ನೋವನ್ನು ತಾಳ್ಮೆಯಿಂದ ಕೇಳಬೇಕು.

ರಾಜೀನಾಮೆ ನೀಡಲು ಸಿದ್ದರಾಮಯ್ಯ ನನ್ನನ್ನು ಸಚಿವರನ್ನಾಗಿ ಮಾಡಿಲ್ಲ! ವರ್ತನೆಯನ್ನು ಸಮರ್ಥಿಸಿಕೊಂಡ ಮಾಧುಸ್ವಾಮಿ

ಕೆಲವು ಸಂದರ್ಭದಲ್ಲಿ ಸಹನೆ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾನ ಆಗುವುದು ಸಹಜ. ಆದರೆ ಅದಕ್ಕೆ ಅವಕಾಶ ಕಲ್ಪಿಸಿಕೊಡಬಾರದು ಎಂದರು. ಮಾಧುಸ್ವಾಮಿ ವರ್ತನೆಯನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದು ರಾಜೀನಾಮೆಗೆ ಒತ್ತಾಯಿಸಿದ್ದಾರೆ. ನಾನು ಕೂಡಾ ಅದಕ್ಕೆ ಸಹಮತ ವ್ಯಕ್ತಪಡಿಸುತ್ತೇನೆ ಎಂದರು.

ಕೋಲಾರದಲ್ಲಿ ಒತ್ತುವರಿ ವಿಚಾರವಾಗಿ ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯೊಬ್ಬರಿಗೆ ಮಾಧುಸ್ವಾಮಿ ತಾಳ್ಮೆ ಕಳೆದುಕೊಂಡು ರಾಸ್ಕಲ್ ಎಂದು ಬೈದಿದ್ದರು. ಸಚಿವರ ಈ ವರ್ತನೆಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರು ಕೂಡ ಮಾಧುಸ್ವಾಮಿ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ